ಶಿವಸೇನಾ ಸಂಸದ ಸಂಜಯ್ ರೌತ್ online desk
ದೇಶ

NITI ಆಯೋಗ ಸಭೆಯಲ್ಲಿ ಬಂಗಾಳ ಸಿಎಂಗೆ ಅವಮಾನ ಪ್ರಜಾಸತ್ತಾತ್ಮಕ ನಿಯಮಕ್ಕೆ ವಿರುದ್ಧ: ಸಂಜಯ್ ರೌತ್

"ಕೇಂದ್ರವು ವಿತರಿಸುವ ಹಣವು ಭಾರತದ ಜನರಿಗೆ ಸೇರಿದೆ. ಅದನ್ನು ವಿವಿಧ ತೆರಿಗೆಗಳಾಗಿ ಸಂಗ್ರಹಿಸಲಾಗುತ್ತದೆ. ಮಹಾರಾಷ್ಟ್ರಕ್ಕೆ ಏನು ಸಿಕ್ಕಿತು.. ನಮ್ಮ ಮುಖ್ಯಮಂತ್ರಿ ಬರಿಗೈಯಲ್ಲಿ ಹಿಂತಿರುಗಿದರು"-ಸಂಜಯ್ ರೌತ್

ನವದೆಹಲಿ: NITI ಆಯೋಗದ ಸಭೆಯಲ್ಲಿ ಬಂಗಾಳ ಸಿಎಂ ಮಮತಾ ಬ್ಯಾನರ್ಜಿಗೆ ಅವಮಾನ ಮಾಡಿರುವುದು ಪ್ರಜಾಸತ್ತಾತ್ಮಕ ನಿಯಮಗಳಿಗೆ ಸರಿಹೊಂದುವುದಿಲ್ಲ ಎಂದು ಶಿವಸೇನೆ ಉದ್ಧವ್ ಠಾಕ್ರೆ ಬಣದ ನಾಯಕ ಸಂಜಯ್ ರೌತ್ ಹೇಳಿದ್ದಾರೆ.

ರಾಜ್ಯಗಳಿಗೆ ಹಲವು ಸಮಸ್ಯೆಗಳಿರುತ್ತವೆ ಅವುಗಳನ್ನು ಬಗೆಹರಿಸಬೇಕಾಗುತ್ತದೆ. ಆದರೆ ಸಭೆಯಲ್ಲಿ ಸಿಎಂ ಒಬ್ಬರ ಮೈಕ್ರೋಫೋನ್ ನ್ನು ಮ್ಯೂಟ್ ಮಾಡುವುದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಒಳಿತಲ್ಲ ಎಂದು ರೌತ್ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ NITI ಆಯೋಗದ ಸಭೆಯಿಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೊರ ನಡೆದಿದ್ದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಮಮತಾ ಬ್ಯಾನರ್ಜಿ, ಉಳಿದ ಸಿಎಂ ಗಳಿಗೆ ತಮ್ಮ ರಾಜ್ಯಗಳ ಬಗ್ಗೆ ಮಾತನಾಡುವುದಕ್ಕೆ ಹೆಚ್ಚಿನ ಸಮಯ ಅವಕಾಶ ನೀಡಲಾಗಿತ್ತು. ಆದರೆ ನಾನು ಮಾತನಾಡಲು ಕೇವಲ 5 ನಿಮಿಷ ನೀಡಲಾಯಿತು. 5 ನಿಮಿಷದ ನಂತರ ನನ್ನ ಬಳಿ ಇದ್ದ ಮೈಕ್ರೋಫೋನ್ ನ್ನು ಮ್ಯೂಟ್ ಮಾಡಲಾಯಿತು ಈ ಹಿನ್ನೆಲೆಯಲ್ಲಿ ನಾನು ಸಭೆಯಿಂದ ಹೊರನಡೆದೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

"ಕೇಂದ್ರವು ವಿತರಿಸುವ ಹಣವು ಭಾರತದ ಜನರಿಗೆ ಸೇರಿದೆ. ಅದನ್ನು ವಿವಿಧ ತೆರಿಗೆಗಳಾಗಿ ಸಂಗ್ರಹಿಸಲಾಗುತ್ತದೆ. ಮಹಾರಾಷ್ಟ್ರಕ್ಕೆ ಏನು ಸಿಕ್ಕಿತು.. ನಮ್ಮ ಮುಖ್ಯಮಂತ್ರಿ ಬರಿಗೈಯಲ್ಲಿ ಹಿಂತಿರುಗಿದರು" ಎಂದು ಏಕನಾಥ್ ಶಿಂಧೆ ನೇತೃತ್ವದ ಆಡಳಿತಾರೂಢ ಮೈತ್ರಿಕೂಟದ ವಿರುದ್ಧ ರಾವತ್ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ನಾಳೆ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ-Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT