ಚಂದ್ರಬಾಬು ನಾಯ್ಡು-ನಿತೀಶ್ ಕುಮಾರ್-ಶರದ್ ಪವಾರ್ 
ದೇಶ

ನಿತೀಶ್ ಗೆ ಉಪ ಪ್ರಧಾನಿ ಪಟ್ಟ; ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನ; ಚಂದ್ರಬಾಬುಗೆ INDIA ಬಿಗ್ ಆಫರ್?

2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟ 295 ಸ್ಥಾನಗಳಲ್ಲಿ ಗೆಲ್ಲುವುದು ಬಹುತೇಕ ಖಚಿತವಾಗಿದೆ. ಆದರೆ ಈ ಮಧ್ಯೆ INDIA ಮೈತ್ರಿಕೂಟ NDA ಮೈತ್ರಿಕೂಟದಲ್ಲಿರುವ ಪಕ್ಷಗಳನ್ನು ತಮ್ಮತ್ತ ಸೆಳೆಯಲು ಕಸರತ್ತು ನಡೆಸುತ್ತಿವೆ.

ನವದೆಹಲಿ: 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟ 295 ಸ್ಥಾನಗಳಲ್ಲಿ ಗೆಲ್ಲುವುದು ಬಹುತೇಕ ಖಚಿತವಾಗಿದೆ. ಆದರೆ ಈ ಮಧ್ಯೆ INDIA ಮೈತ್ರಿಕೂಟ NDA ಮೈತ್ರಿಕೂಟದಲ್ಲಿರುವ ಪಕ್ಷಗಳನ್ನು ತಮ್ಮತ್ತ ಸೆಳೆಯಲು ಕಸರತ್ತು ನಡೆಸುತ್ತಿವೆ. ಇದಕ್ಕಾಗಿ ಜೆಡಿಯು ಪಕ್ಷದ ಮುಖ್ಯಸ್ಥ ನಿತೀಶ್ ಕುಮಾರ್ ಹಾಗೂ ಟಿಡಿಪಿ ನೇತೃತ್ವದ ಚಂದ್ರಬಾಬು ನಾಯ್ಡುಗೆ ಬಿಗ್ ಆಫರ್ ಕೊಟ್ಟಿದ್ದಾರೆ.

ಇಂಡಿಯಾ ಮೈತ್ರಿಕೂಟದ ಜೊತೆ ಬಂದರೆ ನಿತೀಶ್ ಕುಮಾರ್ ರನ್ನು ಉಪ ಪ್ರಧಾನಿ ಹಾಗೂ ಆಂಧ್ರಪ್ರದೇಶಕ್ಕೆ ಸಿಎಂ ಆಗಲಿರುವ ಚಂದ್ರಬಾಬು ನಾಯ್ಡುಗೆ ಆಂಧ್ರಕ್ಕೆ ರಾಜ್ಯ ವಿಶೇಷ ಸ್ಥಾನಮಾನ ನೀಡುವ ಆಫರ್ ಅವರನ್ನು ಇಂಡಿಯಾ ಮೈತ್ರಿಕೂಟ ಕೊಟ್ಟಿದೆ. ಈ ಮೂಲಕ ಕೇಂದ್ರದಲ್ಲಿ ಬಿಜೆಪಿಯನ್ನು ಹೊರಗಿಡಲು ಇಂಡಿಯಾ ಮೈತ್ರಿಕೂಟ ಪ್ರಯತ್ನಿಸುತ್ತಿದೆ.

ಲೋಕಸಭೆಗೆ 272 ಸ್ಥಾನಗಳು ಸರಳ ಬಹುಮತವಾಗಿದ್ದು ಎನ್ಡಿಎ ಮೈತ್ರಕೂಟ 296 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಇನ್ನು 228 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿರುವ ಇಂಡಿಯಾ ಮೈತ್ರಿಕೂಟಕ್ಕೆ ಸರಳ ಬಹುಮತಕ್ಕೆ ಇನ್ನು 44 ಸ್ಥಾನಗಳು ಬೇಕಿರುವುದರಿಂದ ಸ್ವತಂತ್ರ್ಯವಾಗಿ ನಿಂತು ಗೆದ್ದಿರುವ ಅಭ್ಯರ್ಥಿಗಳನ್ನು ಹಾಗೂ ಎನ್ ಡಿಎ ಮೈತ್ರಿಕೂಟದಲ್ಲಿರುವ ಅಭ್ಯರ್ಥಿಗಳನ್ನು ತಮ್ಮತ್ತ ಸೆಳೆಯಲು ಕರಸತ್ತು ನಡೆಸುತ್ತಿದೆ.

ಲೋಕಸಭೆ ಚುನಾವಣೆಯಲ್ಲಿ ಆಂಧ್ರಪ್ರದೇಶದಲ್ಲಿ ಟಿಡಿಪಿ 16 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದರೆ ಬಿಹಾರದಲ್ಲಿ ಜೆಡಿಯು 14 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಎನ್ ಡಿಎ ಮೈತ್ರಿಕೂಟದಲ್ಲಿ ಈ ಎರಡು ಪಕ್ಷಗಳೇ ಪ್ರಮುಖ ಪಕ್ಷವಾಗಿರುವುದರಿಂದ ಬಿಜೆಪಿ ಸಹ ಮೈತ್ರಿಪಕ್ಷಗಳನ್ನು ಹಿಡಿದಿಟ್ಟುಕೊಳ್ಳುವ ಪ್ರಯತ್ನಗಳನ್ನು ನಡೆಸಿದೆ.

ಈ ಹಿನ್ನೆಲೆಯಲ್ಲಿ ಚಂದ್ರಬಾಬು ನಾಯ್ಡುಗೆ ಎನ್ ಡಿಎ ಮೈತ್ರಿಕೂಟದ ಸಂಚಾಲಕನ ಹುದ್ದೆಯನ್ನು ಆಫರ್ ಮಾಡಲಾಗುತ್ತಿದೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT