ಜೈರಾಮ್ ರಮೇಶ್ online desk
ದೇಶ

ನೀತಿ ಆಯೋಗದ ಸಭೆಯಲ್ಲಿ ಮಮತಾರನ್ನು ನಡೆಸಿಕೊಂಡ ರೀತಿ ಒಪ್ಪಿಕೊಳ್ಳಲು ಸಾಧ್ಯವಿಲ್ಲ: ಕಾಂಗ್ರೆಸ್

ನೀತಿ ಆಯೋಗವು 10 ವರ್ಷಗಳ ಹಿಂದೆ ಸ್ಥಾಪನೆಯಾದಾಗಿನಿಂದ ಸಭೆಯ ಅಧ್ಯಕ್ಷತೆ ವಹಿಸುವ ಪ್ರಧಾನಿ ನರೇಂದ್ರ ಮೋದಿಯವರ "ತಾಳಕ್ಕೆ ತಕ್ಕಂತೆ ಕುಣಿಯುತ್ತಿದೆ".

ನವದೆಹಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ನೀತಿ ಆಯೋಗದ ಸಭೆಯಲ್ಲಿ ನಡೆಸಿಕೊಂಡ ರೀತಿಯನ್ನು "ಒಪ್ಪಿಕೊಳ್ಳಲು ಸಾಧ್ಯವಿಲ್ಲ" ಎಂದು ಕಾಂಗ್ರೆಸ್ ಶನಿವಾರ ಹೇಳಿದೆ.

ಇಂದು ದೆಹಲಿಯಲ್ಲಿ ನಡೆದ NITI ಆಯೋಗದ 9ನೇ ಆಡಳಿತ ಮಂಡಳಿ ಸಭೆಯಲ್ಲಿ ತಾವು ಮಾತನಾಡುತ್ತಿದ್ದ ವೇಳೆ ತಮ್ಮ ಮೈಕ್ ಸ್ವಿಚ್ ಆಫ್ ಮಾಡಲಾಗಿದೆ ಎಂದು ಆರೋಪಿಸಿ ಮಮತಾ ಬ್ಯಾನರ್ಜಿ ಸಭೆಯಿಂದ ಅರ್ಧಕ್ಕೆ ಹೊರನಡೆದ ನಂತರ ಪ್ರತಿಪಕ್ಷ ಕಾಂಗ್ರೆಸ್ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ.

ನೀತಿ ಆಯೋಗವು 10 ವರ್ಷಗಳ ಹಿಂದೆ ಸ್ಥಾಪನೆಯಾದಾಗಿನಿಂದ ಸಭೆಯ ಅಧ್ಯಕ್ಷತೆ ವಹಿಸುವ ಪ್ರಧಾನಿ ನರೇಂದ್ರ ಮೋದಿಯವರ "ತಾಳಕ್ಕೆ ತಕ್ಕಂತೆ ಕುಣಿಯುತ್ತಿದೆ" ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಕಿಡಿ ಕಾರಿದ್ದಾರೆ.

ನೀತಿ ಆಯೋಗವು ಪಕ್ಷಪಾತದಿಂದ ಕೂಡಿದೆ ಮತ್ತು ವೃತ್ತಿಪರತೆಯಿಂದ ಮುಕ್ತವಾಗಿದೆ. ಸಭೆಯಲ್ಲಿ ರಾಜ್ಯಗಳ ನಡುವೆ ಸಮನ್ವಯತೆ ಸಾಧಿಸುವ ಯಾವುದೇ ಪ್ರಯತ್ನಗಳು ನಡೆದಿಲ್ಲ ಎಂದು ಜೈರಾಮ್ ರಮೇಶ್ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಮಮತಾ ಬ್ಯಾನರ್ಜಿ ಅವರ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಮಮತಾ ಬ್ಯಾನರ್ಜಿ ಅವರು ತಮ್ಮ ಮೈಕ್ ಸ್ವಿಚ್ ಆಫ್ ಮಾಡಲಾಗಿದೆ ಎಂದು ಹೇಳಿರುವುದು "ಸಂಪೂರ್ಣ ಸುಳ್ಳು" ಮತ್ತು ಸಭೆಯಲ್ಲಿದ್ದ ಪ್ರತಿಯೊಬ್ಬ ಮುಖ್ಯಮಂತ್ರಿಗಳಿಗೂ "ಮಾತನಾಡಲು ಸರಿಯಾದ ಸಮಯವನ್ನು ನಿಗದಿಪಡಿಸಲಾಗಿದೆ" ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

SCROLL FOR NEXT