ರಾಷ್ಟ್ರಪತಿ ದ್ರೌಪದಿ ಮುರ್ಮು 
ದೇಶ

LokSabha Election 2024 Results: ಸಂಸದರ ಖರೀದಿ, ಸಾಂವಿಧಾನಿಕ ಬಿಕ್ಕಟ್ಟು ಭೀತಿ- ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಬರೆದ ಪತ್ರದಲ್ಲಿ ನಿವೃತ್ತ ನ್ಯಾಯಾಧೀಶರ ಆತಂಕ!

ಲೋಕಸಭಾ ಚುನಾವಣೆ 2024 ರ ಮತ ಎಣಿಕೆ-ಫಲಿತಾಂಶ ಕ್ಕೆ ಇನ್ನು ಕೆಲವೇ ಗಂಟೆಗಳು ಬಾಕಿ ಇದೆ. ಈ ನಡುವೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಹೈಕೋರ್ಟ್ ನ 7 ನಿವೃತ್ತ ನ್ಯಾಯಾಧೀಶರು ಪತ್ರ ಬರೆದಿರುವುದು ಮಹತ್ವ ಪಡೆದುಕೊಂಡಿದೆ.

ನವದೆಹಲಿ: ಲೋಕಸಭಾ ಚುನಾವಣೆ 2024 ರ ಮತ ಎಣಿಕೆ-ಫಲಿತಾಂಶ ಕ್ಕೆ ಇನ್ನು ಕೆಲವೇ ಗಂಟೆಗಳು ಬಾಕಿ ಇದೆ. ಈ ನಡುವೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಹೈಕೋರ್ಟ್ ನ 7 ನಿವೃತ್ತ ನ್ಯಾಯಾಧೀಶರು ಪತ್ರ ಬರೆದಿರುವುದು ಮಹತ್ವ ಪಡೆದುಕೊಂಡಿದೆ.

ಫಲಿತಾಂಶದ ಬಳಿಕ ಪ್ರಜಾಪ್ರಭುತ್ವದ ಸ್ಥಾಪಿತ ಮಾದರಿಯನ್ನು ಪಾಲನೆ ಮಾಡಿ, ಚುನಾವಣಾ ಪೂರ್ವದಲ್ಲಿ ಏರ್ಪಟ್ಟಿದ್ದ ಮೈತ್ರಿಕೂಟದ ಪೈಕಿ ಯಾರಿಗೆ ಅತಿ ಹೆಚ್ಚು ಸ್ಥಾನಗಳು ಬರುವುದೋ ಅವರನ್ನು ಸರ್ಕಾರ ರಚನೆಗೆ ಆಹ್ವಾನಿಸಬೇಕು ಹಾಗೂ ಒಂದು ವೇಳೆ ಅತಂತ್ರ ಫಲಿತಾಂಶವಾದರೆ, ಸಂಸದರ ಖರೀದಿಯನ್ನು ಮುನ್ನೆಚ್ಚರಿಕಾ ಕ್ರಮ ಕೈಗೊಂಡು ತಡೆಗಟ್ಟಬೇಕೆಂದು ಪತ್ರದಲ್ಲಿ ನಿವೃತ್ತ ನ್ಯಾಯಾಧೀಶರು ಮನವಿ ಮಾಡಿದ್ದಾರೆ.

ಪ್ರಸ್ತುತ ಆಡಳಿತವು ಜನಾದೇಶವನ್ನು ಕಳೆದುಕೊಂಡರೆ, ಸುಗಮ ಅಧಿಕಾರದ ಪರಿವರ್ತನೆಯನ್ನು ಖಚಿತಪಡಿಸಿಕೊಳ್ಳುವ ಮೂಲಕ ಸಂವಿಧಾನವನ್ನು ಎತ್ತಿಹಿಡಿಯಬೇಕು ಎಂದು ನಿವೃತ್ತ ನ್ಯಾಯಮೂರ್ತಿಗಳು ಭಾರತದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಮತ್ತು ಮುಖ್ಯ ಚುನಾವಣಾ ಆಯುಕ್ತರನ್ನು ನಿವೃತ್ತ ನ್ಯಾಯಾಧೀಶರು ಒತ್ತಾಯಿಸಿದ್ದಾರೆ.

ಮದ್ರಾಸ್ ಹೈಕೋರ್ಟ್‌ನ 6 ಮಾಜಿ ನ್ಯಾಯಾಧೀಶರಾದ ಜಿಎಂ ಅಕ್ಬರ್ ಅಲಿ, ಅರುಣಾ ಜಗದೀಸನ್, ಡಿ ಹರಿಪರಂತಮನ್, ಪಿ ಆರ್ ಶಿವಕುಮಾರ್, ಸಿ ಟಿ ಸೆಲ್ವಂ, ಎಸ್ ವಿಮಲಾ ಮತ್ತು ಪಾಟ್ನಾ ಹೈಕೋರ್ಟ್‌ನ ಮಾಜಿ ನ್ಯಾಯಾಧೀಶರಾದ ಅಂಜನಾ ಪ್ರಕಾಶ್ ಅವರು ಬಹಿರಂಗ ಪತ್ರಕ್ಕೆ ಸಹಿ ಹಾಕಿದ್ದಾರೆ.

ಪ್ರಸ್ತುತ ಆಡಳಿತ ಜನರ ಆದೇಶವನ್ನು ಕಳೆದುಕೊಂಡರೆ, ಅಧಿಕಾರದ ಪರಿವರ್ತನೆಯು ಸುಗಮವಾಗಿರುವುದಿಲ್ಲ ಮತ್ತು ಸಾಂವಿಧಾನಿಕ ಬಿಕ್ಕಟ್ಟು ಉಂಟಾಗಬಹುದು ಎಂಬ "ನಿಜವಾದ ಕಾಳಜಿ"ಯಿಂದ ಪತ್ರ ಬರೆಯುತ್ತಿರುವುದಾಗಿ ನ್ಯಾಯಾಧೀಶರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ; ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ ಸುಪ್ರೀಂ ಕೋರ್ಟ್ ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

WPL 2026 auction: ಈ ಬಾರಿಯ 'ಮೋಸ್ಟ್ ಡಿಮ್ಯಾಂಡ್' ಆಟಗಾರ್ತಿ ಯಾರು?

SCROLL FOR NEXT