ಭಾಗವತ್ ಕರಾಡ್ 
ದೇಶ

ಮರಾಠರಿಗೆ ಒಬಿಸಿ ಮೀಸಲಾತಿ ನೀಡಬಾರದು: ಬಿಜೆಪಿ ರಾಜ್ಯಸಭಾ ಸದಸ್ಯ ಭಾಗವತ್ ಕರಾಡ್

ಒಬಿಸಿ ಕೋಟಾವನ್ನು ದುರ್ಬಲಗೊಳಿಸದಿರುವ ಭಾರತೀಯ ಜನತಾ ಪಕ್ಷದ ನಿಲುವು ಸ್ಪಷ್ಟವಾಗಿದೆ ಎಂದು ರಾಜ್ಯಸಭಾ ಸದಸ್ಯ ಕರಾಡ್ ಅವರು ಹೇಳಿದ್ದಾರೆ.

ಜಾಲ್ನಾ: ಮರಾಠರಿಗೆ ಇತರೆ ಹಿಂದುಳಿದ ವರ್ಗಗಳ ವಿಭಾಗದಲ್ಲಿ ಮೀಸಲಾತಿ ನೀಡಬಾರದು ಎಂದು, ಬಿಜೆಪಿ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಭಾಗವತ್ ಕರಾಡ್ ಅವರು ಸೋಮವಾರ ಹೇಳಿದ್ದಾರೆ.

ಒಬಿಸಿ ಕೋಟಾವನ್ನು ದುರ್ಬಲಗೊಳಿಸದಿರುವ ಭಾರತೀಯ ಜನತಾ ಪಕ್ಷದ ನಿಲುವು ಸ್ಪಷ್ಟವಾಗಿದೆ ಎಂದು ರಾಜ್ಯಸಭಾ ಸದಸ್ಯ ಕರಾಡ್ ಅವರು ಹೇಳಿದ್ದಾರೆ.

"ಮಹಾರಾಷ್ಟ್ರ ಸರ್ಕಾರವು ಮರಾಠರಿಗೆ ನೀಡಿರುವ ಶೇ. 10 ರಷ್ಟು ಮೀಸಲಾತಿ ಕಾನೂನು ಪರಿಶೀಲನೆಗೆ ಒಳಪಡುತ್ತದೆ. ಒಬಿಸಿಯಾಗಿ, ಒಬಿಸಿ ಕೋಟಾದ ಪ್ರಯೋಜನಗಳನ್ನು ಮರಾಠ ಸಮುದಾಯಕ್ಕೆ ವಿಸ್ತರಿಸುವುದನ್ನು ನಾನು ವಿರೋಧಿಸುತ್ತೇನೆ" ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಮರಾಠ ಮೀಸಲಾತಿ ಹೋರಾಟಗಾರ ಮನೋಜ್ ಜಾರಂಗೆ ಅವರು ಒಬಿಸಿ ವಿಭಾಗದ ಅಡಿಯಲ್ಲಿ ಮರಾಠರಿಗೆ ಮೀಸಲಾತಿ ನೀಡುವಂತೆ ಆಗ್ರಹಿಸಿದ್ದಾರೆ.

ಇದನ್ನು ಒಬಿಸಿ ಸಂಘಟನೆಗಳು ತೀವ್ರವಾಗಿ ವಿರೋಧಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

SCROLL FOR NEXT