ಮನೀಶ್ ಸಿಸೋಡಿಯಾ
ದೇಶ

ಮನೀಷ್ ಸಿಸೋಡಿಯಾ ಜಾಮೀನು ಅರ್ಜಿ: ನಾಳೆ ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ

ಕಳೆದ ವಿಚಾರಣೆಯಲ್ಲಿ ಸಿಸೋಡಿಯಾ ಅವರ ಜಾಮೀನು ಅರ್ಜಿಗಳಿಗೆ ತಮ್ಮ ಉತ್ತರ ಸಲ್ಲಿಸುವಂತೆ ಸಿಬಿಐ ಮತ್ತು ಇಡಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿತ್ತು. ಜುಲೈ 29 ರಂದು ಉತ್ತರ ನೀಡುವಂತೆ ಸೂಚಿಸಲಾಗಿತ್ತು.

ನವದೆಹಲಿ: ಮದ್ಯ ನೀತಿ ಪ್ರಕರಣದಲ್ಲಿ ಎಎಪಿ ನಾಯಕ ಮನೀಶ್ ಸಿಸೋಡಿಯಾ ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆ ಸುಪ್ರೀಂ ಕೋರ್ಟ್ ನಲ್ಲಿ ನಾಳೆ ನಡೆಯಲಿದೆ. ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ ಮತ್ತು ಕೆವಿ ವಿಶ್ವನಾಥನ್ ಅವರ ಪೀಠವು ಜುಲೈ 29 ರಂದು ಪ್ರಕರಣದ ವಿಚಾರಣೆಯನ್ನು ಪುನರಾರಂಭಿಸಲಿದೆ ಎಂದು ಉನ್ನತ ನ್ಯಾಯಾಲಯದ ವೆಬ್ ಸೈಟ್ ನಲ್ಲಿ ಮಾಹಿತಿ ನೀಡಲಾಗಿದೆ.

ಕಳೆದ ವಿಚಾರಣೆಯಲ್ಲಿ ಸಿಸೋಡಿಯಾ ಅವರ ಜಾಮೀನು ಅರ್ಜಿಗಳಿಗೆ ತಮ್ಮ ಉತ್ತರ ಸಲ್ಲಿಸುವಂತೆ ಸಿಬಿಐ ಮತ್ತು ಇಡಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿತ್ತು. ಜುಲೈ 29 ರಂದು ಉತ್ತರ ನೀಡುವಂತೆ ಸೂಚಿಸಲಾಗಿತ್ತು.

ಹಿರಿಯ ಎಎಪಿ ನಾಯಕನನ್ನು 16 ತಿಂಗಳ ಕಾಲ ಜೈಲಿನಲ್ಲಿ ಇರಿಸಲಾಗಿದೆ ಮತ್ತು ಅಕ್ಟೋಬರ್ 2023 ರಲ್ಲಿನ ವಿಚಾರಣೆ ಅದೇ ಹಂತದಲ್ಲಿದೆ ಎಂದು ಸಿಸೋಡಿಯಾ ಅವರ ವಕೀಲರು ವಾದಿಸಿದರು.

ಕಳೆದ ವರ್ಷ ಅಕ್ಟೋಬರ್ 30 ರಂದು ನೀಡಿದ ತೀರ್ಪಿನಲ್ಲಿ, ಸಿಸೋಡಿಯಾಗೆ ಸುಪ್ರೀಂಕೋರ್ಟ್ ಜಾಮೀನು ನಿರಾಕರಿಸಿತ್ತು. ಆದರೆ ಮುಂದಿನ ಮೂರು ತಿಂಗಳಲ್ಲಿ ವಿಚಾರಣೆ ನಿಧಾನವಾಗಿ ಮುಂದುವರಿದರೆ, ಅವರು ಹೊಸದಾಗಿ ಜಾಮೀನಿಗೆ ಅರ್ಜಿ ಸಲ್ಲಿಸಬಹುದು ಎಂದು ಹೇಳಿತ್ತು.

ಏಪ್ರಿಲ್ 30 ರಂದು ಎರಡನೇ ಬಾರಿಗೆ ಸಾಮಾನ್ಯ ಜಾಮೀನು ಕೋರಿದ್ದ ಸಿಸೋಡಿಯಾಗೆ ಜಾಮೀನು ನೀಡಲು ರೋಸ್ ಅವೆನ್ಯೂ ನ್ಯಾಯಾಲಯದ ವಿಶೇಷ ನ್ಯಾಯಾಧೀಶ ಕಾವೇರಿ ಬವೇಜಾ ನಿರಾಕರಿಸಿದ್ದರು.ತರುವಾಯ, ದೆಹಲಿ ಹೈಕೋರ್ಟ್ ಸಿಸೋಡಿಯಾ ಅವರಿಗೆ ಜಾಮೀನು ನಿರಾಕರಿಸಿತ್ತು. ಇದನ್ನು ಪ್ರಶ್ನಿಸಿ ಮಾಜಿ ಉಪಮುಖ್ಯಮಂತ್ರಿ ಅವರು ಸುಪ್ರೀಂ ಕೋರ್ಟ್‌ಗೆ ವಿಶೇಷ ರಜೆ ಅರ್ಜಿ ಸಲ್ಲಿಸಿದ್ದರು.

ಮದ್ಯ ನೀತಿ ಪ್ರಕರಣದ ಅಂತಿಮ ಚಾರ್ಜ್ ಶೀಟ್ ನ್ನು ಜುಲೈ 3ರೊಳಗೆ ಸಲ್ಲಿಸುವುದಾಗಿ ಹೇಳಿದ ನಂತರ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಗಳಲ್ಲಿ ಜಾಮೀನು ಕೋರಿ ಸಿಸೋಡಿಯಾ ಸಲ್ಲಿಸಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಕಳೆದ ವಾರ ವಿಲೇವಾರಿ ಮಾಡಿತ್ತು. ಈ ಮಧ್ಯೆ ದೆಹಲಿ ನ್ಯಾಯಾಲಯ ಶುಕ್ರವಾರ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ಜುಲೈ 31 ರವರೆಗೆ ವಿಸ್ತರಿಸಿದೆ. ಈ ಹಿಂದೆ ನೀಡಲಾಗಿದ್ದ ನ್ಯಾಯಾಂಗ ಬಂಧನದ ಅವಧಿ ಮುಗಿದ ನಂತರ ಅವರನ್ನು ತಿಹಾರ್ ಜೈಲಿನಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರುಪಡಿಸಲಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT