ಪ್ರಧಾನಿ ನರೇಂದ್ರ ಮೋದಿ  
ದೇಶ

ಕನ್ಯಾಕುಮಾರಿ: 'ಸೂರ್ಯ ಅರ್ಘ್ಯ' ನೀಡುವ ಮೂಲಕ ಎರಡನೇ ದಿನದ ಧ್ಯಾನ ಆರಂಭಿಸಿದ ಪ್ರಧಾನಿ ಮೋದಿ

ಇಲ್ಲಿನ ವಿವೇಕಾನಂದ ಶಿಲಾ ಸ್ಮಾರಕದಲ್ಲಿ ಇಂದು ಶನಿವಾರ ಸೂರ್ಯೋದಯದ ವೇಳೆ ‘ಸೂರ್ಯ ಅರ್ಘ್ಯ’ ನೀಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಎರಡನೇ ಮತ್ತು ಅಂತಿಮ ದಿನದ ಧ್ಯಾನವನ್ನು ಆರಂಭಿಸಿದರು.

ಕನ್ಯಾಕುಮಾರಿ: ಇಲ್ಲಿನ ವಿವೇಕಾನಂದ ಶಿಲಾ ಸ್ಮಾರಕದಲ್ಲಿ ಇಂದು ಶನಿವಾರ ಸೂರ್ಯೋದಯದ ವೇಳೆ ‘ಸೂರ್ಯ ಅರ್ಘ್ಯ’ ನೀಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಎರಡನೇ ಮತ್ತು ಅಂತಿಮ ದಿನದ ಧ್ಯಾನವನ್ನು ಆರಂಭಿಸಿದರು.

ಪ್ರಧಾನಿ ಮೋದಿ ಅವರು 'ಸೂರ್ಯ ಅರ್ಘ್ಯ'ವನ್ನು ನೀಡಿ ಸರ್ವಶಕ್ತನಿಗೆ ನಮಸ್ಕಾರಗಳನ್ನು ಮಾಡುವ ಮೂಲಕ ಆಧ್ಯಾತ್ಮಕ ಆಚರಣೆಯನ್ನು ಆರಂಭಿಸಿದರು. ಸಾಂಪ್ರದಾಯಿಕವಾಗಿ ತಾಮ್ರದ ಚೆಂಬಿನ ಪಾತ್ರೆಯ ಮೂಲಕ ಸ್ವಲ್ಪ ನೀರನ್ನು ಸಮುದ್ರಕ್ಕೆ ನೈವೇದ್ಯವಾಗಿ (ಅರ್ಘ್ಯ) ಸುರಿದು ಪ್ರಾರ್ಥನಾ ಮಣಿ ಅಂದರೆ ಜಪ ಮಾಲೆ ಕೈಯಲ್ಲಿ ಹಿಡಿದು ಪ್ರಾರ್ಥಿಸಿದರು.

ಈ ಸಂದರ್ಭದಲ್ಲಿ ಮೋದಿ ಅವರು ಕೇಸರಿ ವಸ್ತ್ರವನ್ನು ಧರಿಸಿದ್ದರು. ಸ್ವಾಮಿ ವಿವೇಕಾನಂದರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು. ಕೈಯಲ್ಲಿ 'ಜಪ ಮಾಲೆ' ಹಿಡಿದುಕೊಂಡು ಮಂಟಪದ ಸುತ್ತಲೂ ನಡೆದರು.

ಕನ್ಯಾಕುಮಾರಿಯು ಸೂರ್ಯೋದಯ ಮತ್ತು ಸೂರ್ಯಾಸ್ತಕ್ಕೆ ಹೆಸರುವಾಸಿಯಾಗಿದೆ. ಸ್ಮಾರಕವು ತೀರದ ಸಮೀಪವಿರುವ ಒಂದು ಸಣ್ಣ ದ್ವೀಪದಲ್ಲಿದೆ.

ವಿವೇಕಾನಂದ ಶಿಲಾ ಸ್ಮಾರಕದಲ್ಲಿ, ಪ್ರಧಾನಮಂತ್ರಿಯವರು ಮೊನ್ನೆ ಮೇ 30 ರ ಸಂಜೆ ಧ್ಯಾನವನ್ನು ಪ್ರಾರಂಭಿಸಿದ್ದರು. ಇಂದು ಸಂಜೆ ಸೂರ್ಯಾಸ್ತ ಬಳಿಕ ಪೂರ್ಣಗೊಳಿಸಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT