ದೆಹಲಿ ಕೋಚಿಂಗ್ ಸೆಂಟರ್ ದುರಂತ 
ದೇಶ

Delhi coaching center tragedy: ''ನರಕಯಾತನೆಯ ಜೀವನ ನಡೆಸುತ್ತಿದ್ದೇವೆ''; ಸಿಜೆಐಗೆ IAS ಆಕಾಂಕ್ಷಿ ಪತ್ರ

ದೆಹಲಿಯ ರಾಜೇಂದ್ರ ನಗರ, ಮುಖರ್ಜಿ ನಗರ ಮತ್ತು ಇತರ ಪ್ರದೇಶಗಳಲ್ಲಿನ ವಿದ್ಯಾರ್ಥಿಗಳು ಕಳಪೆ ಮೂಲಸೌಕರ್ಯ, ಒಳಚರಂಡಿ ಮತ್ತು ಇತರ ಸಮಸ್ಯೆಗಳಿಂದ ವಿದ್ಯಾರ್ಥಿಗಳು ಎದುರಿಸುತ್ತಿರುವ ಅಗ್ನಿಪರೀಕ್ಷೆಯನ್ನು ಐಎಎಸ್ ಆಕಾಂಕ್ಷಿ ಅವಿನಾಶ್ ದುಬೆ ಮುಖ್ಯ ನ್ಯಾಯಮೂರ್ತಿಗೆ ವಿವರಿಸಿದ್ದಾರೆ.

ನವದೆಹಲಿ: ಮೂವರು ವಿದ್ಯಾರ್ಥಿಗಳ ಸಾವು ಕಂಡ ದೆಹಲಿ ಐಎಎಸ್ ಕೋಚಿಂಗ್ ಸೆಂಟರ್ ದುರಂತಕ್ಕೆ ಸಂಬಂಧಿಸಿದಂತೆ IAS ಆಕಾಂಕ್ಷಿಯೊಬ್ಬರು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಪತ್ರ ಬರೆದಿದ್ದು, ''ನರಕಯಾತನೆಯ ಜೀವನ ನಡೆಸುತ್ತಿದ್ದೇವೆ'' ಎಂದು ಅಳಲು ತೋಡಿಕೊಂಡಿದ್ದಾರೆ.

ಈ ಪತ್ರದ ಪ್ರತಿ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ಲಭ್ಯವಾಗಿದ್ದು ಪತ್ರದಲ್ಲಿ ದೆಹಲಿಯ ರಾಜೇಂದ್ರ ನಗರ, ಮುಖರ್ಜಿ ನಗರ ಮತ್ತು ಇತರ ಪ್ರದೇಶಗಳಲ್ಲಿನ ವಿದ್ಯಾರ್ಥಿಗಳು ಕಳಪೆ ಮೂಲಸೌಕರ್ಯ, ಒಳಚರಂಡಿ ಮತ್ತು ಇತರ ಸಮಸ್ಯೆಗಳಿಂದ ವಿದ್ಯಾರ್ಥಿಗಳು ಎದುರಿಸುತ್ತಿರುವ ಅಗ್ನಿಪರೀಕ್ಷೆಯನ್ನು ಐಎಎಸ್ ಆಕಾಂಕ್ಷಿ ಅವಿನಾಶ್ ದುಬೆ ಮುಖ್ಯ ನ್ಯಾಯಮೂರ್ತಿಗೆ ವಿವರಿಸಿದ್ದಾರೆ.

ಅಲ್ಲದೆ ಸಿಜೆಐಗೆ ಬರೆದ ಪತ್ರದಲ್ಲಿ ಶನಿವಾರ ಮೂವರು ಸಹ ವಿದ್ಯಾರ್ಥಿಗಳ ಅಕಾಲಿಕ ಮರಣಕ್ಕೆ ಕಾರಣವಾದ ನಗರ ಅಧಿಕಾರಿಗಳು ಮತ್ತು ಇತರರ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. "ನರಕದ ಜೀವನವನ್ನು ನಡೆಸುತ್ತಿದ್ದಾರೆ" ಎಂದು ಹೇಳುವ ಅವಿನಾಶ್ ದುಬೆ ಅವರು ವಿದ್ಯಾರ್ಥಿಗಳ ಜೀವನ ಪರಿಸ್ಥಿತಿಗಳು ಭೀಕರವಾಗಿದೆ ಎಂದು ಎತ್ತಿ ತೋರಿಸಿದ್ದಾರೆ.

