ಕೆ ಕವಿತಾ 
ದೇಶ

ಅಬಕಾರಿ ನೀತಿ ಪ್ರಕರಣ: BRS ನಾಯಕಿ ಕವಿತಾ ನ್ಯಾಯಾಂಗ ಬಂಧನ ವಿಸ್ತರಣೆ

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಬಿಆರ್‌ಎಸ್ ನಾಯಕಿ ಕೆ ಕವಿತಾ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ದೆಹಲಿ ನ್ಯಾಯಾಲಯವು ಜುಲೈ 3 ರವರೆಗೆ ಸೋಮವಾರ ವಿಸ್ತರಿಸಿದೆ.

ನವದೆಹಲಿ: ಆಪಾದಿತ ಅಬಕಾರಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಬಿಆರ್‌ಎಸ್ ನಾಯಕಿ ಕೆ ಕವಿತಾ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ದೆಹಲಿ ನ್ಯಾಯಾಲಯವು ಜುಲೈ 3 ರವರೆಗೆ ಸೋಮವಾರ ವಿಸ್ತರಿಸಿದೆ.

ಕವಿತಾ ಅವರ ವಿರುದ್ಧ ಪ್ರೊಡಕ್ಷನ್ ವಾರಂಟ್ ಹೊರಡಿಸಿದ ಹಿಂದಿನ ಆದೇಶದ ಅನ್ವಯ ಆರೋಪಿಯನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರು ನ್ಯಾಯಾಂಗ ಬಂಧನ ಅವರಧಿಯನ್ನು ವಿಸ್ತರಿಸಿದರು.

ದೆಹಲಿ ಅಪಕಾರಿ ಹಗರಣದಲ್ಲಿ ಇಡಿ ಮತ್ತು ಸಿಬಿಐ ದಾಖಲಿಸಿರುವ ಎರಡು ಪ್ರಕರಣಗಳಲ್ಲಿ ಕವಿತಾ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ.

ನ್ಯಾಯಾಲಯವು ಇದೇ ಪ್ರಕರಣದಲ್ಲಿ ಮೂವರು ಸಹ ಆರೋಪಿಗಳಾದ ಪ್ರಿನ್ಸ್, ದಾಮೋದರ್ ಮತ್ತು ಅರವಿಂದ್ ಸಿಂಗ್ ಅವರಿಗೆ ಜಾಮೀನು ನೀಡಿದೆ.

ಸದ್ಯ ರದ್ದಾಗಿರುವ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ 46 ವರ್ಷದ ಬಿಆರ್‌ಎಸ್ ನಾಯಕಿ ಕವಿತಾ ಅವರನ್ನು ಮಾರ್ಚ್ 15ರಂದು ಹೈದರಾಬಾದ್‌ನ ಬಂಜಾರಾ ಹಿಲ್ಸ್ ನಿವಾಸದಿಂದ ಇ.ಡಿ ಅಧಿಕಾರಿಗಳು ಬಂಧಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಗಾಂಧಿ ಜಯಂತಿ 2025: ರಾಜ್‌ಘಾಟ್‌ನಲ್ಲಿ ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಪುಷ್ಪ ನಮನ

ವಸ್ತುಸ್ಥಿತಿಯ ಬಗ್ಗೆ ಅರಿವಿಲ್ಲದೇ ಮಾತನಾಡುವ ವಿಪಕ್ಷಗಳ ಭವಿಷ್ಯ ನಿಜವಾಗದು: ಸಿಎಂ ಸಿದ್ದರಾಮಯ್ಯ

RSS ಶತಮಾನೋತ್ಸವ: ಈ ಅದ್ಭುತ ಪಯಣ ಭಾರತದ ದಿಕ್ಕನ್ನೇ ಬದಲಾಯಿಸಿದೆ; BJP

ದ್ವೇಷ, ಹಿಂಸೆ, ಅನ್ಯಾಯವೆಂಬ ಅಂಧಕಾರ ಆವರಿಸಿದಂತೆಲ್ಲಾ ಅದರಿಂದ ಹೊರಬರಲು ಮತ್ತೆ ಮತ್ತೆ ನೆನಪಾಗುವುದು ಬಾಪು: ಸಿಎಂ ಸಿದ್ದರಾಮಯ್ಯ

ಗೃಹಲಕ್ಷ್ಮಿ ಹಣದಿಂದ ವಾಷಿಂಗ್ ಮಷಿನ್ ಖರೀದಿ: ನವರಾತ್ರಿ ವೇಳೆ ಮಹಿಳೆಯೊಬ್ಬರ ಸಂಭ್ರಮಕ್ಕೆ ಯೋಜನೆ ಕಾರಣವಾಗಿರುವುದು ಸಾರ್ಥಕ ತರಿಸಿದೆ ಎಂದ ಸಿಎಂ

SCROLL FOR NEXT