ನವಾಬ್ ಮಲಿಕ್ 
ದೇಶ

ವೈದ್ಯಕೀಯ ಚಿಕಿತ್ಸೆಗಾಗಿ ನವಾಬ್ ಮಲಿಕ್‌ಗೆ ಸುಪ್ರೀಂ ಕೋರ್ಟ್ ನಿಂದ ಜಾಮೀನು ಮಂಜೂರು

ಇಡಿ ಪರ ವಾದ ಮಂಡಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್ ವಿ ರಾಜು, ಆರೋಪಿಗೆ ಜಾಮೀನು ನೀಡುವುದಕ್ಕೆ ವಿರೋಧ ವ್ಯಕ್ತಪಡಿಸಲಿಲ್ಲ ಮತ್ತು ಮಧ್ಯಂತರ ವೈದ್ಯಕೀಯ ಜಾಮೀನು ನೀಡಬಹುದು ಎಂದು ಹೇಳಿದರು.

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಹಾರಾಷ್ಟ್ರದ ಮಾಜಿ ಸಚಿವ ನವಾಬ್ ಮಲಿಕ್ ಅವರಿಗೆ ವೈದ್ಯಕೀಯ ಕಾರಣಗಳಿಗಾಗಿ ಸುಪ್ರೀಂ ಕೋರ್ಟ್ ಮಂಗಳವಾರ ಜಾಮೀನು ಮಂಜೂರು ಮಾಡಿದೆ.

ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಸತೀಶ್ ಚಂದ್ರ ಶರ್ಮಾ ಅವರ ಪೀಠ, ವಿವಿಧ ಕಾಯಿಲೆಗಳಿಂದ ಬಳಲುತ್ತಿರುವ ಮಲಿಕ್ ಪರ ವಾದ ಮಂಡಿಸಿದ ವಕೀಲರ ಮನವಿಯನ್ನು ಪರಿಗಣಿಸಿ, ಜಾಮೀನು ಮಂಜೂರು ಮಾಡಿದ್ದು, ಇದು ಬಾಂಬೆ ಹೈಕೋರ್ಟ್‌ನಲ್ಲಿ ಸಾಮಾನ್ಯ ಜಾಮೀನು ಅರ್ಜಿ ವಿಲೇವಾರಿ ಮಾಡುವವರೆಗೆ ಮಾನ್ಯವಾಗಿರುತ್ತದೆ ಎಂದು ಹೇಳಿದೆ.

ಇಡಿ ಪರ ವಾದ ಮಂಡಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್ ವಿ ರಾಜು, ಆರೋಪಿಗೆ ಜಾಮೀನು ನೀಡುವುದಕ್ಕೆ ವಿರೋಧ ವ್ಯಕ್ತಪಡಿಸಲಿಲ್ಲ ಮತ್ತು ಮಧ್ಯಂತರ ವೈದ್ಯಕೀಯ ಜಾಮೀನು ನೀಡಬಹುದು ಎಂದು ಹೇಳಿದರು.

ಪರಾರಿಯಾದ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಮತ್ತು ಆತನ ಸಹಚರರ ಚಟುವಟಿಕೆಗಳಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ 2022 ರ ಫೆಬ್ರವರಿ ಇಡಿ ಮಲಿಕ್ ಅವರನ್ನು ಬಂಧಿಸಿತ್ತು.

ಮಲಿಕ್ ಅವರು ದೀರ್ಘಕಾಲದ ಮೂತ್ರಪಿಂಡ ಕಾಯಿಲೆ ಸೇರಿದಂತೆ ವಿವಿಧ ಕಾಯಿಲೆಗಳಿಂದ ಬಳಲುತ್ತಿದ್ದಾರೆ.

1993 ರ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ಆರೋಪಿ ಮತ್ತು ಭೂಗತ ಪಾತಕಿ ದಾವೂದ್ ಇಬ್ರಾಹಿಂ ಮತ್ತು ಆತನ ಸಹಚರರ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ(ತಡೆ) ಕಾಯಿದೆಯಡಿಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ದಾಖಲಿಸಿದ ಎಫ್‌ಐಆರ್ ಆಧರಿಸಿ ಮಲಿಕ್ ವಿರುದ್ಧ ಇಡಿ ಪ್ರಕರಣ ದಾಖಲಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

45 ಮಂದಿಗೆ ಪದ್ಮಶ್ರೀ ಪ್ರಶಸ್ತಿ ಘೋಷಣೆ: ಕರ್ನಾಟಕದ 3 ಸಾಧಕರಿಗೆ ಗೌರವ

CCL 2026: ಭೋಜ್‌ಪುರಿ ದಬಾಂಗ್ಸ್ ವಿರುದ್ಧ ಕರ್ನಾಟಕ ಬುಲ್ಡೋಜರ್ಸ್ಗೆ 18 ರನ್‌ಗಳ ರೋಚಕ ಜಯ, ಸೆಮಿಫೈನಲ್‌ಗೆ ಎಂಟ್ರಿ!

ನಮಗೂ 'ಟೈಮ್' ಬರುತ್ತೆ: ದೇವೇಗೌಡರ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು!

ದಶಕಗಳ ಕಾಲ ಭಾರತದಲ್ಲಿನ ಹಲವು ಘಟನೆಗಳ 'BBC ವರದಿ' ಹಿಂದಿದ್ದ ಹಿರಿಯ ಪತ್ರಕರ್ತ ಮಾರ್ಕ್ ಟುಲ್ಲಿ ನಿಧನ!

'ಬೆಂಗಳೂರಿನ ಮೂಲಕ ಜಗತ್ತು ನೋಡುತ್ತಿದೆ.. ವಿದೇಶದಲ್ಲಿ ಭಾರತದ ವಿರುದ್ಧ ಮಾತನಾಡುವುದಿಲ್ಲ': ಡಿಸಿಎಂ ಡಿಕೆ ಶಿವಕುಮಾರ್

SCROLL FOR NEXT