ಪ್ರತಿಭಟನೆಯಲ್ಲಿ ಡಿಎಂಕೆ ನಾಯಕರು 
ದೇಶ

ಬಜೆಟ್‌ನಲ್ಲಿ ತಮಿಳುನಾಡು ನಿರ್ಲಕ್ಷ್ಯ: ಕೇಂದ್ರದ ವಿರುದ್ಧ ಡಿಎಂಕೆ ಪ್ರತಿಭಟನೆ

'ನೀತಿ ಆಯೋಗ ಸಭೆಯಲ್ಲಿ ಭಾಗವಹಿಸಬೇಕಾಗಿತ್ತು. ಆದರೆ, ತಮಿಳಿನ ಬಗೆಗಿನ ತಾರತಮ್ಯ ಧೋರಣೆಯಿಂದಾಗಿ ನ್ಯಾಯವನ್ನು ಕೋರಿ ಜನರ ಮುಂದೆ ಬಂದಿದ್ದೇನೆ'

ಚೆನ್ನೈ: 2024ರ ಕೇಂದ್ರ ಬಜೆಟ್‌ನಲ್ಲಿ ರಾಜ್ಯವನ್ನು ನಿರ್ಲಕ್ಷಿಸಲಾಗಿದೆ ಎಂದು ಆರೋಪಿಸಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಶನಿವಾರ ತಮಿಳುನಾಡಿನಾದ್ಯಂತ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿತು. ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯ 9 ನೇ NITI ಆಯೋಗದ ಆಡಳಿತ ಮಂಡಳಿ ಸಭೆ ಆರಂಭಕ್ಕೂ ಮುನ್ನ ಪ್ರತಿಭಟನೆ ನಡೆಯಿತು.

ಇದಕ್ಕೂ ಮುನ್ನಾ ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್, ಕೇಂದ್ರ ಬಜೆಟ್ ಕುರಿತು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಬಿಜೆಪಿಯನ್ನು ಬಹಿಷ್ಕರಿಸಿದ ರಾಜ್ಯಗಳು ಮತ್ತು ಜನರ ವಿರುದ್ಧ “ಸೇಡಿನ ಕ್ರಮ” ದಂತೆ ಬಜೆಟ್ ತೋರುತ್ತಿದೆ ಎಂದರು.

'ನೀತಿ ಆಯೋಗ ಸಭೆಯಲ್ಲಿ ಭಾಗವಹಿಸಬೇಕಾಗಿತ್ತು. ಆದರೆ, ತಮಿಳಿನ ಬಗೆಗಿನ ತಾರತಮ್ಯ ಧೋರಣೆಯಿಂದಾಗಿ ನ್ಯಾಯವನ್ನು ಕೋರಿ ಜನರ ಮುಂದೆ ಬಂದಿದ್ದೇನೆ. "ತಮಿಳುನಾಡಿನ ಸರ್ಕಾರವು ಕಳೆದ ಮೂರು ವರ್ಷಗಳಿಂದ ಜಾರಿಗೆ ತಂದಿರುವ ಯೋಜನೆಗಳ ಪ್ರಯೋಜನಗಳು ನೇರವಾಗಿ ಪ್ರತಿ ಕುಟುಂಬಕ್ಕೂ-ಪ್ರತಿ ನಾಗರಿಕರಿಗೂ ತಲುಪುತ್ತಿದೆ. ಇದು ನಮ್ಮ ಸರ್ಕಾರದ ಧ್ಯೇಯವಾಕ್ಯವಾಗಿದೆ, ಆದರೆ ಕೇಂದ್ರ ಸರ್ಕಾರವು ನಮ್ಮ ಪ್ರಗತಿಪರ ಚಿಂತನೆಗಳಿಗೆ ವಿರುದ್ಧವಾದ ಕಾರ್ಯಗಳಲ್ಲಿ ತೊಡಗಿಸಿಕೊಂಡಿದೆ ಎಂದು ಆರೋಪಿಸಿದರು.

ಕೇಂದ್ರ ಸರ್ಕಾರ ತಮಿಳುನಾಡನ್ನು ಕಡೆಗಣಿಸುವುದನ್ನು ಮುಂದುವರೆಸಿದೆ.ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ಮಂಡಿಸಿದ 2024–25ರ ಕೇಂದ್ರ ಬಜೆಟ್ ನಲ್ಲಿ ಬಿಹಾರ ಮತ್ತು ಆಂಧ್ರಪ್ರದೇಶಕ್ಕೆ ಮೂಲಸೌಕರ್ಯದಲ್ಲಿ ಉತ್ತೇಜನ ಸೇರಿದಂತೆ ಪ್ರಮುಖ ಘೋಷಣೆಗಳನ್ನು ಮಾಡಿದರು. ನೀತಿ ಆಯೋಗದ ಸಭೆಯನ್ನು ಬಹಿಷ್ಕರಿಸುವುದಾಗಿ ಘೋಷಿಸಿದರು ಸಿಎಂ ಸ್ಟಾಲಿನ್ ಗುರುವಾರ ಹೇಳಿದ್ದರು. ಇದರ ಬೆನ್ನಲ್ಲೇ ಹಿಮಾಚಲ ಪ್ರದೇಶದ ಸುಖವಿಂದರ್ ಸಿಂಗ್ ಸುಖು, ಕರ್ನಾಟಕದ ಸಿದ್ದರಾಮಯ್ಯ ಮತ್ತು ತೆಲಂಗಾಣದ ರೇವಂತ್ ರೆಡ್ಡಿ ಸೇರಿದಂತೆ ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಕೂಡ ಸಭೆಯಿಂದ ಹೊರಗುಳಿಯಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT