ಅಲ್ಕಾ ಲಂಬಾ 
ದೇಶ

ಮೌನ ಮುರಿಯಿರಿ, ಸಂತ್ರಸ್ತೆಯರಿಗೆ ನ್ಯಾಯದ ಭರವಸೆ ನೀಡಿ: ಪ್ರಜ್ವಲ್ ರೇವಣ್ಣ ಬಂಧನದ ನಂತರ ಪ್ರಧಾನಿ ಮೋದಿಗೆ ಕಾಂಗ್ರೆಸ್

ಲೈಂಗಿಕ ದೌರ್ಜನ್ಯದ ಆರೋಪಿ ಪ್ರಜ್ವಲ್ ರೇವಣ್ಣ ಬಂಧನದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮೌನವನ್ನು ಶನಿವಾರ ಪ್ರಶ್ನಿಸಿರುವ ಕಾಂಗ್ರೆಸ್, ಕಳೆದ 10 ವರ್ಷಗಳಲ್ಲಿ ಮಹಿಳೆಯರಿಗೆ ನ್ಯಾಯ ಒದಗಿಸುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿದೆ.

ನವದೆಹಲಿ: ಲೈಂಗಿಕ ದೌರ್ಜನ್ಯದ ಆರೋಪಿ ಪ್ರಜ್ವಲ್ ರೇವಣ್ಣ ಬಂಧನದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮೌನವನ್ನು ಶನಿವಾರ ಪ್ರಶ್ನಿಸಿರುವ ಕಾಂಗ್ರೆಸ್, ಕಳೆದ 10 ವರ್ಷಗಳಲ್ಲಿ ಮಹಿಳೆಯರಿಗೆ ನ್ಯಾಯ ಒದಗಿಸುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿದೆ.

ಪ್ರಜ್ವಲ್ ರೇವಣ್ಣ ಏಪ್ರಿಲ್ 27 ರಂದು ವಿದೇಶಕ್ಕಾಗಿ ಪರಾರಿಯಾಗಿದ್ದರು. ಇದಕ್ಕೆ ಅವಕಾಶ ನೀಡಿದ್ದಕ್ಕಾಗಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಲ್ಕಾ ಲಂಬಾ, ಮಾಸ್ ರೇಪಿಸ್ಟ್ ಎಸ್ಕೇಪ್ ಆಗುವುದು ಮೋದಿಯ ಗ್ಯಾರಂಟಿ. ಹಾಸನದ ಸಂಸದ ರೇವಣ್ಣ ಅವರನ್ನು ರಾಜ್ಯ ಸರ್ಕಾರ ರಚಿಸಿರುವ ಎಸ್‌ಐಟಿ ಬಂಧಿಸಿದೆ. ಎಸ್‌ಐಟಿ ರಚಿಸಿದ ಮಹಿಳಾ ಪೊಲೀಸ್ ತಂಡ ಇದನ್ನು ಮಾಡಿದೆ.ಅದಕ್ಕಾಗಿ ಕರ್ನಾಟಕ ಸರ್ಕಾರವನ್ನು ಅಭಿನಂದಿಸುತ್ತೇವೆ ಎಂದು ಲಂಬಾ ಹೇಳಿದರು.

ಎಐಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿ ‘ಬೇಟಿ ಬಚಾವೋ’ ಘೋಷಣೆಯನ್ನು ಆಗಾಗ್ಗಲೇ ಹೇಳುತ್ತಲೇ ಇದ್ದರು. ಆದರೆ, ಪ್ರಜ್ವಲ್ ರೇವಣ್ಣ ಅವರ ಬಗ್ಗೆ ಮೌನ ಮುರಿದಿರಲಿಲ್ಲ.

ಕೇಂದ್ರದ ಸಹಾಯಕ್ಕಾಗಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೋದಿಗೆ ಪತ್ರ ಬರೆದರೂ ಉತ್ತರ ಬಂದಿರಲಿಲ್ಲ ಎಂದರು.

ರೇವಣ್ಣ ಅವರನ್ನು ದೇಶಕ್ಕೆ ಕರೆತರುವಂತೆ ಮುಖ್ಯಮಂತ್ರಿ 21 ದಿನಗಳ ನಂತರ ಮತ್ತೊಮ್ಮೆ ಮೋದಿಗೆ ಪತ್ರ ಬರೆಯಬೇಕಾಯಿತು. ಪ್ರಜ್ವಲ್ ರೇವಣ್ಣ ಪ್ರಕರಣದ ಬಗ್ಗೆ ಮೋದಿ ಎಷ್ಟು ಗಂಭೀರವಾಗಿದ್ದರು ಎಂಬುದು ಇದರಿಂದ ತಿಳಿಯುತ್ತದೆ. ಸಂತ್ರಸ್ತೆಯರು ಮತ್ತು ಸಾಕ್ಷಿಗಳ ಮೇಲೆ ಒತ್ತಡ ಹೇರುವ ಸಾಧ್ಯತೆ ಇನ್ನೂ ಇದೆ. ಪ್ರಧಾನಿ ಮೋದಿ ಮೌನ ಮುರಿಯಬೇಕು ಮತ್ತು ಯಾವುದೇ ಸಾಕ್ಷ್ಯವನ್ನು ತಿರುಚುವುದಿಲ್ಲ ಮತ್ತು ನಮ್ಮ ಹೆಣ್ಣುಮಕ್ಕಳಿಗೆ ನ್ಯಾಯವನ್ನು ಖಾತರಿಪಡಿಸಲಾಗುವುದು ಎಂದು ಭರವಸೆ ನೀಡಬೇಕು ಎಂದು ಒತ್ತಾಯಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ನಾಯಕತ್ವ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ ನೆರವೇರಿಸಿದ್ದು ಹೇಗೆ?: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ; ಈ ಅದ್ಭುತ Video ನೋಡಿ..

SCROLL FOR NEXT