ಎಂಜಿನಿಯರ್ ರಶೀದ್ 
ದೇಶ

ಸರ್ಕಾರ ಜನರ ತೀರ್ಪನ್ನು ಗೌರವಿಸಿ ಎಂಜಿನಿಯರ್ ರಶೀದ್ ಬಿಡುಗಡೆ ಮಾಡಬೇಕು: ಮುಫ್ತಿ ಆಗ್ರಹ

ಶೇಖ್ ಅಬ್ದುಲ್ ರಶೀದ್ ಅಲಿಯಾಸ್ ಇಂಜಿನಿಯರ್ ರಶೀದ್ ಅವರನ್ನು ಕೇಂದ್ರ ಸರ್ಕಾರ ಜನರ ತೀರ್ಪನ್ನು ಗೌರವಿಸಿ ಬಿಡುಗಡೆ ಮಾಡಬೇಕು ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಬುಧವಾರ ಆಗ್ರಹಿಸಿದ್ದಾರೆ.

ಶ್ರೀನಗರ: ಜೈಲಿನಲ್ಲಿದ್ದುಕೊಂಡೆ ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ರಾಜಕಾರಣಿ ಶೇಖ್ ಅಬ್ದುಲ್ ರಶೀದ್ ಅಲಿಯಾಸ್ ಇಂಜಿನಿಯರ್ ರಶೀದ್ ಅವರನ್ನು ಕೇಂದ್ರ ಸರ್ಕಾರ ಜನರ ತೀರ್ಪನ್ನು ಗೌರವಿಸಿ ಬಿಡುಗಡೆ ಮಾಡಬೇಕು ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಬುಧವಾರ ಆಗ್ರಹಿಸಿದ್ದಾರೆ.

ಭಯೋತ್ಪಾದನೆಗೆ ಹಣಕಾಸು ನೆರವು ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಇಂಜಿನಿಯರ್ ರಶೀದ್ ಅವರು, ಬಾರಾಮುಲ್ಲಾ ಕ್ಷೇತ್ರದಲ್ಲಿ ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಅವರ ವಿರುದ್ಧ ಕ್ಷೇತ್ರದಲ್ಲಿ ಎರಡು ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಈ ಕುರಿತು 'X' ನಲ್ಲಿ ಪೋಸ್ಟ್‌ ಮಾಡಿರುವ ಮುಫ್ತಿ, "ಲೋಕಸಭೆ ಚುನಾವಣೆಯಲ್ಲಿ ಗೆದ್ದಿದ್ದಕ್ಕಾಗಿ ಮಿಯಾನ್ ಅಲ್ತಾಫ್, ಅಗಾ ರುಹುಲ್ಲಾ, ಇಂಜಿನಿಯರ್ ರಶೀದ್ ಮತ್ತು ಹನೀಫಾ ಜಾನ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಕೇಂದ್ರ ಸರ್ಕಾರ ಜನರ ತೀರ್ಪನ್ನು ಗೌರವಿಸಿ ಇಂಜಿನಿಯರ್ ರಶೀದ್ ಅವರನ್ನು ಬಿಡುಗಡೆ ಮಾಡಬೇಕು" ಎಂದು ಹೇಳಿದ್ದಾರೆ.ಪ್ರಸ್ತುತ ತಿಹಾರ್ ಜೈಲಿನಲ್ಲಿರುವ ರಶೀದ್‌ ಅವರನ್ನು ಬಿಡುಗಡೆ ಮಾಡುವಂತೆ ಪಿಡಿಪಿ ಮುಖ್ಯಸ್ಥೆ ಪುತ್ರಿ ಇಲ್ತಿಜಾ ಮುಫ್ತಿ ಸಹ ಒತ್ತಾಯಿಸಿದ್ದಾರೆ.

ಪ್ರಸ್ತುತ ತಿಹಾರ್ ಜೈಲಿನಲ್ಲಿರುವ ರಶೀದ್‌ ಅವರನ್ನು ಬಿಡುಗಡೆ ಮಾಡುವಂತೆ ಪಿಡಿಪಿ ಮುಖ್ಯಸ್ಥೆ ಪುತ್ರಿ ಇಲ್ತಿಜಾ ಮುಫ್ತಿ ಸಹ ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT