ಬಿಜೆಪಿ ಬೆಂಬಲಿಗರು ಸಂಭ್ರಮಾಚರಣೆಗೆ ಸಿದ್ಧತೆ ನಡೆಸುತ್ತಿರುವುದು  
ದೇಶ

Lok Sabha polls 2024 results: ಮತ ಎಣಿಕೆ ಬಿರುಸಿನಲ್ಲಿ, ಆರಂಭಿಕ ಟ್ರೆಂಡ್ ನಲ್ಲಿ ಎನ್ ಡಿಎ ಮುನ್ನಡೆ

ಒಂದೂವರೆ ತಿಂಗಳ ಕಾಲ ನಡೆದ 18 ನೇ ಲೋಕಸಭಾ ಸದಸ್ಯರ ಆಯ್ಕೆಗೆ ಮತದಾನ ಪ್ರಕ್ರಿಯೆಯ ನಂತರ ಇಂದು ಜೂನ್ 4ರಂದು ಅಂಚೆ ಮತ ಎಣಿಕೆ ಮುಕ್ತಾಯವಾಗಿ ವಿದ್ಯುನ್ಮಾನ ಮತ ಎಣಿಕೆಯ ಆರಂಭ ಪ್ರಕ್ರಿಯೆಯಲ್ಲಿ ದೇಶದಲ್ಲಿ ಒಟ್ಟಾರೆಯಾಗಿ ಎನ್ ಡಿಎ ಮೈತ್ರಿಕೂಟ ಅಭ್ಯರ್ಥಿಗಳು ಇಂಡಿಯಾ ಮೈತ್ರಿಕೂಟ ಅಭ್ಯರ್ಥಿಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ.

ನವದೆಹಲಿ: ಒಂದೂವರೆ ತಿಂಗಳ ಕಾಲ ನಡೆದ 18 ನೇ ಲೋಕಸಭಾ ಸದಸ್ಯರ ಆಯ್ಕೆಗೆ ಮತದಾನ ಪ್ರಕ್ರಿಯೆಯ ನಂತರ ಇಂದು ಜೂನ್ 4ರಂದು ಅಂಚೆ ಮತ ಎಣಿಕೆ ಮುಕ್ತಾಯವಾಗಿ ವಿದ್ಯುನ್ಮಾನ ಮತ ಎಣಿಕೆಯ ಆರಂಭ ಪ್ರಕ್ರಿಯೆಯಲ್ಲಿ ದೇಶದಲ್ಲಿ ಒಟ್ಟಾರೆಯಾಗಿ ಎನ್ ಡಿಎ ಮೈತ್ರಿಕೂಟ ಅಭ್ಯರ್ಥಿಗಳು ಇಂಡಿಯಾ ಮೈತ್ರಿಕೂಟ ಅಭ್ಯರ್ಥಿಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಹೆಚ್ಚಿನ ಚುನಾವಣೋತ್ತರ ಸಮೀಕ್ಷೆಗಳು ಭಾರತೀಯ ಜನತಾ ಪಾರ್ಟಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ(NDA) ಪರವಾಗಿ ಸ್ಪಷ್ಟ ಜನಾದೇಶವನ್ನು ನೀಡುತ್ತವೆ, ಎನ್ ಡಿಎ ಅಧಿಕಾರಕ್ಕೆ ಬಂದರೆ ಜವಾಹರಲಾಲ್ ನೆಹರು ನಂತರ ಈ ಸಾಧನೆ ಮಾಡಿದ ಏಕೈಕ ಪ್ರಧಾನಿ ನರೇಂದ್ರ ಮೋದಿಯವರಿಗೆ ಸಲ್ಲುತ್ತದೆ.

ಮತ್ತೊಂದೆಡೆ, ವಿರೋಧ ಪಕ್ಷವಾದ ಇಂಡಿಯನ್ ನ್ಯಾಷನಲ್ ಡೆವಲಪ್‌ಮೆಂಟ್ ಇನ್‌ಕ್ಲೂಸಿವ್ ಅಲೈಯನ್ಸ್ (INDIA) ಕೂಡ ಬಹುಮತದ ಅಂಕವನ್ನು ಮೀರುವ ಭರವಸೆಯಲ್ಲಿದೆ.

18ನೇ ಲೋಕಸಭೆಯನ್ನು ನಿರ್ಧರಿಸಲು ಮತ ಎಣಿಕೆ: ಲೋಕಸಭೆ ಚುನಾವಣೆಯ ಮತ ಎಣಿಕೆ ಮಂಗಳವಾರ ಬೆಳಗ್ಗೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಆರಂಭವಾಗಿದೆ.

ಲೋಕಸಭೆಯು 543 ಸದಸ್ಯರನ್ನು ಹೊಂದಿದ್ದರೆ, ಬಿಜೆಪಿಯ ಸೂರತ್ ಅಭ್ಯರ್ಥಿ ಮುಖೇಶ್ ದಲಾಲ್ ಅವಿರೋಧವಾಗಿ ಆಯ್ಕೆಯಾದ ನಂತರ 542 ಸ್ಥಾನಗಳಿಗೆ ಮತ ಎಣಿಕೆ ನಡೆಯುತ್ತಿದೆ.

ಚುನಾವಣಾ ನಿಯಮಗಳ ಪ್ರಕಾರ, ಮೊದಲು ಅಂಚೆ ಮತಪತ್ರಗಳನ್ನು ಎಣಿಕೆ ಮಾಡಲಾಗುವುದು. ಎಲೆಕ್ಟ್ರಾನಿಕ್ ಮತಯಂತ್ರಗಳಲ್ಲಿ (EVM) ದಾಖಲಾದ ಮತಗಳ ಎಣಿಕೆ ಪ್ರಕ್ರಿಯೆಯು 30 ನಿಮಿಷಗಳ ನಂತರ ಪ್ರಾರಂಭವಾಗಿದೆ.

ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕೂಡ ನಡೆಯುತ್ತಿದೆ, ಅಲ್ಲಿ ಲೋಕಸಭೆ ಚುನಾವಣೆಯೊಂದಿಗೆ ಏಕಕಾಲದಲ್ಲಿ ಮತದಾನ ನಡೆದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT