ಬಾಬಾ ರಾಮ್ ದೇವ್ 
ದೇಶ

COVID ಸಾವಿಗೆ ಅಲೋಪತಿ ನಂಟು; ದಾರಿ ತಪ್ಪಿಸುವ ಪೋಸ್ಟ್‌ ತೆಗೆದುಹಾಕಲು ಬಾಬಾ ರಾಮ್‌ದೇವ್‌ ಗೆ Delhi High Court ಸೂಚನೆ

ಕೋವಿಡ್‌–19 ವಿರುದ್ಧ ‘ಕೊರೊನಿಲ್‌’ ಮಾತ್ರೆ ಬಳಕೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹಾಕಿರುವ ‘ದಾರಿ ತಪ್ಪಿಸುವ’ ಪೋಸ್ಟ್‌ಗಳನ್ನು ತೆಗೆದುಹಾಕುವಂತೆ ಯೋಗ ಗುರು ರಾಮ್‌ದೇವ್‌ ಅವರಿಗೆ ದೆಹಲಿ ಹೈಕೋರ್ಟ್‌ ಸೋಮವಾರ ಸೂಚಿಸಿದೆ.

ನವದೆಹಲಿ: ಕೋವಿಡ್ ಸೋಂಕಿಗೆ ತಮ್ಮ ಕೊರೊನಿಲ್‌ ಮಾತ್ರೆಗಳನ್ನು ಪ್ರಚಾರ ಮಾಡುವ ಭರದಲ್ಲಿ ಅಲೋಪತಿ ವೈದ್ಯಪದ್ಧತಿಯಿಂದಲೇ COVID ಸಾವು ಸಂಭವಿಸುತ್ತಿದೆ ಎಂದು ಮಾಡಿದ್ದ ಪ್ರಚಾರ ಮತ್ತು ಪೋಸ್ಟ್ ಅನ್ನು ತೆಗೆದು ಹಾಕುವಂತೆ ಪತಂಜಲಿ ಸಂಸ್ಥೆ ಹಾಗೂ ಯೋಗ ಗುರು ಬಾಬಾ ರಾಮ್ ದೇವ್ ಗೆ ದೆಹಲಿ ಹೈಕೋರ್ಟ್ ಸೂಚನೆ ನೀಡಿದೆ.

ಕೋವಿಡ್‌–19 ವಿರುದ್ಧ ‘ಕೊರೊನಿಲ್‌’ ಮಾತ್ರೆ ಬಳಕೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹಾಕಿರುವ ‘ದಾರಿ ತಪ್ಪಿಸುವ’ ಪೋಸ್ಟ್‌ಗಳನ್ನು ತೆಗೆದುಹಾಕುವಂತೆ ಯೋಗ ಗುರು ರಾಮ್‌ದೇವ್‌ ಅವರಿಗೆ ದೆಹಲಿ ಹೈಕೋರ್ಟ್‌ ಸೋಮವಾರ ಸೂಚಿಸಿದೆ.

ಕೊರೊನಿಲ್‌ ಮಾತ್ರೆಯು ಕೊರೊನಾವನ್ನು ಗುಣಪಡಿಸಲಿದೆ ಎಂದು ತಪ್ಪು ಮಾಹಿತಿ ನೀಡುತ್ತಿದ್ದಾರೆ ಎಂದು ಆರೋಪಿಸಿ ಹಲವು ವೈದ್ಯರು 2021ರಲ್ಲಿ ರಾಮ್‌ದೇವ್‌, ಆಚಾರ್ಯ ಬಾಲಕೃಷ್ಣ ಮತ್ತು ಪತಂಜಲಿ ಆಯುರ್ವೇದ್ ವಿರುದ್ಧ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಯ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್ ನ ನ್ಯಾಯಮೂರ್ತಿ ಅನೂಪ್‌ ಜೈರಾಮ್‌ ಭಂಭಾನಿ ಅವರು, ‘ರಾಮ್‌ದೇವ್‌ ವಿರುದ್ಧ ಹಲವು ವೈದ್ಯರು ಸಲ್ಲಿಸಿದ್ದ ಅರ್ಜಿಯನ್ನು ಸ್ವೀಕರಿಸಲಾಗಿದೆ’ ಎಂದು ಹೇಳಿದರು.

‘ಕೆಲವು ಆಕ್ಷೇಪಾರ್ಹ ಟ್ವೀಟ್‌, ಪೋಸ್ಟ್‌ ಮತ್ತು ವಿಷಯಗಳನ್ನು ಮೂರು ದಿನಗಳ ಒಳಗಾಗಿ ತೆಗೆದುಹಾಕಲು ನಿರ್ದೇಶನ ನೀಡಲಾಗಿದೆ. ಈ ಸೂಚನೆಯನ್ನು ಪಾಲಿಸದೇ ಇದ್ದಲ್ಲಿ, ‘ಎಕ್ಸ್‌’ ಜಾಲತಾಣವೇ ಅವುಗಳನ್ನು ತೆಗೆದುಹಾಕಲಿದೆ’ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT