ಅಮಿತ್ ಶಾ 
ದೇಶ

ಎಕ್ಸಿಟ್ ಪೋಲ್ ಚರ್ಚೆ ಬಹಿಷ್ಕರಿಸಿದ ಕಾಂಗ್ರೆಸ್ ವಿರುದ್ಧ ಅಮಿತ್ ಶಾ ವಾಗ್ದಾಳಿ

ಲೋಕಸಭೆ ಚುನಾವಣೆಯ ಕೊನೆಯ ಹಂತದ ಮತದಾನ ಶನಿವಾರ ನಡೆಯುತ್ತಿದ್ದು, ಸಂಜೆ ವೇಳೆಗೆ ಚುನಾವಣೋತ್ತರ ಸಮೀಕ್ಷೆಗಳ ಭರಾಟೆ ಆರಂಭವಾಗಲಿದೆ.

ನವದೆಹಲಿ: ಲೋಕಸಭೆ ಚುನಾವಣೆಯ ಕೊನೆಯ ಹಂತದ ಮತದಾನ ಶನಿವಾರ ನಡೆಯುತ್ತಿದ್ದು, ಸಂಜೆ ವೇಳೆಗೆ ಚುನಾವಣೋತ್ತರ ಸಮೀಕ್ಷೆಗಳ ಭರಾಟೆ ಆರಂಭವಾಗಲಿದೆ. ಆದರೆ ಎಕ್ಸಿಟ್ ಪೋಲ್ ಚರ್ಚೆಗಳನ್ನು ಬಹಿಷ್ಕರಿಸಲು ನಿರ್ಧಾರಿಸಿದ ಕಾಂಗ್ರೆಸ್ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ.

“ಇಡೀ ಚುನಾವಣಾ ಪ್ರಚಾರದ ಸಮಯದಲ್ಲಿ, ಕಾಂಗ್ರೆಸ್ ತಾನು ಬಹುಮತ ಪಡೆಯುವುದಾಗಿ ಹೇಳಿಕೊಳ್ಳುತ್ತಿತ್ತು. ಆದರೆ ಈಗ ಅವರು ಸಂಪೂರ್ಣ ಎಕ್ಸಿಟ್ ಪೋಲ್ ಚರ್ಚೆಗಳನ್ನು ಬಹಿಷ್ಕರಿಸುತ್ತಿದ್ದಾರೆ. ಜೂನ್ 4 ರಂದು ಫಲಿತಾಂಶ ಹೊರಬೀಳಲಿರುವುದರಿಂದ ಎಕ್ಸಿಟ್ ಪೋಲ್ ಚರ್ಚೆಗಳು ಅರ್ಥಹೀನ ಎಂದು ಪ್ರತಿಪಾದಿಸುತ್ತಿದ್ದಾರೆ" ಎಂದು ಅಮಿತ್ ಶಾ ಹೇಳಿದ್ದಾರೆ.

ರಾಹುಲ್ ಗಾಂಧಿ ಪಕ್ಷದ ನಾಯಕತ್ವವನ್ನು ವಹಿಸಿಕೊಂಡ ನಂತರ ಬಹಿಷ್ಕರಿಸುವುದು ಕಾಂಗ್ರೆಸ್‌ನ ಲಕ್ಷಣವಾಗಿದೆ. ಅವರು ತೀರ್ಪು ತಮಗೆ ಅನುಕೂಲವಾಗದಿದ್ದಾಗ ಸುಪ್ರೀಂ ಕೋರ್ಟ್‌ನ ಸಮಗ್ರತೆಯನ್ನು ಪ್ರಶ್ನಿಸಿದ್ದಾರೆ. ಅವರು ಚುನಾವಣಾ ಆಯೋಗ ಮತ್ತು ಇವಿಎಂಗಳ ಸಮಗ್ರತೆಯನ್ನು ಪ್ರಶ್ನಿಸಿದ್ದಾರೆ. ಸಾಂವಿಧಾನಿಕ ಸ್ಥಾನಗಳನ್ನು ಹೊಂದಿರುವ ವ್ಯಕ್ತಿಗಳನ್ನು ಮತ್ತು ವಿವಿಧ ಏಜೆನ್ಸಿಗಳನ್ನು ಟೀಕಿಸಿದ್ದಾರೆ. ದೇಶದ ವ್ಯವಸ್ಥೆಯ ಮೇಲೆ ನಂಬಿಕೆ ಇಟ್ಟುಕೊಳ್ಳದ ಕಾಂಗ್ರೆಸ್ ಪಕ್ಷ ಮತ್ತು ಅದರ ನಾಯಕರಿಗೆ ಬಹಿಷ್ಕರಿಸುವುದು ರೂಢಿಯಾಗಿದೆ ಎಂದು ಅಮಿತ್ ಶಾ ಟೀಕಿಸಿದ್ದಾರೆ.

ಆಸ್ಟ್ರಿಚ್‌ನಂತೆ ಮುಖ ಮುಚ್ಚಿಕೊಳ್ಳುವುದರಿಂದ ಯಾವುದೇ ಪ್ರಯೋಜನೆ ಇಲ್ಲ. ಸೋಲನ್ನು ಧೈರ್ಯದಿಂದ ಎದುರಿಸಿ ಮುನ್ನಡೆಯಬೇಕು ಎಂದು ಕಾಂಗ್ರೆಸ್ ನಾಯಕರಿಗೆ ಹೇಳಲು ಬಯಸುತ್ತೇನೆ ಎಂದು ಕೇಂದ್ರ ಗೃಹ ಸಚಿವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