ಅರವಿಂದ್ ಕೇಜ್ರಿವಾಲ್ 
ದೇಶ

Delhi Excise Policy Case: ತಿಹಾರ್ ಜೈಲಿಗೆ ಶರಣಾದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್!

ದೆಹಲಿ ಅಬಕಾರಿ ನೀತಿ ಹಗರಣದ ಹವಾಲಾ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಇಂದು ತಿಹಾರ್ ಜೈಲಿಗೆ ಶರಣಾಗಿದ್ದಾರೆ.

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣದ ಹವಾಲಾ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಇಂದು ತಿಹಾರ್ ಜೈಲಿಗೆ ಶರಣಾಗಿದ್ದಾರೆ.

ಮನಿಲಾಂಡರಿಂಗ್ ಪ್ರಕರಣದಲ್ಲಿ ಈ ಹಿಂದೆ ಸುಪ್ರೀಂ ಕೋರ್ಟ್ ನೀಡಿದ್ದ ಮಧ್ಯಂತರ ಜಾಮೀನು ಜೂನ್ 1 ರಂದು ಕೊನೆಗೊಂಡ ಹಿನ್ನಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭಾನುವಾರ ತಿಹಾರ್ ಜೈಲಿಗೆ ಬಂದು ಅಧಿಕಾರಿಗಳ ಮುಂದೆ ಶರಣಾಗಿದ್ದಾರೆ.

ಈ ಹಿಂದೆ ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಪ್ರಚಾರ ನಡೆಸಲು ಅವರಿಗೆ ಜಾಮೀನು ನೀಡಲಾಗಿತ್ತು. ಇದೀಗ ಕೇಜ್ರಿವಾಲ್ ತಿಹಾರ್ ಜೈಲಿಗೆ ಬಂದು ಅಧಿಕಾರಿಗಳ ಮುಂದೆ ಶರಣಾಗಿದ್ದಾರೆ. ಶರಣಾಗುವ ಮುನ್ನ ಕೇಜ್ರಿವಾಲ್ ಅವರು ರಾಜ್ ಘಾಟ್‌ನಲ್ಲಿ ಮಹಾತ್ಮ ಗಾಂಧಿ ಅವರಿಗೆ ನಮನ ಸಲ್ಲಿಸಿದರು. ಬಳಿಕ ಕನ್ನಾಟ್ ನಲ್ಲಿರುವ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಇದಕ್ಕೂ ಮೊದಲು ಆಮ್ ಆದ್ಮಿ ಪಕ್ಷದ ಕಚೇರಿಯಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.

ಈ ವೇಳೆ, ''ನಾನು ಮತ್ತೆ ಜೈಲಿಗೆ ಹೋಗುತ್ತಿರುವುದು ಭ್ರಷ್ಟಾಚಾರದಲ್ಲಿ ತೊಡಗಿದ್ದಕ್ಕಾಗಿ ಅಲ್ಲ, ನಾನು ಸರ್ವಾಧಿಕಾರದ ವಿರುದ್ಧ ಧ್ವನಿ ಎತ್ತಿದ್ದರಿಂದ ಜೈಲಿಗೆ ಹೋಗುತ್ತಿದ್ದೇನೆ. ನನಗೆ ಸುಪ್ರೀಂ ಕೋರ್ಟ್ 21 ದಿನಗಳ (ಪರಿಹಾರ) ಅವಕಾಶ ನೀಡಿತು. ಈ 21 ದಿನಗಳು ಅವಿಸ್ಮರಣೀಯ. ನಾನು ಒಂದು ನಿಮಿಷವೂ ವ್ಯರ್ಥ ಮಾಡಲಿಲ್ಲ. ನಾನು ದೇಶವನ್ನು ಉಳಿಸಲು ಪ್ರಚಾರ ಮಾಡಿದ್ದೇನೆ.

ಎಎಪಿಗಿಂತ ಮೊದಲು ನನಗೆ ನನ್ನ ದೇಶ ಮುಖ್ಯ ಎಂದು ಕೇಜ್ರಿವಾಲ್ ಹೇಳಿದರು. ಅಂತೆಯೇ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಮೂರನೇ ಬಾರಿಗೆ ಅಧಿಕಾರಿದ ಗದ್ದುಗೆ ಏರಲಿದೆ ಎಂಬ ಭವಿಷ್ಯ ನುಡಿಯುವ ಎಲ್ಲಾ ಎಕ್ಸಿಟ್ ಪೋಲ್‌ಗಳು "ನಕಲಿ" ಎಂದು ಕೇಜ್ರಿವಾಲ್ ಪ್ರತಿಪಾದಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

IPL 2026: MI vs RCB; ವಾಂಖೆಡೆ ಕ್ರೀಡಾಂಗಣದಲ್ಲಿ ಇತಿಹಾಸ ಬರೆದ ಬೆಂಗಳೂರು, ಅತ್ಯಧಿಕ ಮೊತ್ತ!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

SCROLL FOR NEXT