ಮೊಹಮ್ಮದ್ ರಿಯಾಸ್ 
ದೇಶ

ಶಿರೂರು ಭೂ ಕುಸಿತ: ಕಾಣೆಯಾದವರ ಪತ್ತೆಗೆ ಸಾಧ್ಯವಿರುವ ಎಲ್ಲ ಮಾರ್ಗಗಳನ್ನು ಹುಡುಕಿ- ಕೇರಳ ಸಚಿವ ಒತ್ತಾಯ

'ಯಾರನ್ನೂ ದೂಷಿಸಲು ಅಥವಾ ಅನಗತ್ಯ ವಿವಾದದಲ್ಲಿ ತೊಡಗಲು ಬಯಸುವುದಿಲ್ಲ. ನಮ್ಮನ್ನು ಸಂಪರ್ಕಿಸದೆ ಶೋಧ ಕಾರ್ಯ ನಿಲ್ಲಿಸುವ ನಿರ್ಧಾರ ತೆಗೆದುಕೊಳ್ಳುವುದು ಸರಿಯಲ್ಲ. ಕೇರಳ ಸರ್ಕಾರ ಸಾಂವಿಧಾನಿಕವಾಗಿ ಸಾಧ್ಯವಿರುವ ಎಲ್ಲವನ್ನೂ ಮಾಡುತ್ತಿದೆ'

ಕೋಝಿಕೋಡ್: ಉತ್ತರ ಕನ್ನಡದ ಶಿರೂರು ಭೂಕುಸಿತದಿಂದ ನಾಪತ್ತೆಯಾಗಿರುವ ಲಾರಿ ಚಾಲಕ ಅರ್ಜುನ್ ಅವರ ಶೋಧ ಕಾರ್ಯವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ ಕರ್ನಾಟಕ ಸರ್ಕಾರದ ನಿರ್ಧಾರಕ್ಕೆ ಕೇರಳ ಪ್ರವಾಸೋದ್ಯಮ ಸಚಿವ ಪಿ ಎ ಮೊಹಮ್ಮದ್ ರಿಯಾಸ್ ನಿರಾಶೆ ವ್ಯಕ್ತಪಡಿಸಿದ್ದಾರೆ ಮತ್ತು ಸಾಧ್ಯವಿರುವ ಎಲ್ಲ ಮಾರ್ಗಗಳನ್ನು ಶೋಧ ಕಾರ್ಯಾಚರಣೆಗೆ ಅಡ್ಡಿಯಾಗುವ ಮಿತಿಗಳನ್ನು ಮರು ಪರಿಶೀಲಿಸುವಂತೆ ಅವರು ಒತ್ತಾಯಿಸಿದ್ದಾರೆ.

ಕರ್ನಾಟಕ ಸರ್ಕಾರ ತನ್ನ ನಿಲುವನ್ನು ಮರುಪರಿಶೀಲಿಸುವಂತೆ ಒತ್ತಾಯಿಸಿದ ರಿಯಾಸ್, ನೌಕಾ ನೆಲೆಯಿಂದ ಅತ್ಯುತ್ತಮ ಮುಳುಗು ತಜ್ಞರನ್ನು ನಿಯೋಜಿಸುವ ಅಗತ್ಯವನ್ನು ಒತ್ತಿ ಹೇಳಿದರು. ಲಭ್ಯವಿರುವ ಎಲ್ಲ ಸಂಪನ್ಮೂಲಗಳನ್ನು ಪೂರ್ಣ ಪ್ರಮಾಣದಲ್ಲಿ ಬಳಸಿಕೊಳ್ಳಬೇಕು. ಇನ್ನೂ ಹಲವು ಸಾಧ್ಯತೆಗಳಿವೆ. ಎಲ್ಲರೂ ಚರ್ಚಿಸಿದ ನಿರ್ಣಯವನ್ನು ಜಾರಿಗೊಳಿಸಬೇಕು' ಎಂದು ಅವರು ಆಗ್ರಹಿಸಿದರು.

ಯಾರನ್ನೂ ದೂಷಿಸಲು ಅಥವಾ ಅನಗತ್ಯ ವಿವಾದದಲ್ಲಿ ತೊಡಗಲು ಬಯಸುವುದಿಲ್ಲ. ನಮ್ಮನ್ನು ಸಂಪರ್ಕಿಸದೆ ಶೋಧ ಕಾರ್ಯ ನಿಲ್ಲಿಸುವ ನಿರ್ಧಾರ ತೆಗೆದುಕೊಳ್ಳುವುದು ಸರಿಯಲ್ಲ. ಕೇರಳ ಸರ್ಕಾರ ಸಾಂವಿಧಾನಿಕವಾಗಿ ಸಾಧ್ಯವಿರುವ ಎಲ್ಲವನ್ನೂ ಮಾಡುತ್ತಿದೆ. ಬೇರೆ ರಾಜ್ಯವಾದ್ದರಿಂದ ನಮ್ಮ ಮಂತ್ರಿಗಳು ಅಲ್ಲಿ ಬೀಡು ಬಿಡುವಂತಿಲ್ಲ, ಆದರೆ ನಾವು ಅಲ್ಲಿಗೆ ಹೋಗಿದ್ದೆವು. ಒಬ್ಬ ನಾಗರಿಕನಾಗಿ ಪ್ರತಿಕ್ರಿಯಿಸುತ್ತಿದ್ದೇನೆ, ಸಚಿವನಾಗಿ ಅಲ್ಲ ಎಂದು ಅವರು ಹೇಳಿದರು.

ಮಂಜೇಶ್ವರಂ ಶಾಸಕ ಎಂ ಕೆ ಎಂ ಅಶ್ರಫ್ ಮಾತನಾಡಿ, ಪ್ಲಾನ್ ಬಿ ಪರಿಗಣಿಸಲು ಉಭಯ ಮುಖ್ಯಮಂತ್ರಿಗಳ ನಡುವೆ ಚರ್ಚೆಗೆ ಕರೆ ನೀಡಿದರು. "ಇಲ್ಲಿಯವರೆಗೆ ಗಂಗಾವಳಿ ನದಿಯಲ್ಲಿ ಹುಡುಕಾಟದಿಂದ ಪ್ರಯೋಜನವಾಗಿಲ್ಲ ಎಂದರು.

ಈ ಮಧ್ಯೆ ಅರ್ಜುನ್ ಅವರ ತಾಯಿ ಶೀಲಾ ಅವರು ರಕ್ಷಣಾ ಕಾರ್ಯವನ್ನು ಮುಂದುವರೆಸುವಂತೆ ಮನವಿ ಮಾಡಿದರು.

ದಯವಿಟ್ಟು ರಕ್ಷಣಾ ಚಟುವಟಿಕೆಯನ್ನು ನಿಲ್ಲಿಸಬೇಡಿ, ಇನ್ನೂ ನಮ್ಮ ಮಗನನ್ನು ಹುಡುಕುವ ಭರವಸೆ ಇದೆ. ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವ ಶಿರೂರಿನಲ್ಲಿರುವ ತಂಡದಿಂದ ನಮಗೆ ತೃಪ್ತಿ ಇದೆ. ಆದರೆ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವ ಸುದ್ದಿ ನಮ್ಮ ಉತ್ಸಾಹವನ್ನು ಕುಗ್ಗಿಸಿದೆ. ಎರಡೂ ಸರ್ಕಾರಗಳು ಮತ್ತು ಎಲ್ಲಾರ ಪ್ರಯತ್ನಗಳು ಅರ್ಜುನ್‌ನ ಚೇತರಿಕೆಗೆ ಕಾರಣವಾಗುತ್ತವೆ ಎಂದು ಕುಟುಂಬ ಆಶಾದಾಯಕವಾಗಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

NCERT ಪಠ್ಯಪುಸ್ತಕ ವಿವಾದ: ನಾವು ನ್ಯಾಯಾಂಗವನ್ನು ಗೌರವಿಸುತ್ತೇವೆ; ಬಿಜೆಪಿ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

SCROLL FOR NEXT