ರಾಷ್ಟ್ರಪತಿ ದ್ರೌಪದಿ ಮುರ್ಮು 
ದೇಶ

LokSabha Election 2024 Results: ಸಂಸದರ ಖರೀದಿ, ಸಾಂವಿಧಾನಿಕ ಬಿಕ್ಕಟ್ಟು ಭೀತಿ- ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಬರೆದ ಪತ್ರದಲ್ಲಿ ನಿವೃತ್ತ ನ್ಯಾಯಾಧೀಶರ ಆತಂಕ!

ಲೋಕಸಭಾ ಚುನಾವಣೆ 2024 ರ ಮತ ಎಣಿಕೆ-ಫಲಿತಾಂಶ ಕ್ಕೆ ಇನ್ನು ಕೆಲವೇ ಗಂಟೆಗಳು ಬಾಕಿ ಇದೆ. ಈ ನಡುವೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಹೈಕೋರ್ಟ್ ನ 7 ನಿವೃತ್ತ ನ್ಯಾಯಾಧೀಶರು ಪತ್ರ ಬರೆದಿರುವುದು ಮಹತ್ವ ಪಡೆದುಕೊಂಡಿದೆ.

ನವದೆಹಲಿ: ಲೋಕಸಭಾ ಚುನಾವಣೆ 2024 ರ ಮತ ಎಣಿಕೆ-ಫಲಿತಾಂಶ ಕ್ಕೆ ಇನ್ನು ಕೆಲವೇ ಗಂಟೆಗಳು ಬಾಕಿ ಇದೆ. ಈ ನಡುವೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಹೈಕೋರ್ಟ್ ನ 7 ನಿವೃತ್ತ ನ್ಯಾಯಾಧೀಶರು ಪತ್ರ ಬರೆದಿರುವುದು ಮಹತ್ವ ಪಡೆದುಕೊಂಡಿದೆ.

ಫಲಿತಾಂಶದ ಬಳಿಕ ಪ್ರಜಾಪ್ರಭುತ್ವದ ಸ್ಥಾಪಿತ ಮಾದರಿಯನ್ನು ಪಾಲನೆ ಮಾಡಿ, ಚುನಾವಣಾ ಪೂರ್ವದಲ್ಲಿ ಏರ್ಪಟ್ಟಿದ್ದ ಮೈತ್ರಿಕೂಟದ ಪೈಕಿ ಯಾರಿಗೆ ಅತಿ ಹೆಚ್ಚು ಸ್ಥಾನಗಳು ಬರುವುದೋ ಅವರನ್ನು ಸರ್ಕಾರ ರಚನೆಗೆ ಆಹ್ವಾನಿಸಬೇಕು ಹಾಗೂ ಒಂದು ವೇಳೆ ಅತಂತ್ರ ಫಲಿತಾಂಶವಾದರೆ, ಸಂಸದರ ಖರೀದಿಯನ್ನು ಮುನ್ನೆಚ್ಚರಿಕಾ ಕ್ರಮ ಕೈಗೊಂಡು ತಡೆಗಟ್ಟಬೇಕೆಂದು ಪತ್ರದಲ್ಲಿ ನಿವೃತ್ತ ನ್ಯಾಯಾಧೀಶರು ಮನವಿ ಮಾಡಿದ್ದಾರೆ.

ಪ್ರಸ್ತುತ ಆಡಳಿತವು ಜನಾದೇಶವನ್ನು ಕಳೆದುಕೊಂಡರೆ, ಸುಗಮ ಅಧಿಕಾರದ ಪರಿವರ್ತನೆಯನ್ನು ಖಚಿತಪಡಿಸಿಕೊಳ್ಳುವ ಮೂಲಕ ಸಂವಿಧಾನವನ್ನು ಎತ್ತಿಹಿಡಿಯಬೇಕು ಎಂದು ನಿವೃತ್ತ ನ್ಯಾಯಮೂರ್ತಿಗಳು ಭಾರತದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಮತ್ತು ಮುಖ್ಯ ಚುನಾವಣಾ ಆಯುಕ್ತರನ್ನು ನಿವೃತ್ತ ನ್ಯಾಯಾಧೀಶರು ಒತ್ತಾಯಿಸಿದ್ದಾರೆ.

ಮದ್ರಾಸ್ ಹೈಕೋರ್ಟ್‌ನ 6 ಮಾಜಿ ನ್ಯಾಯಾಧೀಶರಾದ ಜಿಎಂ ಅಕ್ಬರ್ ಅಲಿ, ಅರುಣಾ ಜಗದೀಸನ್, ಡಿ ಹರಿಪರಂತಮನ್, ಪಿ ಆರ್ ಶಿವಕುಮಾರ್, ಸಿ ಟಿ ಸೆಲ್ವಂ, ಎಸ್ ವಿಮಲಾ ಮತ್ತು ಪಾಟ್ನಾ ಹೈಕೋರ್ಟ್‌ನ ಮಾಜಿ ನ್ಯಾಯಾಧೀಶರಾದ ಅಂಜನಾ ಪ್ರಕಾಶ್ ಅವರು ಬಹಿರಂಗ ಪತ್ರಕ್ಕೆ ಸಹಿ ಹಾಕಿದ್ದಾರೆ.

ಪ್ರಸ್ತುತ ಆಡಳಿತ ಜನರ ಆದೇಶವನ್ನು ಕಳೆದುಕೊಂಡರೆ, ಅಧಿಕಾರದ ಪರಿವರ್ತನೆಯು ಸುಗಮವಾಗಿರುವುದಿಲ್ಲ ಮತ್ತು ಸಾಂವಿಧಾನಿಕ ಬಿಕ್ಕಟ್ಟು ಉಂಟಾಗಬಹುದು ಎಂಬ "ನಿಜವಾದ ಕಾಳಜಿ"ಯಿಂದ ಪತ್ರ ಬರೆಯುತ್ತಿರುವುದಾಗಿ ನ್ಯಾಯಾಧೀಶರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT