ಇಂಡಿಯಾ ಬಣದ ನಾಯಕರ ಸಭೆ 
ದೇಶ

ಸಾಂವಿಧಾನಿಕ ಮೌಲ್ಯಗಳಿಗೆ ಬದ್ಧವಾಗಿರುವ ಎಲ್ಲಾ ಪಕ್ಷಗಳಿಗೆ ಸ್ವಾಗತ: ನಿತೀಶ್, ನಾಯ್ಡುಗೆ ಖರ್ಗೆ ಪರೋಕ್ಷ ಆಹ್ವಾನ

ಸಂವಿಧಾನದ ಪೀಠಿಕೆಯಲ್ಲಿ ಪ್ರತಿಪಾದಿಸಿರುವ ಮೌಲ್ಯಗಳಿಗೆ ಬದ್ಧವಾಗಿರುವ ಎಲ್ಲ ರಾಜಕೀಯ ಪಕ್ಷಗಳನ್ನು ಇಂಡಿಯಾ ಬಣ ಮುಕ್ತವಾಗಿ ಸ್ವಾಗತಿಸುತ್ತದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ನವದೆಹಲಿ: ಸಂವಿಧಾನದ ಪೀಠಿಕೆಯಲ್ಲಿ ಪ್ರತಿಪಾದಿಸಿರುವ ಮೌಲ್ಯಗಳಿಗೆ ಬದ್ಧವಾಗಿರುವ ಎಲ್ಲ ರಾಜಕೀಯ ಪಕ್ಷಗಳನ್ನು ಇಂಡಿಯಾ ಬಣ ಮುಕ್ತವಾಗಿ ಸ್ವಾಗತಿಸುತ್ತದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬುಧವಾರ ಪರೋಕ್ಷವಾಗಿ ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಹಾಗೂ ಟಿಡಿಪಿ ನಾಯಕ ಚಂದ್ರಬಾಬು ನಾಯ್ಡು ಅವರಿಗೆ ಆಹ್ವಾನ ನೀಡಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಉತ್ತಮ ಸಾಧನೆ ಮಾಡಿದ ನಂತರ ತಮ್ಮ ನಿವಾಸದಲ್ಲಿ ನಡೆದ ಮೊದಲ ಪ್ರತಿಪಕ್ಷಗಳ ಮಾತನಾಡಿದ ಖರ್ಗೆ, ಇಂಡಿಯಾ ಮೈತ್ರಿಕೂಟದ ಎಲ್ಲಾ ಪಕ್ಷಗಳು ಉತ್ತಮವಾಗಿ, ಒಗ್ಗಟ್ಟಿನಿಂದ ಮತ್ತು ದೃಢವಾಗಿ ಹೋರಾಡಿವೆ ಎಂದರು.

ಜನಾದೇಶವು ನಿರ್ಣಾಯಕವಾಗಿ ಮೋದಿಯವರ ವಿರುದ್ಧ ಬಂದಿದೆ. ಜನಾದೇಶ ಮೋದಿ ವಿರುದ್ಧ ಮತ್ತು ಅವರ ರಾಜಕೀಯದ ಶೈಲಿಯ ವಿರುದ್ಧವಾಗಿದೆ. ಇದು ಸ್ಪಷ್ಟವಾಗಿ ನೈತಿಕ ಸೋಲು. ವೈಯಕ್ತಿಕವಾಗಿ ಅವರಿಗೆ ದೊಡ್ಡ ರಾಜಕೀಯ ನಷ್ಟವಾಗಿದೆ. ಆದಾಗ್ಯೂ, ಅವರು ಜನರು ಇಚ್ಛೆಯನ್ನು ಬುಡಮೇಲು ಮಾಡಲು ನಿರ್ಧರಿಸಿದ್ದಾರೆ ಖರ್ಗೆ ಹೇಳಿದರು.

"ನಮ್ಮ ಸಂವಿಧಾನದ ಪೀಠಿಕೆಯಲ್ಲಿ ಪ್ರತಿಪಾದಿಸಲಾದ ಮೌಲ್ಯಗಳಿಗೆ ಬದ್ಧವಾಗಿರುವ ಎಲ್ಲಾ ಪಕ್ಷಗಳನ್ನು ಇಂಡಿಯಾ ಮೈತ್ರಿಕೂಟ ಸ್ವಾಗತಿಸುತ್ತದೆ" ಎಂದು ಕಾಂಗ್ರೆಸ್ ಮುಖ್ಯಸ್ಥರು ತಮ್ಮ ಆರಂಭಿಕ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇಂಡಿಯಾ ಬ್ಲಾಕ್ ಪಕ್ಷಗಳಿಗೆ ಧನ್ಯವಾದ ಅರ್ಪಿಸಿದ ಖರ್ಗೆ, "ನಾನು ಎಲ್ಲಾ ಇಂಡಿಯಾ ಮೈತ್ರಿಕೂಟದ ನಾಯಕರನ್ನು ಸ್ವಾಗತಿಸುತ್ತೇನೆ. ನಾವು ಚೆನ್ನಾಗಿ ಹೋರಾಡಿದ್ದೇವೆ, ಒಗ್ಗಟ್ಟಿನಿಂದ ಹೋರಾಡಿದ್ದೇವೆ, ದೃಢವಾಗಿ ಹೋರಾಡಿದ್ದೇವೆ" ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

SCROLL FOR NEXT