ರಾಹುಲ್ ಗಾಂಧಿ 
ದೇಶ

ಲೋಕಸಭೆ ಚುನಾವಣೆ: ಕಮಾಲ್ ಮಾಡಿದ ಉತ್ತರ ಪ್ರದೇಶ ಜನತೆ- ರಾಹುಲ್ ಗಾಂಧಿ

ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದ ಜನತೆ ಕಮಾಲ್ ಮಾಡಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಹೇಳಿದ್ದಾರೆ.

ನವದೆಹಲಿ: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದ ಜನತೆ ಕಮಾಲ್ ಮಾಡಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಹೇಳಿದ್ದಾರೆ.

ಎಐಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರ ಪ್ರದೇಶದ ಜನರು ದೇಶದ ರಾಜಕೀಯ ಮತ್ತು ಸಂವಿಧಾನದ ಅಪಾಯವನ್ನು ಅರ್ಥಮಾಡಿಕೊಂಡಿದ್ದು, ಸಂವಿಧಾನವನ್ನು ರಕ್ಷಿಸಿದ್ದಾರೆ. ಕಾಂಗ್ರೆಸ್ ಪಕ್ಷ ಮತ್ತು ಇಂಡಿಯಾ ಮೈತ್ರಿಕೂಟವನ್ನು ಬೆಂಬಲಿಸಿದ್ದಕ್ಕಾಗಿ ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದರು.

ಬಿಜೆಪಿ ಗೌರವಯುತವಾಗಿ ಮಾತನಾಡುವುದಿಲ್ಲ. ಆದರೆ ಕೆಎಲ್ ಶರ್ಮಾ ಕಳೆದ 40 ವರ್ಷಗಳಿಂದ ಅಮೇಥಿಯಲ್ಲಿ ಕೆಲಸ ಮಾಡುತ್ತಿದ್ದಾರೆ; ಅವರ ಗೆಲುವು ನಿಶ್ಚಿತವಾಗಿತ್ತು ಎಂದು ಹೇಳಿದ ರಾಹುಲ್, ವಯನಾಡು ಅಥವಾ ರಾಯ್ ಬರೇಲಿ ಎರಡರಲ್ಲಿ ಯಾವುದನ್ನು ಉಳಿಸಿಕೊಳ್ಳಬೇಕು ಎಂಬುದರ ಬಗ್ಗೆ ಶೀಘ್ರದಲ್ಲಿಯೇ ತೀರ್ಮಾನ ತೆಗೆದುಕೊಳ್ಳಲಾಗುವುದು, ತೆರೆಮರೆಯಲ್ಲಿ ಕೆಲಸ ಮಾಡಿದ ಪ್ರಿಯಾಂಕಾ ಗಾಂಧಿ ಅವರಿಗೂ ಧನ್ಯವಾದ ಸಲ್ಲಿಸಲಾಗುವುದು ಎಂದರು.

ಈ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಮಾತ್ರವಲ್ಲದೆ ಸಾಂವಿಧಾನಿಕ ಸಂಸ್ಥೆಗಳು, ದೇಶದ ಆಡಳಿತ ರಚನೆ, ಸಿಬಿಐ ಮತ್ತು ಇಡಿ ನ್ಯಾಯಾಂಗದ ವಿರುದ್ಧವೂ ಹೋರಾಡಿದ್ದೇವೆ ಏಕೆಂದರೆ ಈ ಎಲ್ಲಾ ಸಂಸ್ಥೆಗಳನ್ನು ಅಮಿತ್ ಶಾ ಮತ್ತು ನರೇಂದ್ರ ಮೋದಿ ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಆರೋಪಿಸಿದರು.

ಇಂಡಿಯಾ ಮೈತ್ರಿಕೂಟದಿಂದ ಸರ್ಕಾರ ರಚನೆಯ ಸಾಧ್ಯತೆಗಳ ಪ್ರಶ್ನೆಗೆ ಉತ್ತರಿಸಿದ ರಾಹುಲ್, ಮೈತ್ರಿ ಪಾಲುದಾರರೊಂದಿಗೆ ನಾಳೆ ಸಭೆ ನಡೆಸುತ್ತೇವೆ. ಮೈತ್ರಿ ಪಾಲುದಾರರನ್ನು ಗೌರವಿಸುತ್ತೇವೆ. ಅವರನ್ನು ಕೇಳದೆ ಹೇಳಿಕೆಗಳನ್ನು ನೀಡುವುದಿಲ್ಲ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT