ಎಂಕೆ ಸ್ಟಾಲಿನ್ - ರಾಹುಲ್ ಗಾಂಧಿ 
ದೇಶ

ಇಂಡಿಯಾ ಬ್ಲಾಕ್ ಗೆಲುವಿನ ಸನಿಹದಲ್ಲಿದೆ, ಜೂನ್ 4 ರಂದು ಹೊಸ ಯುಗ ಆರಂಭ: ಎಂಕೆ ಸ್ಟಾಲಿನ್

ಲೋಕಸಭೆ ಚುನಾವಣೆಯ ಕೊನೆಯ ಹಂತದ ಮತದಾನ ಶನಿವಾರ ನಡೆಯುತ್ತಿದೆ. ಸಂಜೆ ವೇಳೆಗೆ ಮತದಾನ ಮುಕ್ತಾಯಗೊಳ್ಳುವುದರೊಂದಿಗೆ ಏಳು ಹಂತಗಳ 2024ರ ಸಾರ್ವತ್ರಿಕ ಚುನಾವಣೆಗೆ ಅಧಿಕೃತವಾಗಿ ತೆರೆ.

ಚೆನ್ನೈ: ಲೋಕಸಭೆ ಚುನಾವಣೆಯ ಕೊನೆಯ ಹಂತದ ಮತದಾನ ಶನಿವಾರ ನಡೆಯುತ್ತಿದೆ. ಸಂಜೆ ವೇಳೆಗೆ ಮತದಾನ ಮುಕ್ತಾಯಗೊಳ್ಳುವುದರೊಂದಿಗೆ ಏಳು ಹಂತಗಳ 2024ರ ಸಾರ್ವತ್ರಿಕ ಚುನಾವಣೆಗೆ ಅಧಿಕೃತವಾಗಿ ತೆರೆ ಬಿಳಲಿದೆ. ಜೂನ್ 4 ರಂದು ಫಲಿತಾಂಶ ಪ್ರಕಟವಾಗಲಿದೆ.

ಬಿಜೆಪಿ ಮತ್ತು ಪ್ರತಿಪಕ್ಷಗಳ ಮೈತ್ರಿಕೂಟ ಇಂಡಿಯಾ ಬಣಗಳೆರಡೂ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸುವ ವಿಶ್ವಾಸದಲ್ಲಿವೆ. ಆದರೆ ಅಂತಿಮವಾಗಿ ಜನರ ತೀರ್ಪು ಯಾರ ಪರ ಎಂಬುದು ಜೂನ್ 4 ರಂದು ತಿಳಿಯಲಿದೆ.

ಏತನ್ಮಧ್ಯೆ, ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಜೂನ್ 4 ಇಂಡಿಯಾದ ಹೊಸ ಯುಗದ ಆರಂಭವನ್ನು ಸೂಚಿಸುತ್ತಿದೆ ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಸಂದೇಶದಲ್ಲಿ, ಸ್ಟಾಲಿನ್ ಅವರು ಮುಂದಿನ ಕ್ರಮದ ಕುರಿತು ಇಂಡಿಯಾ ಬ್ಲಾಕ್ ನಾಯಕರು ಇಂದು ಸಭೆ ನಡೆಸುತ್ತಿದ್ದು, ಡಿಎಂಕೆ ಪರವಾಗಿ ಪಕ್ಷದ ಖಜಾಂಚಿ ಮತ್ತು ಡಿಎಂಕೆ ಸಂಸದೀಯ ಪಕ್ಷದ ನಾಯಕ ಟಿಆರ್ ಬಾಲು ಅವರು ಭಾಗವಹಿಸುತ್ತಿದ್ದಾರೆ ಎಂದು ಸ್ಟಾಲಿನ್ ಹೇಳಿದರು.

"ಇಂಡಿಯಾ ಬ್ಲಾಕ್ ಗೆಲುವಿನ ಸನಿಹದಲ್ಲಿದೆ" ಎಂದು ಸ್ಟಾಲಿನ್ ಹೇಳಿದ್ದಾರೆ.

ಬಿಜೆಪಿಯ ಫ್ಯಾಸಿಸ್ಟ್ ಆಡಳಿತದ ಹತ್ತು ವರ್ಷಗಳ ಆಡಳಿತವನ್ನು ಕೊನೆಗೊಳಿಸುವುದು ವಿರೋಧ ಪಕ್ಷಗಳ ಮೈತ್ರಿಕೂಟ ರಚನೆಯ ಹಿಂದಿನ ಗುರಿಯಾಗಿದೆ. ಇದನ್ನು ಸಾಧಿಸಲಾಗಿದೆ ಎಂದು ತೋರುತ್ತಿದೆ. ಬಿಜೆಪಿಗೆ ಸವಾಲು ಹಾಕಲು ಯಾವುದೇ ವಿರೋಧವಿಲ್ಲ ಎಂದು ಭಾವಿಸಿದ್ದ ಬಿಜೆಪಿ ವಿರುದ್ಧ ಪ್ರಜಾಸತ್ತಾತ್ಮಕ ಶಕ್ತಿಗಳ ಅಸಾಧಾರಣ ಒಕ್ಕೂಟವನ್ನು ಒಟ್ಟುಗೂಡಿಸುವಲ್ಲಿ ಪ್ರತಿಪಕ್ಷಗಳು ಯಶಸ್ವಿಯಾಗಿದ್ದವು. ಈ ಮೈತ್ರಿ ಈಗ ದೇಶದ ಜನತೆಯಲ್ಲಿ ಭರವಸೆ ಮೂಡಿಸಿದೆ ಎಂದು ತಮಿಳುನಾಡು ಸಿಎಂ ಹೇಳಿದ್ದಾರೆ.

ಅವಿರತ ಪ್ರಚಾರದ ಮೂಲಕ ಇಂಡಿಯಾ ಬಣದ ನಾಯಕರು ಸಾರ್ವಜನಿಕ ವಲಯದಲ್ಲಿ ಬಿಜೆಪಿ ಸೃಷ್ಟಿಸಿದ್ದ ಸುಳ್ಳಿನ ಕಂತೆಯನ್ನು ಕಿತ್ತೊಗೆದಿದ್ದಾರೆ. ಮತ ಎಣಿಕೆಗೆ ಇನ್ನು ಕೇವಲ ಮೂರು ದಿನಗಳು ಬಾಕಿಯಿದ್ದು, ಮತ ಎಣಿಕೆ ಪ್ರಕ್ರಿಯೆಯಲ್ಲಿ ಕಟ್ಟೆಚ್ಚರ ವಹಿಸುವಂತೆ ಸ್ಟಾಲಿನ್ ಅವರು ಕಾರ್ಯಕರ್ತರಿಗೆ ಸೂಚಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT