ಪ್ರೇಮ್ ಸಿಂಗ್ ತಮಾಂಗ್ 
ದೇಶ

ರಾಜ್ಯಪಾಲರನ್ನು ಭೇಟಿಯಾದ ಪ್ರೇಮ್ ಸಿಂಗ್ ತಮಾಂಗ್, ನೂತನ ಸರ್ಕಾರ ರಚನೆಗೆ ಹಕ್ಕು ಮಂಡನೆ

ಎಸ್‌ಕೆಎಂ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಪ್ರೇಮ್ ಸಿಂಗ್ ತಮಾಂಗ್ ಅವರು ಸೋಮವಾರ ರಾಜ್ಯಪಾಲ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಅವರನ್ನು ಭೇಟಿ ಮಾಡಿ ನೂತನ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು.

ಗ್ಯಾಂಗ್‌ಟಕ್: ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾದ (ಎಸ್‌ಕೆಎಂ)ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಪ್ರೇಮ್ ಸಿಂಗ್ ತಮಾಂಗ್ ಅವರು ಸೋಮವಾರ ರಾಜ್ಯಪಾಲ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಅವರನ್ನು ಭೇಟಿ ಮಾಡಿ ನೂತನ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು.

ಭಾನುವಾರ ರಾತ್ರಿ ಸಿಎಂ ಅಧಿಕೃತ ನಿವಾಸದಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಎಸ್‌ಕೆಎಂ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದ ಪ್ರೇಮ್ ಸಿಂಗ್ ತಮಾಂಗ್ ಅವರು ಇಂದು ಪಕ್ಷದ ನೂತನ ಶಾಸಕರೊಂದಿಗೆ ರಾಜಭವನಕ್ಕೆ ತೆರಳಿ, ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು. ರಾಜ್ಯಪಾಲರು ಎಲ್ಲಾ ಶಾಸಕರಿಗೆ ಅಭಿನಂದಿಸಿ ಶುಭ ಹಾರೈಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎರಡನೇ ಬಾರಿ ಸಿಕ್ಕಿಂ ಮುಖ್ಯಮಂತ್ರಿಯಾಗುತ್ತಿರುವ ಪ್ರೇಮ್ ಸಿಂಗ್ ತಮಾಂಗ್ ಅವರು ಯಾವಾಗ ಪ್ರಮಾಣವಚನ ಸ್ವೀಕರಿಸುತ್ತಾರೆ ಎಂಬುದು ತಕ್ಷಣಕ್ಕೆ ತಿಳಿದು ಬಂದಿಲ್ಲ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಏಪ್ರಿಲ್ 18 ರಂದು ನಡೆದ ಸಿಕ್ಕಿಂ ವಿಧಾನಸಭೆ ಚುನಾವಣೆಯ ಫಲಿತಾಂಶ ಭಾನುವಾರ ಪ್ರಕಟವಾಗಿದ್ದು, ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ(SKM) 32 ಸದಸ್ಯ ಬಲದ ವಿಧಾನಸಭೆಯಲ್ಲಿ 31 ಸ್ಥಾನಗಳನ್ನು ಗೆದ್ದುಕೊಂಡು ಸತತ ಎರಡನೇ ಅವಧಿಗೆ ಅಧಿಕಾರಕ್ಕೆ ಮರಳಿದೆ. ಪ್ರತಿಪಕ್ಷ ಎಸ್‌ಡಿಎಫ್ ಕೇವಲ ಒಂದು ಸ್ಥಾನವನ್ನು ಪಡೆದುಕೊಂಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಲಬುರಗಿ: ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ನಾಯಕತ್ವ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

SCROLL FOR NEXT