ಹೇಮಂತ್ ಸೊರೆನ್ 
ದೇಶ

ಬಡವರಿಗೆ ಮನೆ ನಿರ್ಮಾಣಕ್ಕೆ ಉಚಿತ ಮರಳು ನೀಡುವುದಾಗಿ ಜಾರ್ಖಂಡ್ ಸಿಎಂ ಘೋಷಣೆ

ಮರಳಿನ ಕೊರತೆಯಿಂದಾಗಿ ಬೆಲೆ ಏರಿಕೆಯ ವಿಷಯವು ಸರ್ಕಾರದ ಗಮನಕ್ಕೆ ಬಂದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ರಾಂಚಿ: ಜಾರ್ಖಂಡ್‌ನಲ್ಲಿ ಮರಳು ಬಿಕ್ಕಟ್ಟಿನ ಮಧ್ಯೆ, ಮಂಗಳವಾರ ರಾಜ್ಯ ವಿಧಾನಸಭೆಯ ಮುಂಗಾರು ಅಧಿವೇಶನದಲ್ಲಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರು ಮನೆ ನಿರ್ಮಾಣಕ್ಕಾಗಿ ಆದಾಯ ತೆರಿಗೆಯಿಂದ ವಿನಾಯಿತಿ ಪಡೆದಿರುವ ಬಡವರಿಗೆ ಉಚಿತವಾಗಿ ಮರಳು ನೀಡಲಾಗುವುದು ಎಂದು ಘೋಷಿಸಿದರು.

ಜಾರ್ಖಂಡ್ ಅಸೆಂಬ್ಲಿಯಲ್ಲಿ ಮಾತನಾಡಿದ ಸೊರೆನ್, ರಾಜ್ಯಾದ್ಯಂತ ಬಡವರಿಗೆ ಅಬುವಾ ಆವಾಸ್, ಪಿಎಂ ಆವಾಸ್ ಅಥವಾ ವೈಯಕ್ತಿಕ ಮನೆಗಳ ನಿರ್ಮಾಣಕ್ಕೆ ಅಗತ್ಯವಿರುವ ಮರಳಿನ ಸಮಸ್ಯೆಯನ್ನು ಸದನದಲ್ಲಿ ಪದೇಪದೆ ಪ್ರಸ್ತಾಪಿಸಲಾಗುತ್ತಿದೆ ಮತ್ತು ಮರಳು ಬೆಲೆ ಏರಿಕೆಯ ಭಾರವನ್ನು ಅವರು ಹೊರಬೇಕಾಗಿದೆ ಎಂದರು.

ಮರಳಿನ ಕೊರತೆಯಿಂದಾಗಿ ಬೆಲೆ ಏರಿಕೆಯ ವಿಷಯವು ಸರ್ಕಾರದ ಗಮನಕ್ಕೆ ಬಂದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಮರಳಿನ ಬೆಲೆಯನ್ನು ಹೆಚ್ಚುತ್ತಿರುವುದರಿಂದ ರಾಜ್ಯದಲ್ಲಿ ಬಡವರಿಗೆ ಉಚಿತವಾಗಿ ಮರಳು ದೊರೆಯುವಂತೆ ಮಾಡಲಾಗುವುದು ಎಂದು ಸದನಕ್ಕೆ ತಿಳಿಸಲು ಬಯಸುತ್ತೇನೆ ಎಂದು ಮುಖ್ಯಮಂತ್ರಿ ಹೇಳಿದರು.

ಅಬುವಾ ಆವಾಸ್, ಪಿಎಂ ಆವಾಸ್ ಅಥವಾ ವೈಯಕ್ತಿಕವಾಗಿ ತಮ್ಮ ಮನೆಗಳನ್ನು ನಿರ್ಮಿಸುವ ಬಡವರಿಗೆ ಸುಲಭವಾಗಿ ಮರಳು ಸಿಗುತ್ತಿಲ್ಲ ಮತ್ತು ಕೆಲವರು ಹೆಚ್ಚಿನ ಬೆಲೆಗೆ ಮರಳು ಪಡೆಯುತ್ತಿದ್ದಾರೆ. ಇದನ್ನು ಪರಿಗಣಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸೊರೆನ್ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT