ತೇಜಸ್ವಿ ಯಾದವ್ 
ದೇಶ

'ಮೋದಿ ಫ್ಯಾಕ್ಟರ್ ಮುಗಿದಿದೆ': RJD ನಾಯಕ ತೇಜಸ್ವಿ ಯಾದವ್

18ನೇ ಲೋಕಸಭೆ ಚುನಾವಣೆಯ ಫಲಿತಾಂಶ ಪ್ರಕಟವಾದ ನಂತರ ಮೋದಿ ಅಂಶ ಮುಗಿದಿದೆ ಎಂಬುದು ಬಹಳ ಸ್ಪಷ್ಟವಾಗಿದೆ ಎಂದು ಆರ್ ಜೆಡಿ ನಾಯಕ ತೇಜಸ್ವಿ ಯಾದವ್ ಬುಧವಾರ ಹೇಳಿದ್ದಾರೆ.

ಪಾಟ್ನಾ: 18ನೇ ಲೋಕಸಭೆ ಚುನಾವಣೆಯ ಫಲಿತಾಂಶ ಪ್ರಕಟವಾದ ನಂತರ ಮೋದಿ ಅಂಶ ಮುಗಿದಿದೆ ಎಂಬುದು ಬಹಳ ಸ್ಪಷ್ಟವಾಗಿದೆ ಎಂದು ಆರ್ ಜೆಡಿ ನಾಯಕ ತೇಜಸ್ವಿ ಯಾದವ್ ಬುಧವಾರ ಹೇಳಿದ್ದಾರೆ.

ನವದೆಹಲಿಯಲ್ಲಿ INDIA ಬಣ ನಾಯಕರ ಸಭೆಗೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ದೊರೆತಿಲ್ಲ. ಹಾಗಾಗೀ ಮಿತ್ರ ಪಕ್ಷಗಳ ಮೇಲೆ ಅವಲಂಬಿತವಾಗಿದೆ. ಬಿಹಾರದಲ್ಲಿ ಆರ್ ಜೆಡಿ ಗರಿಷ್ಟ ಸಂಖ್ಯೆಯ ಮತಗಳನ್ನು ಪಡೆದಿದೆ. ನಮ್ಮ ಶೇಕಡಾವಾರು ಮತದಾನ ಹೆಚ್ಚಿದೆ. ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದವೆ. ದೇಶದ ಜನರು ಬಿಜೆಪಿಗೆ ಪಾಠ ಕಲಿಸಿದ್ದಾರೆ. ವಿಜಭನೆ ನೀತಿ ಮತ್ತು ದ್ವೇಷದ ರಾಜಕೀಯದ ವಿರುದ್ಧ ಮತ ಚಲಾಯಿಸಿದ್ದಾರೆ. ಸರ್ವಾಧಿಕಾರಿ ಆಡಳಿತವನ್ನು ತಡೆಗಟ್ಟಿದ್ದಾರೆ ಎಂದರು.

ದೇಶದ ಜನರು ಸಂವಿಧಾನ, ಪ್ರಜಾಪ್ರಭುತ್ವ ರಕ್ಷಣೆಗೆ ವೋಟ್ ಮಾಡಿದ್ದಾರೆ. ಅಯೋಧ್ಯೆಯಲ್ಲಿಯೂ ಇಂಡಿಯಾ ಬಣ ಗೆಲುವು ಸಾಧಿಸಿದ್ದಾರೆ. ಪ್ರಧಾನಿ ಮೋದಿ ಮುಸ್ಲಿಂ ಸಹೋದರರ ವಿರುದ್ಧ ಹೆಚ್ಚಾಗಿ ಮಾತನಾಡಿದ್ದರು. ಅವರಿಗೆ ರಾಮ ಕೂಡಾ ಪಾಠ ಕಲಿಸಿದ್ದಾರೆ. ನಮ್ಮ ಸಾಧನೆ ಅತ್ಯುತ್ತಮವಾಗಿದೆ. ನೈಜ ಆಧಾರಿತ ವಿಷಯಗಳ ಮೇಲೆ ಹೋರಾಟ ನಡೆಸಿದೇವು. ಅಯೋಧ್ಯೆಯಲ್ಲಿ ರಾಮ ಇಂಡಿಯಾ ಮೈತ್ರಿಗೆ ಆಶೀರ್ವಾದ ಮಾಡಿದ್ದಾನೆ. ಹಾಗಾಗೀ ಮೋದಿ ಅಂಶ ಮುಗಿದಿದೆ ಎಂಬುದು ಬಹಳ ಸ್ಪಷ್ಟವಾಗಿದೆ. ಸಂವಿಧಾನ ಮತ್ತು ಪ್ರಜಾಪ್ರಭುತ್ವ ರಕ್ಷಣೆಗೆಯಲ್ಲಿ ಯಶಸ್ಸು ಸಿಕ್ಕಿರುವುದಕ್ಕೆ ತುಂಬಾ ಸಂತಸವಾಗಿದೆ ಎಂದರು.

40 ಸ್ಥಾನವಿರುವ ಬಿಹಾರದಲ್ಲಿ ಜೆಡಿಯು 12, ಬಿಜೆಪಿ 12, ಆರ್ ಜೆಡಿ 4, ಕಾಂಗ್ರೆಸ್ 3 ಸ್ಥಾನಗಳಲ್ಲಿ ಗೆಲುವು ಸಾಧಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿ.ಕೆ ಶಿವಕುಮಾರ್, ಪರಸ್ಪರ ಆಲಿಂಗನ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT