ದೇಶ

Delhi flood: ಐಎಎಸ್ ಕೋಚಿಂಗ್ ಸೆಂಟರ್ ನ ಮಾಲೀಕ, ಸಂಯೋಜಕ ಬಂಧನ, ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮಾರಣಾಂತಿಕ ಘಟನೆಗೆ ಸಂಬಂಧಿಸಿದಂತೆ ಭಾನುವಾರ ದೆಹಲಿ ಪೊಲೀಸರು ಕೋಚಿಂಗ್ ಇನ್‌ಸ್ಟಿಟ್ಯೂಟ್‌ನ ಮಾಲೀಕ ಹಾಗೂ ಸಂಯೋಜಕರನ್ನು ಬಂಧಿಸಿದ್ದಾರೆ. ಅವರ ವಿರುದ್ಧ ಅಪರಾಧಿ ನರಹತ್ಯೆ ಸೇರಿದಂತೆ ಇತರ ಆರೋಪಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ನವದೆಹಲಿ: ಪಶ್ಚಿಮ ದೆಹಲಿಯಲ್ಲಿ ಪ್ರವಾಹಕ್ಕೆ ಸಿಲುಕಿದ ನೆಲಮಾಳಿಗೆಯಲ್ಲಿ ಮೂವರು ನಾಗರಿಕ ಸೇವಾ ಆಕಾಂಕ್ಷಿ(IAS aspirants) ಮೃತಪಟ್ಟ ಘಟನೆ ಬಳಿಕ ಭಾನುವಾರ ಕೋಚಿಂಗ್ ಸೆಂಟರ್ ಹೊರಗೆ ಭಾರೀ ಪ್ರತಿಭಟನೆಗೆ ಇಳಿದಿದ್ದಾರೆ.

ಏಳು ಗಂಟೆಗಳ ರಕ್ಷಣಾ ಪ್ರಯತ್ನಗಳ ನಂತರ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ದೆಹಲಿಯ ಓಲ್ಡ್ ರಾಜಿಂದರ್ ನಗರ ಪ್ರದೇಶದ ಕೋಚಿಂಗ್ ಸೆಂಟರ್‌ನಲ್ಲಿ ತನ್ನ ಹುಡುಕಾಟವನ್ನು ಮುಕ್ತಾಯಗೊಳಿಸಿದೆ, ಅಲ್ಲಿ ಪ್ರವಾಹದಿಂದಾಗಿ ಮೂವರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಮಾರಣಾಂತಿಕ ಘಟನೆಗೆ ಸಂಬಂಧಿಸಿದಂತೆ ಭಾನುವಾರ ದೆಹಲಿ ಪೊಲೀಸರು ಕೋಚಿಂಗ್ ಇನ್‌ಸ್ಟಿಟ್ಯೂಟ್‌ನ ಮಾಲೀಕ ಹಾಗೂ ಸಂಯೋಜಕರನ್ನು ಬಂಧಿಸಿದ್ದಾರೆ. ಅವರ ವಿರುದ್ಧ ಅಪರಾಧಿ ನರಹತ್ಯೆ ಸೇರಿದಂತೆ ಇತರ ಆರೋಪಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದುವರೆಗೆ, ನಾವು ಇಬ್ಬರನ್ನು ಬಂಧಿಸಿದ್ದೇವೆ-ಮಾಲೀಕ ಅಭಿಷೇಕ್ ಗುಪ್ತಾ ಮತ್ತು ಕೋಚಿಂಗ್ ಸೆಂಟರ್‌ನ ಸಂಯೋಜಕ ದೇಶಪಾಲ್ ಸಿಂಗ್ ಬಂಧಿತರಾಗಿದ್ದಾರೆ ಎಂದು ಉಪ ಪೊಲೀಸ್ ಆಯುಕ್ತ ಎಂ ಹರ್ಷ ವರ್ಧನ್ ಹೇಳಿದ್ದಾರೆ.

ಶೋಧನೆ ಮತ್ತು ರಕ್ಷಣಾ ಕಾರ್ಯಾಚರಣೆ ಕೊನೆಗೊಂಡಿದೆ. ಒಟ್ಟು ಮೂರು ಶವಗಳನ್ನು ನೆಲಮಾಳಿಗೆಯಿಂದ ಹೊರತೆಗೆಯಲಾಗಿದೆ. ಮೃತರನ್ನು ಗುರುತಿಸಿ ಕುಟುಂಬಸ್ಥರಿಗೆ ತಿಳಿಸಿದ್ದೇವೆ ಎಂದು ದೆಹಲಿ ಪಶ್ಚಿಮ ವಲಯ ಡಿಸಿಪಿ ತಿಳಿಸಿದ್ದಾರೆ.

ನೆಲಮಾಳಿಗೆಯಲ್ಲಿ ನಡೆಯುತ್ತಿರುವ ವಾಣಿಜ್ಯ ಚಟುವಟಿಕೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದೆಹಲಿ ಮೇಯರ್ ಶೆಲ್ಲಿ ಒಬೆರಾಯ್ ಭಾನುವಾರ ಎಂಸಿಡಿ ಆಯುಕ್ತರಿಗೆ ಸೂಚಿಸಿದ್ದಾರೆ. ದುರಂತ ಘಟನೆಗೆ ಯಾವುದೇ ಎಂಸಿಡಿ ಅಧಿಕಾರಿಗಳು ಹೊಣೆಗಾರರಾಗಿದ್ದರೆ ಗುರುತಿಸಲು ತನಿಖೆ ನಡೆಸುವಂತೆ ಅವರು ಕರೆ ನೀಡಿದರು.

ಎನ್‌ಡಿಆರ್‌ಎಫ್, ಸ್ಥಳೀಯ ಪೊಲೀಸ್ ಮತ್ತು ಅಗ್ನಿಶಾಮಕ ಇಲಾಖೆಯ ರಕ್ಷಣಾ ಕಾರ್ಯಾಚರಣೆಯ ನಂತರ ಕೋಚಿಂಗ್ ಸಂಸ್ಥೆಯಿಂದ ಇಬ್ಬರು ವಿದ್ಯಾರ್ಥಿನಿಯರು ಮತ್ತು ಓರ್ವ ವಿದ್ಯಾರ್ಥಿಯ ಶವಗಳನ್ನು ಹೊರತೆಗೆಯಲಾಯಿತು.

ಮೃತರನ್ನು ಉತ್ತರ ಪ್ರದೇಶದ ಅಂಬೇಡ್ಕರ್ ನಗರದ ಶ್ರೇಯಾ ಯಾದವ್, ತೆಲಂಗಾಣದ ತಾನ್ಯಾ ಸೋನಿ ಮತ್ತು ಕೇರಳದ ಎರ್ನಾಕುಲಂ ಮೂಲದ ನವೀನ್ ಡಾಲ್ವಿನ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!