ರಾಹುಲ್ ಗಾಂಧಿ 
ದೇಶ

ಅಸುರಕ್ಷಿತ ನಿರ್ಮಾಣಕ್ಕೆ ಜನರು ಬೆಲೆ ತೆರುತ್ತಿದ್ದಾರೆ: ಕೋಚಿಂಗ್ ಸೆಂಟರ್ ಘಟನೆ ಕುರಿತು ರಾಹುಲ್!

ಭಾರೀ ಮಳೆಯ ನಂತರ ಮಧ್ಯ ದೆಹಲಿಯ ಓಲ್ಡ್ ರಾಜಿಂದರ್ ನಗರ ಪ್ರದೇಶದಲ್ಲಿ ಕೋಚಿಂಗ್ ಸೆಂಟರ್ ಇರುವ ಕಟ್ಟಡದ ನೆಲಮಾಳಿಗೆಯು ಜಲಾವೃತಗೊಂಡ ನಂತರ ಮೂವರು ನಾಗರಿಕ ಸೇವಾ ಆಕಾಂಕ್ಷಿಗಳು ಸಾವನ್ನಪ್ಪಿದ್ದಾರೆ.

ನವದೆಹಲಿ: ರಾಷ್ಟ್ರ ರಾಜಧಾನಿಯ ಕಟ್ಟಡವೊಂದರ ನೆಲಮಾಳಿಗೆಯಲ್ಲಿ ನೀರು ನುಗ್ಗಿ ಮೂವರು ಐಎಎಸ್ ಆಕಾಂಕ್ಷಿಗಳ ಸಾವಿಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಭಾನುವಾರ ಸಂತಾಪ ಸೂಚಿಸಿದ್ದು ಪ್ರತಿ ಹಂತದಲ್ಲಿ ಅಸುರಕ್ಷಿತ ನಿರ್ಮಾಣ, ಕಳಪೆ ನಗರ ಯೋಜನೆ ಮತ್ತು ಸಂಸ್ಥೆಗಳ ಬೇಜವಾಬ್ದಾರಿಗೆ ಸಾಮಾನ್ಯ ಜನರು ಬೆಲೆ ತೆರುತ್ತಿದ್ದಾರೆ ಎಂದು ಹೇಳಿದ್ದಾರೆ.

ಭಾರೀ ಮಳೆಯ ನಂತರ ಮಧ್ಯ ದೆಹಲಿಯ ಓಲ್ಡ್ ರಾಜಿಂದರ್ ನಗರ ಪ್ರದೇಶದಲ್ಲಿ ಕೋಚಿಂಗ್ ಸೆಂಟರ್ ಇರುವ ಕಟ್ಟಡದ ನೆಲಮಾಳಿಗೆಯು ಜಲಾವೃತಗೊಂಡ ನಂತರ ಮೂವರು ನಾಗರಿಕ ಸೇವಾ ಆಕಾಂಕ್ಷಿಗಳು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, ಕಟ್ಟಡದ ನೆಲಮಾಳಿಗೆಯಲ್ಲಿ ನೀರು ನಿಂತಿದ್ದರಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದ ವಿದ್ಯಾರ್ಥಿಗಳ ಸಾವು ಅತ್ಯಂತ ದುರದೃಷ್ಟಕರವಾಗಿದೆ. ಕೆಲ ದಿನಗಳ ಹಿಂದೆ ಮಳೆಗಾಲದಲ್ಲಿ ವಿದ್ಯುತ್ ಸ್ಪರ್ಶವಾಗಿ ವಿದ್ಯಾರ್ಥಿಯೊಬ್ಬ ಮೃತಪಟ್ಟಿದ್ದ ಎಂದು ಫೋಸ್ಟ್ ಮಾಡಿದ್ದಾರೆ.

'ಮೂಲಸೌಕರ್ಯಗಳ ಕೊರತೆ, ಕುಸಿತ ವ್ಯವಸ್ಥೆಯ ಸಂಯೋಜಿತ ವ್ಯವಸ್ಥೆಯಾಗಿದೆ. ಸಾಮಾನ್ಯ ನಾಗರಿಕನು ತನ್ನ ಜೀವನವನ್ನು ಕಳೆದುಕೊಳ್ಳುವ ಮೂಲಕ ಪ್ರತಿ ಹಂತದಲ್ಲೂ ಅಸುರಕ್ಷಿತ ನಿರ್ಮಾಣ, ಕಳಪೆ ನಗರ ಯೋಜನೆ ಮತ್ತು ಸಂಸ್ಥೆಗಳ ಬೇಜವಾಬ್ದಾರಿಯ ಬೆಲೆಯನ್ನು ಪಾವತಿಸುತ್ತಿದ್ದಾನೆ' ಸುರಕ್ಷಿತ ಮತ್ತು ನೆಮ್ಮದಿಯ ಜೀವನ ಪ್ರತಿಯೊಬ್ಬ ನಾಗರಿಕನ ಹಕ್ಕು ಮತ್ತು ಸರ್ಕಾರಗಳ ಜವಾಬ್ದಾರಿ ಎಂದು ಗಾಂಧಿ ಪ್ರತಿಪಾದಿಸಿದ್ದಾರೆ.

ಭಾರೀ ಮಳೆಯ ನಂತರ ಪ್ರವಾಹಕ್ಕೆ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ ಕೋಚಿಂಗ್ ಸೆಂಟರ್‌ನ ಮಾಲೀಕರು ಮತ್ತು ಸಂಯೋಜಕರನ್ನು ಭಾನುವಾರ ದೆಹಲಿ ಪೊಲೀಸರು ಬಂಧಿಸಿದ್ದು, ತನಿಖೆ ಆರಂಭಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!