ಪ್ರಧಾನಿ ನರೇಂದ್ರ ಮೋದಿ  
ದೇಶ

ಕನ್ಯಾಕುಮಾರಿ: 'ಸೂರ್ಯ ಅರ್ಘ್ಯ' ನೀಡುವ ಮೂಲಕ ಎರಡನೇ ದಿನದ ಧ್ಯಾನ ಆರಂಭಿಸಿದ ಪ್ರಧಾನಿ ಮೋದಿ

ಇಲ್ಲಿನ ವಿವೇಕಾನಂದ ಶಿಲಾ ಸ್ಮಾರಕದಲ್ಲಿ ಇಂದು ಶನಿವಾರ ಸೂರ್ಯೋದಯದ ವೇಳೆ ‘ಸೂರ್ಯ ಅರ್ಘ್ಯ’ ನೀಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಎರಡನೇ ಮತ್ತು ಅಂತಿಮ ದಿನದ ಧ್ಯಾನವನ್ನು ಆರಂಭಿಸಿದರು.

ಕನ್ಯಾಕುಮಾರಿ: ಇಲ್ಲಿನ ವಿವೇಕಾನಂದ ಶಿಲಾ ಸ್ಮಾರಕದಲ್ಲಿ ಇಂದು ಶನಿವಾರ ಸೂರ್ಯೋದಯದ ವೇಳೆ ‘ಸೂರ್ಯ ಅರ್ಘ್ಯ’ ನೀಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಎರಡನೇ ಮತ್ತು ಅಂತಿಮ ದಿನದ ಧ್ಯಾನವನ್ನು ಆರಂಭಿಸಿದರು.

ಪ್ರಧಾನಿ ಮೋದಿ ಅವರು 'ಸೂರ್ಯ ಅರ್ಘ್ಯ'ವನ್ನು ನೀಡಿ ಸರ್ವಶಕ್ತನಿಗೆ ನಮಸ್ಕಾರಗಳನ್ನು ಮಾಡುವ ಮೂಲಕ ಆಧ್ಯಾತ್ಮಕ ಆಚರಣೆಯನ್ನು ಆರಂಭಿಸಿದರು. ಸಾಂಪ್ರದಾಯಿಕವಾಗಿ ತಾಮ್ರದ ಚೆಂಬಿನ ಪಾತ್ರೆಯ ಮೂಲಕ ಸ್ವಲ್ಪ ನೀರನ್ನು ಸಮುದ್ರಕ್ಕೆ ನೈವೇದ್ಯವಾಗಿ (ಅರ್ಘ್ಯ) ಸುರಿದು ಪ್ರಾರ್ಥನಾ ಮಣಿ ಅಂದರೆ ಜಪ ಮಾಲೆ ಕೈಯಲ್ಲಿ ಹಿಡಿದು ಪ್ರಾರ್ಥಿಸಿದರು.

ಈ ಸಂದರ್ಭದಲ್ಲಿ ಮೋದಿ ಅವರು ಕೇಸರಿ ವಸ್ತ್ರವನ್ನು ಧರಿಸಿದ್ದರು. ಸ್ವಾಮಿ ವಿವೇಕಾನಂದರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು. ಕೈಯಲ್ಲಿ 'ಜಪ ಮಾಲೆ' ಹಿಡಿದುಕೊಂಡು ಮಂಟಪದ ಸುತ್ತಲೂ ನಡೆದರು.

ಕನ್ಯಾಕುಮಾರಿಯು ಸೂರ್ಯೋದಯ ಮತ್ತು ಸೂರ್ಯಾಸ್ತಕ್ಕೆ ಹೆಸರುವಾಸಿಯಾಗಿದೆ. ಸ್ಮಾರಕವು ತೀರದ ಸಮೀಪವಿರುವ ಒಂದು ಸಣ್ಣ ದ್ವೀಪದಲ್ಲಿದೆ.

ವಿವೇಕಾನಂದ ಶಿಲಾ ಸ್ಮಾರಕದಲ್ಲಿ, ಪ್ರಧಾನಮಂತ್ರಿಯವರು ಮೊನ್ನೆ ಮೇ 30 ರ ಸಂಜೆ ಧ್ಯಾನವನ್ನು ಪ್ರಾರಂಭಿಸಿದ್ದರು. ಇಂದು ಸಂಜೆ ಸೂರ್ಯಾಸ್ತ ಬಳಿಕ ಪೂರ್ಣಗೊಳಿಸಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT