ಅಮರನಾಥ ಯಾತ್ರೆ 
ದೇಶ

ಶ್ರೀನಗರ: ಅಮರನಾಥ ಯಾತ್ರೆಗೆ ತೆರಳಿದ ಮತ್ತೊಂದು ಗುಂಪು

ಈ ವರ್ಷ, ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿಗಳ ಸಂಖ್ಯೆಯಲ್ಲಿ ಗಮನಾರ್ಹ ಹೆಚ್ಚಳದ ನಡುವೆ ಅಮರನಾಥ ಯಾತ್ರೆ ನಡೆಯುತ್ತಿದೆ. ಅಮರನಾಥ ಪುಣ್ಯಕ್ಷೇತ್ರ ಮಂಡಳಿಯು ಅಮರನಾಥ ಯಾತ್ರೆಯನ್ನು ಆಯೋಜಿಸುತ್ತದೆ.

ಶ್ರೀನಗರ: ಬಿಗಿ ಭದ್ರತೆಯ ನಡುವೆ ದಕ್ಷಿಣ ಕಾಶ್ಮೀರ ಹಿಮಾಲಯದಲ್ಲಿರುವ ಅಮರನಾಥ ಗುಹಾ ದೇಗುಲಕ್ಕೆ ಭಾನುವಾರ ಇಲ್ಲಿನ ಪಂಥಾಚೌಕ್‌ನಿಂದ ಮತ್ತೊಂದು ಭಕ್ತರ ತಂಡ ತೆರಳಿತು. ಯಾತ್ರಾರ್ಥಿಗಳು ಬಾಲ್ಟಾಲ್ ಮತ್ತು ಪಹಲ್ಗಾಮ್‌ನ ಮೂಲ ಶಿಬಿರಗಳ ಕಡೆಗೆ ಪ್ರಯಾಣಿಸಿದ್ದಾರೆ. ಅಲ್ಲಿಂದ ಅವರು ಹಿಮಲಿಂಗದ ದರ್ಶನ ಪಡೆಯಲು ಗುಹಾ ದೇವಾಲಯಕ್ಕೆ ತೆರಳುತ್ತಾರೆ.

ಯಾತ್ರೆಗಾಗಿ ಉತ್ತಮ ರೀತಿಯ ವ್ಯವಸ್ಥೆ ಮಾಡಲಾಗಿದೆ. ನಾನು ಪ್ರತಿಯೊಬ್ಬರ ಸುರಕ್ಷತೆ ಮತ್ತು ದೇಶದ ಪ್ರಗತಿಗಾಗಿ ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಉತ್ತರ ಪ್ರದೇಶದ ಯಾತ್ರಾರ್ಥಿ ಬಿನಯ್ ಕುಮಾರ್ಸಿ ಹೇಳಿದರು. ಭದ್ರತಾ ವ್ಯವಸ್ಥೆಗಳು ಸಹ ಚೆನ್ನಾಗಿವೆ. ಇಲ್ಲಿಗೆ ಬಂದಿರುವುದು ನನಗೆ ತುಂಬಾ ಸಂತೋಷವಾಗಿದೆ. ಎಲ್ಲರ ಸುರಕ್ಷತೆಗಾಗಿ ಪ್ರಾರ್ಥಿಸುತ್ತೇನೆ" ಎಂದು ಛತ್ತೀಸ್‌ಗಢದ ನಿವಾಸಿ ಕಮಲ್ ನಿರ್ಮಾಲ್ಕರ್ ಹೇಳಿದರು.

ಈ ವರ್ಷ, ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿಗಳ ಸಂಖ್ಯೆಯಲ್ಲಿ ಗಮನಾರ್ಹ ಹೆಚ್ಚಳದ ನಡುವೆ ಅಮರನಾಥ ಯಾತ್ರೆ ನಡೆಯುತ್ತಿದೆ. ಅಮರನಾಥ ಪುಣ್ಯಕ್ಷೇತ್ರ ಮಂಡಳಿಯು ಅಮರನಾಥ ಯಾತ್ರೆಯನ್ನು ಆಯೋಜಿಸುತ್ತದೆ. ಕಾಶ್ಮೀರದ ಬಾಲ್ಟಾಲ್ ಮತ್ತು ಪಹಲ್ಗಾಮ್ ಮೂಲ ಶಿಬಿರಗಳಿಂದ ಜೂನ್ 29 ರಂದು ಔಪಚಾರಿಕವಾಗಿ ಪ್ರಾರಂಭವಾದ 52 ದಿನಗಳ ಯಾತ್ರೆಯು ಆಗಸ್ಟ್ 19 ರಂದು ಮುಕ್ತಾಯಗೊಳ್ಳಲಿದೆ. ಶಿವನ ಭಕ್ತರು ದಕ್ಷಿಣ ಕಾಶ್ಮೀರ ಹಿಮಾಲಯದಲ್ಲಿರುವ ಪವಿತ್ರ ಗುಹೆಗೆ ವಾರ್ಷಿಕ ತೀರ್ಥಯಾತ್ರೆಯನ್ನು ಕೈಗೊಳ್ಳುತ್ತಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಚೇರಿಯಲ್ಲಿ ಐಟಿ ಶೋಧ ನಡೆಯುತ್ತಿದ್ದಾಗಲೇ ಶೂಟ್ ಮಾಡಿಕೊಂಡ ಸಿ.ಜೆ ರಾಯ್; ಪೊಲೀಸ್ ಆಯುಕ್ತರು ಹೇಳಿದ್ದೇನು?

ಉಪ ಮುಖ್ಯಮಂತ್ರಿ ಹುದ್ದೆಯ ಬಗ್ಗೆ ಎನ್‌ಸಿಪಿ ನಿರ್ಧಾರವನ್ನು ಬೆಂಬಲಿಸುತ್ತೇವೆ: ಫಡ್ನವೀಸ್

12 ರೋಲ್ಸ್ ರಾಯ್ಸ್‌ ಸೇರಿ ಹಲವು ಐಷಾರಾಮಿ ಕಾರು, ಸಾವಿರಾರು ಕೋಟಿ ಒಡೆಯ ಸಿಜೆ ರಾಯ್ ಆತ್ಮಹತ್ಯೆ ಮಾಡಿಕೊಂಡಿದ್ದೇಕೆ?

ಮಹಾರಾಷ್ಟ್ರದ ನೂತನ ಉಪ ಮುಖ್ಯಮಂತ್ರಿಯಾಗಿ ಸುನೇತ್ರ ಪವಾರ್ ನಾಳೆ ಪ್ರಮಾಣ ವಚನ ಸ್ವೀಕಾರ: ಭುಜಬಲ್

BIFF ನಲ್ಲಿ ಪ್ಯಾಲೆಸ್ತೀನ್ ಚಿತ್ರಗಳ ಪ್ರದರ್ಶನಕ್ಕೆ ಪ್ರಕಾಶ್ ರಾಜ್ ಒತ್ತಾಯ: ಬಿಜೆಪಿ ವಾಗ್ದಾಳಿ!

SCROLL FOR NEXT