ಮಳೆ ಮತ್ತು ಪ್ರವಾಹದ ಸಂದರ್ಭದಲ್ಲಿ ನಗರದ ಕಳಪೆ ಒಳಚರಂಡಿ ವ್ಯವಸ್ಥೆಯಿಂದಾಗಿ ಮೊಣಕಾಲು ಉದ್ದದ ಕೊಳಚೆ ನೀರಿನಲ್ಲಿ ನಡೆಯಲಾಗುತ್ತಿದೆ. ಪ್ರವೇಶ ಪರೀಕ್ಷೆಗೆ ತಯಾರಿ ನಡೆಸುತ್ತಿರುವಾಗ, ಈ ವಿದ್ಯಾರ್ಥಿಗಳು ತಮ್ಮ ಪ್ರಾಣವನ್ನು ದೊಡ್ಡ ಅಪಾಯಕ್ಕೆ ಒಡ್ಡಿಕೊಂಡೇ ಜೀವನ ಸಾಗಿಸಬೇಕಿದೆ.

ಮಹಾನಗರ ಪಾಲಿಕೆ ಮತ್ತು ದೆಹಲಿ ಸರ್ಕಾರದ ಕಡೆಯಿಂದ ನಿರ್ಲಕ್ಷ್ಯವಿದ್ದು ಕಳಪೆ ನಿರ್ವಹಣೆ ಜನಜೀವನ ಅಸ್ಥವಸ್ಥಗೊಳಿಸಿದೆ. ಇವೆಲ್ಲವನ್ನೂ ವಿದ್ಯಾರ್ಥಿಗಳು ಸಹಿಸಿಕೊಂಡು ತಮ್ಮ ವಿದ್ಯಾಭ್ಯಾಸ ನಡೆಸುತ್ತಿದ್ದಾರೆ ಎಂದು ದುಬೆ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

ಚರಂಡಿಗಳ ಮುಚ್ಚುವಿಕೆಯಿಂದಾಗಿ ಪ್ರವಾಹದ ನೀರು ಕಟ್ಟಡಗಳಿಗೆ ಪ್ರವೇಶಿಸುತ್ತದೆ ಮತ್ತು ಅವರು ಮೊಣಕಾಲು ಆಳದ ಚರಂಡಿ ನೀರಿನಲ್ಲಿ ನಡೆಯಬೇಕಾಗಿದೆ. ಇಂತಹ ಕೇಂದ್ರಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಆರೋಗ್ಯಕ್ಕೆ ಗಂಭೀರ ಅಪಾಯವಿದೆ. ವಿದ್ಯಾರ್ಥಿಗಳಿಗೆ ಸುರಕ್ಷಿತ ಮತ್ತು ಆರೋಗ್ಯಕರ ವಾತಾವರಣ ಬೇಕು. ಆದ್ದರಿಂದ ಅವರು ನಿರ್ಭಯವಾಗಿ ಅಧ್ಯಯನ ಮಾಡಿ ದೇಶದ ಅಭಿವೃದ್ಧಿಗೆ ಕೊಡುಗೆ ನೀಡಬಹುದು.

ಇಡೀ ಸಮಸ್ಯೆಯ ಬಗ್ಗೆ ತಕ್ಷಣದ ಗಮನ ಹರಿಸುವ ಅಗತ್ಯವಿದೆ. ವಿದ್ಯಾರ್ಥಿಗಳ ಮೂಲಭೂತ ಹಕ್ಕುಗಳ ರಕ್ಷಣೆಗೆ ಹೆಚ್ಚಿನ ಪ್ರಾಧಾನ್ಯತೆ ನೀಡಬೇಕು, ಆರೋಗ್ಯಕರ ಜೀವನ ನಡೆಸುವುದರೊಂದಿಗೆ ಅಧ್ಯಯನ ಮಾಡುವುದು ಅವರ ಹಕ್ಕು ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಇನ್ನು ಈ ಪತ್ರವನ್ನು ಸಿಜೆಐ ಗಂಭೀರವಾಗಿ ಪರಿಗಣಿಸಿ ಸ್ವಯಂಪ್ರೇರಿತ ವಿಚಾರಣೆ ನಡೆಸುತ್ತಾರೆಯೇ ಅಥವಾ ಪತ್ರವನ್ನು ಕೇವಲ ಅರ್ಜಿಯಾಗಿ ಪರಿಗಣಿಸುತ್ತಾರೆಯೇ ಎಂಬುದು ಕುತೂಹಲ ಕೆರಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT