ಸಾಂದರ್ಭಿಕ ಚಿತ್ರ  
ದೇಶ

ವಿಧಾನಸಭೆ ಚುನಾವಣೆ ಮತ ಎಣಿಕೆ: ಸಿಕ್ಕಿಂನಲ್ಲಿ ಆಡಳಿತಾರೂಢ ಎಸ್‌ಕೆಎಂ ಗೆಲುವಿನತ್ತ, ಅರುಣಾಚಲದಲ್ಲಿ ಬಿಜೆಪಿಗೆ ಮುನ್ನಡೆ

ಅರುಣಾಚಲ ಪ್ರದೇಶದಲ್ಲಿ ಹತ್ತು ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹೀಗಾಗಿ 60 ವಿಧಾನಸಭಾ ಕ್ಷೇತ್ರಗಳ ಪೈಕಿ 50 ಸ್ಥಾನಗಳಿಗೆ ಮತ ಎಣಿಕೆ ನಡೆಯುತ್ತಿದೆ. 10 ಗೆಲುವು ಮತ್ತು 21 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿರುವ ಬಿಜೆಪಿ ಇದೀಗ ಗೆಲುವಿಗೆ ಅರ್ಧದ ಗಡಿ ದಾಟಿದೆ.

ಅರುಣಾಚಲ ಪ್ರದೇಶ: ತಿಂಗಳುಗಟ್ಟಲೆ ಪ್ರಚಾರ, ಮತದಾನ ಪ್ರಕ್ರಿಯೆ ನಂತರ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆ ಮುಕ್ತಾಯವಾಗಿದ್ದು, ಫಲಿತಾಂಶ ತಿಳಿಯುವ ಸಮಯ ಬಂದಿದೆ.

ಅರುಣಾಚಲ ಪ್ರದೇಶದ 50 ಮತ್ತು ಸಿಕ್ಕಿಂನ 32 ವಿಧಾನಸಭಾ ಸ್ಥಾನಗಳಿಗೆ ಮತ ಎಣಿಕೆ ಇಂದು ಭಾನುವಾರ ನಡೆಯುತ್ತಿದೆ. ಅರುಣಾಚಲದಲ್ಲಿ 10 ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದು, 60 ವಿಧಾನಸಭಾ ಸ್ಥಾನಗಳ ಪೈಕಿ 50 ಸ್ಥಾನಗಳ ಫಲಿತಾಂಶ ಇಂದು ತಿಳಿಯಲಿದೆ. ಸಿಕ್ಕಿಂನಲ್ಲಿ, ಅಧಿಕಾರದಲ್ಲಿರುವ ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ (SKM) ಎರಡನೇ ಅವಧಿಗೆ ಅಧಿಕಾರಕ್ಕೆ ಬರುವ ನಿರೀಕ್ಷೆಯಲ್ಲಿದೆ.

ಅರುಣಾಚಲ ಪ್ರದೇಶದಲ್ಲಿ 10 ಕ್ಷೇತ್ರಗಳಲ್ಲಿ ಅವಿರೋಧ ಆಯ್ಕೆ ಮತ್ತು 21 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿರುವ ಬಿಜೆಪಿ ಇದೀಗ ಗೆಲುವಿಗೆ ಅರ್ಧದ ಗಡಿ ದಾಟಿದೆ. ಬಿಜೆಪಿಯ ಮಿತ್ರಪಕ್ಷ ಕಾನ್ರಾಡ್ ಸಂಗ್ಮಾ ಅವರ ನ್ಯಾಷನಲ್ ಪೀಪಲ್ಸ್ ಪಾರ್ಟಿ ಎರಡು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ ಮತ್ತು ಎನ್‌ಸಿಪಿ ತಲಾ ಒಂದು ಸ್ಥಾನದಲ್ಲಿ ಮುನ್ನಡೆ ಸಾಧಿಸಿವೆ.

ಮೂರನೇ ಅವಧಿಗೆ ಸಿಎಂ ಪೆಮಾ ಖಂಡು: ಅರುಣಾಚಲ ಪ್ರದೇಶ ವಿಧಾನಸಭೆ ಚುನಾವಣೆ ಮತ ಎಣಿಕೆ ಪ್ರಗತಿಯಲ್ಲಿದ್ದು, ಆರಂಭಿಕ ಟ್ರೆಂಡ್‌ಗಳ ಪ್ರಕಾರ ಬಿಜೆಪಿ ಅರ್ಧದ ಗಡಿ ದಾಟಿದ್ದು, ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಮೂರನೇ ಅವಧಿಗೆ ಮುಖ್ಯಮಂತ್ರಿಯಾಗಿ ಅಧಿಕಾರಕ್ಕೆ ಏರಲು ಸಜ್ಜಾಗಿದ್ದಾರೆ. ಏಪ್ರಿಲ್ 19 ರಂದು ನಡೆದ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ದಿನವೇ ಅರುಣಾಚಲ ಪ್ರದೇಶದಲ್ಲಿ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳು ಏಕಕಾಲದಲ್ಲಿ ನಡೆದವು.

ಅವಿರೋಧವಾಗಿ ಆಯ್ಕೆಯಾದ 10 ಬಿಜೆಪಿ ಶಾಸಕರಲ್ಲಿ ಮುಕ್ತೋದಿಂದ ಮುಖ್ಯಮಂತ್ರಿ ಪೆಮಾ ಖಂಡು, ಚೌಕಮ್‌ನಿಂದ ಉಪಮುಖ್ಯಮಂತ್ರಿ ಚೌನಾ ಮೇ, ಇಟಾನಗರದಿಂದ ಟೆಚಿ ಕಾಸೊ, ತಾಲಿಹಾದಿಂದ ನ್ಯಾತೋ ದುಕಾಮ್ ಮತ್ತು ರೋಯಿಂಗ್‌ನಿಂದ ಮುಚು ಮಿಥಿ ಸೇರಿದ್ದಾರೆ.

ಇನ್ನು ಸಿಕ್ಕಿಂನಲ್ಲಿ ಅಧಿಕಾರದಲ್ಲಿರುವ ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ 50 ಸ್ಥಾನಗಳನ್ನು ದಾಟಿದ್ದು, 32 ಸ್ಥಾನಗಳ ಪೈಕಿ 27ರಲ್ಲಿ ಮುನ್ನಡೆ ಸಾಧಿಸಿದೆ. ಪ್ರತಿಪಕ್ಷ ಸಿಕ್ಕಿಂ ಡೆಮಾಕ್ರಟಿಕ್ ಫ್ರಂಟ್ ಎರಡು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

ಸಿಕ್ಕಿಂನ 32 ಸ್ಥಾನಗಳಲ್ಲಿ ಆಡಳಿತಾರೂಢ ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ 29 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುತ್ತಿದ್ದಂತೆ ಸಂಭ್ರಮಾಚರಣೆಗಳು ಆರಂಭವಾಗಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಆರ್ಥಿಕ ಬಿಕ್ಕಟ್ಟು: ಇಂಟರ್ನೆಟ್‌ ಸ್ಥಗಿತಗೊಳಿಸಿದರೂ ನಿಲ್ಲದ ಉದ್ವಿಗ್ನತೆ; 13ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, ಈವರೆಗೂ 200ಕ್ಕೂ ಹೆಚ್ಚು ಮಂದಿ ಬಲಿ

4 ವರ್ಷಗಳಲ್ಲಿ ಮೊದಲ ಬಾರಿಗೆ ಖಜಾನೆ ಎಕ್ಸ್ಪೋಷರ್ ಕಡಿತಗೊಳಿಸಿದ ಆರ್‌ಬಿಐ

MGNREGA ಕುರಿತು ಚರ್ಚಿಸಲು ವಿಶೇಷ ಅಧಿವೇಶನ; ಜ. 26 ರಿಂದ ಕಾಂಗ್ರೆಸ್​​ನಿಂದ 'ಮನ್ರೇಗಾ ಉಳಿಸಿ' ಪಾದಯಾತ್ರೆ

ಭೀಕರ: ಡಿವೈಡರ್ ಮೇಲೆ ಹಾರಿ ಜನರ ಮೇಲೆ ಬಿದ್ದ ದುಬಾರಿ ಕಾರು, ಬದುಕಿದ್ದೇ ಪವಾಡ.. Video Viral

ಭಾರತ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ, ನೊಬೆಲ್​ ಶಾಂತಿ ಪ್ರಶಸ್ತಿಗೆ ನನ್ನಷ್ಟು ಅರ್ಹರು ಯಾರೂ ಇಲ್ಲ; ಡೊನಾಲ್ಡ್ ಟ್ರಂಪ್

SCROLL FOR NEXT