ವಯನಾಡ್ ಭೂಕುಸಿತ 
ದೇಶ

ವಯನಾಡ್ ಭೂಕುಸಿತ: ರಕ್ಷಣಾ ಕಾರ್ಯಾಚರಣೆಗೆ ಎನ್‌ಡಿಆರ್‌ಎಫ್, ಸೇನಾ ಹೆಲಿಕಾಪ್ಟರ್‌ಗಳ ನೆರವು

ಕೇರಳದ ಗುಡ್ಡಗಾಡು ಪ್ರದೇಶವಾದ ವಯನಾಡ್ ಜಿಲ್ಲೆಯಲ್ಲಿ ಸಂಭವಿಸಿದ ವಿನಾಶಕಾರಿ ಭೂಕುಸಿತದಿಂದ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

ವಯನಾಡ್: ಕೇರಳದ ವಯನಾಡಿನಲ್ಲಿ ಭೀಕರ ಭೂಕುಸಿತ ಸಂಭವಿಸಿದ್ದು, ರಕ್ಷಣಾ ಕಾರ್ಯಾಚರಣೆಗಾಗಿ ಕೇರಳ ಸರ್ಕಾರ ಮಂಗಳವಾರ ಭಾರತೀಯ ಸೇನೆಯ ನೆರವು ಕೋರಿದೆ. ಇದರ ಬೆನ್ನಲ್ಲೇ, ಭಾರತೀಯ ಸೇನೆ, NDRF ತಂಡಗಳು, ಎರಡು ಸೇನಾ ಹೆಲಿಕಾಪ್ಟರ್‌ಗಳು ಮತ್ತು ಇತರ ರಕ್ಷಣಾ ತಂಡಗಳು ಮುಂಡಕ್ಕೈಗೆ ತೆರಳುತ್ತಿವೆ.

ಕೇರಳದ ಗುಡ್ಡಗಾಡು ಪ್ರದೇಶವಾದ ವಯನಾಡ್ ಜಿಲ್ಲೆಯಲ್ಲಿ ಸಂಭವಿಸಿದ ವಿನಾಶಕಾರಿ ಭೂಕುಸಿತದಿಂದ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

122 ಇನ್‌ಫೆಂಟ್ರಿ ಬೆಟಾಲಿಯನ್(ಟಿಎ) ಮದ್ರಾಸ್‌ನಿಂದ ಸೆಕೆಂಡ್-ಇನ್-ಕಮಾಂಡ್ ನೇತೃತ್ವದ 43 ಸೇನಾ ಸಿಬ್ಬಂದಿಗಳ ತಂಡ ರಕ್ಷಣಾ ಕಾರ್ಯಾಚರಣೆಗೆ ಸಹಾಯ ಮಾಡಲು ತೆರಳುತ್ತಿದೆ ಎಂದು ರಕ್ಷಣಾ ಇಲಾಖೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ತಿಳಿಸಿದ್ದಾರೆ.

ವೈದ್ಯಕೀಯ ಅಧಿಕಾರಿ, ಇಬ್ಬರು ಜೂನಿಯರ್ ಕಮಿಷನ್ಡ್ ಅಧಿಕಾರಿಗಳು(ಜೆಸಿಒಗಳು) ಮತ್ತು 40 ಸೈನಿಕರನ್ನು ಒಳಗೊಂಡ ತಂಡ ವಯನಾಡು ರಕ್ಷಣಾ ಕಾರ್ಯಾಚರಣೆಗೆ ನೆರವು ನೀಡಲು ಸಜ್ಜಾಗಿದೆ ಎಂದು ಅವರು ಹೇಳಿದ್ದಾರೆ.

NDRF ನ ಒಂದು ತಂಡವು ಅವಶೇಷಗಳನ್ನು ತೆರವುಗೊಳಿಸಲು ಮುಂಡಕ್ಕೈ ಕಡೆಗೆ ತೆರಳುತ್ತಿದೆ.

ಕೊಲ್ಲಂ, ಅರಕ್ಕೋಣಂ ಮತ್ತು ಬೆಂಗಳೂರಿನಿಂದ ಇನ್ನೂ ಮೂರು ಎನ್‌ಡಿಆರ್‌ಎಫ್ ತಂಡಗಳು ಸಹ ತೆರಳುತ್ತಿವೆ ಎಂದು ಕೇರಳ ಕಂದಾಯ ಕೆ ರಾಜನ್ ಅವರು ತಿಳಿಸಿದ್ದಾರೆ.

"ಮುಂಡಕ್ಕೈ ಪರ್ವತದ ತಪ್ಪಲಿನಲ್ಲಿದೆ. ಪ್ರವಾಹದಿಂದ ಸೇತುವೆ ಕುಸಿದಿದ್ದು, ಈ ಪ್ರದೇಶ ಸಂಪೂರ್ಣವಾಗಿ ಸಂಪರ್ಕ ಕಡಿತಗೊಂಡಿದೆ. ಈಗ ರಕ್ಷಣಾ ತಂಡ ತೆರಳಲು ಅನುಕೂಲವಾಗುವಂತೆ ತಾತ್ಕಾಲಿಕ ಸೇತುವೆ ನಿರ್ಮಿಸುವ ಪ್ರಯತ್ನಗಳು ನಡೆಯುತ್ತಿವೆ" ಎಂದು ರಾಜನ್ ಹೇಳಿದ್ದಾರೆ.

ಹಾನಿಯ ಪ್ರಮಾಣವನ್ನು ಇನ್ನೂ ನಿರ್ಧರಿಸಲಾಗಿಲ್ಲ. ಮಧ್ಯಾಹ್ನದ ವೇಳೆಗೆ ಇನ್ನೂ ಮೂರು ಎನ್ ಡಿಆರ್ ಎಫ್ ತಂಡಗಳು ಆಗಮಿಸುತ್ತವೆ. ಸೇನೆಯ ಎರಡು ಹೆಲಿಕಾಪ್ಟರ್‌ಗಳು ಕೂಡ ಶೀಘ್ರದಲ್ಲೇ ತಲುಪಲಿವೆ" ಎಂದು ರಾಜನ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಾಂಗ್ಲಾದೇಶ ಮೂಲದ ಸಂಘಟನೆಯೊಂದಿಗೆ' ನಂಟು: ಅಸ್ಸಾಂ, ತ್ರಿಪುರಾದಲ್ಲಿ 11 ಜನರ ಬಂಧನ

'ಕೋಗಿಲು ಪ್ರಕರಣ' ಈಗ ಅಂತಾರಾಷ್ಟ್ರೀಯ ವಿಚಾರ: ಪಾಕ್ ಕ್ಯಾತೆ; ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ಕಿಡಿ; ಸಚಿವ ಜಮೀರ್ ಹೇಳಿದ್ದು ಏನು?

'ಸ್ವಂತ ತಮ್ಮನ ಮಗನಿಗೆ ಮಗಳನ್ನು ಕೊಟ್ಟು ಮದುವೆ' ಮಾಡಿದ ಪಾಕ್ ಸೇನಾ ಮುಖ್ಯಸ್ಥ! ಇದರಲ್ಲಿಯೂ ಒಳ ಸಂಚು?

2026 ರಲ್ಲಿಯೂ ಭಾರತ- ಪಾಕಿಸ್ತಾನ ಮಿಲಿಟರಿ ಸಂಘರ್ಷ ಸಾಧ್ಯತೆ! US ಥಿಂಕ್ ಟ್ಯಾಂಕ್ ವಾರ್ನಿಂಗ್

ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ; G RAM G ಕಾಯ್ದೆ ಅನುಷ್ಠಾನಗೊಳಿಸದಂತೆ ಆಗ್ರಹ

SCROLL FOR NEXT