ಮೈತ್ರಿ ಸಭೆಯ ನಂತರ NDA ಮೈತ್ರಿಕೂಟದ ಪಾಲುದಾರರೊಂದಿಗೆ ಪ್ರಧಾನಿ ನರೇಂದ್ರ ಮೋದಿ. PTI
ದೇಶ

NDA ಮೈತ್ರಿಕೂಟದ ನಾಯಕರಾಗಿ ಮೋದಿ ಆಯ್ಕೆ; ಜೂನ್ 8 ರಂದು ಮೂರನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣ

ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ(ಎನ್‌ಡಿಎ)ದ ನಾಯಕರಾಗಿ ನರೇಂದ್ರ ಮೋದಿ ಅವರನ್ನು ಬುಧವಾರ ಔಪಚಾರಿಕವಾಗಿ ಆಯ್ಕೆ ಮಾಡಲಾಗಿದೆ.

ನವದೆಹಲಿ: ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ(ಎನ್‌ಡಿಎ)ದ ನಾಯಕರಾಗಿ ನರೇಂದ್ರ ಮೋದಿ ಅವರನ್ನು ಬುಧವಾರ ಔಪಚಾರಿಕವಾಗಿ ಆಯ್ಕೆ ಮಾಡಲಾಗಿದ್ದು, ಜೂನ್ 8 ರಂದು ಮೂರನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಇಂದು ಸಂಜೆ ದೆಹಲಿಯಲ್ಲಿ ನಡೆದ ಎನ್ ಡಿಎ ನಾಯಕ ಸಭೆಯಲ್ಲಿ ಸರ್ಕಾರ ರಚನೆ ಬಗ್ಗೆ ಚರ್ಚಿಸಲಾಯಿತು. ಬಳಿಕ ನರೇಂದ್ರ ಮೋದಿ ಅವರನ್ನು ಮೈತ್ರಿಕೂಟದ ನಾಯಕರನ್ನಾಗಿ ಔಪಚಾರಿಕವಾಗಿ ಆಯ್ಕೆ ಮಾಡಲಾಯಿತು. ಇದು ಮೋದಿ ಮೂರನೇ ಅವಧಿಗೆ ಪ್ರಧಾನಿಯಾಗಲು ದಾರಿ ಮಾಡಿಕೊಟ್ಟಿತು.

ಇದೇ ವೇಳೆ ಬಡವರು, ಮಹಿಳೆಯರು, ಯುವಕರು, ರೈತರು ಮತ್ತು ಸಮಾಜದ ವಂಚಿತ ವರ್ಗಗಳ ಸೇವೆಗೆ ಮೈತ್ರಿ ಸರ್ಕಾರದ ಬದ್ಧತೆಯನ್ನು ಒತ್ತಿಹೇಳುವ ನಿರ್ಣಯವನ್ನು ಎನ್‌ಡಿಎ ನಾಯಕರು ಅಂಗೀಕರಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಮೋದಿ ಅಧ್ಯಕ್ಷತೆಯಲ್ಲಿ ನಡೆದ ಎನ್ ಡಿಎ ಸಭೆಯಲ್ಲಿ ಟಿಡಿಪಿ ಅಧ್ಯಕ್ಷ ಎನ್ ಚಂದ್ರಬಾಬು ನಾಯ್ಡು, ಜೆಡಿಯು ಮುಖ್ಯಸ್ಥ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಶಿವಸೇನೆ ನಾಯಕ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಎಲ್‌ಜೆಪಿ(ರಾಮ್ ವಿಲಾಸ್) ನಾಯಕ ಚಿರಾಗ್ ಪಾಸ್ವಾನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಅಮಿತ್ ಶಾ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರು ಕೂಡ ಈ ಸಭೆಯಲ್ಲಿ ಉಪಸ್ಥಿತರಿದ್ದರು.

ಟಿಡಿಪಿ 16, ಜೆಡಿಯು 12, ಶಿಂಧೆ ನೇತೃತ್ವದ ಶಿವಸೇನೆ 7 ಮತ್ತು ಎಲ್‌ಜೆಪಿ(ರಾಮ್ ವಿಲಾಸ್) ಐದು ಸ್ಥಾನಗಳನ್ನು ಗೆದ್ದು ಮೋದಿ ಮೂರನೇ ಬಾರಿಗೆ ಸರ್ಕಾರ ರಚನೆಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿವೆ.

ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ(ಎನ್‌ಡಿಎ) ನಾಯಕರು ಔಪಚಾರಿಕವಾಗಿ ಮೋದಿಯವರ ನಾಯಕತ್ವವನ್ನು ಬೆಂಬಲಿಸಿದ್ದು, ಬಿಜೆಪಿ ನೇತೃತ್ವದಲ್ಲಿ ಸರ್ಕಾರ ರಚನೆಗೆ ಬೆಂಬಲ ಪತ್ರ ನೀಡಿವೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಇನ್ನೂ ನನಸಾಗಿಲ್ಲ ದಶಕಗಳ ಕನಸು: ಹಾಸನ ವಿಮಾನ ನಿಲ್ದಾಣಕ್ಕೆ ಸಿಗದ ರೆಕ್ಕೆ, ಯೋಜನೆಗೆ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

SCROLL FOR NEXT