ಮಲ್ಲಿಕಾರ್ಜುನ ಖರ್ಗೆ 
ದೇಶ

ಶನಿವಾರ CWC ಸಭೆ ಕರೆದ ಮಲ್ಲಿಕಾರ್ಜುನ ಖರ್ಗೆ

ಲೋಕಸಭೆ ಚುನಾವಣೆ ಫಲಿತಾಂಶದ ಕುರಿತು ಚರ್ಚಿಸಲು ಜೂನ್ 8 ರಂದು ಕಾಂಗ್ರೆಸ್ ತನ್ನ ಕಾರ್ಯಕಾರಿ ಸಮಿತಿಯ ಸಭೆ ಕರೆದಿದೆ.

ನವದೆಹಲಿ: ಲೋಕಸಭೆ ಚುನಾವಣೆ ಫಲಿತಾಂಶದ ಕುರಿತು ಚರ್ಚಿಸಲು ಜೂನ್ 8 ರಂದು ಕಾಂಗ್ರೆಸ್ ತನ್ನ ಕಾರ್ಯಕಾರಿ ಸಮಿತಿಯ ಸಭೆ ಕರೆದಿದೆ.

ಜೂನ್ 4 ರಂದು ಲೋಕಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಈ ಕುರಿತು ಚರ್ಚಿಸಲು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಶನಿವಾರ ಸಿಡಬ್ಲ್ಯುಸಿ ಸಭೆ ಕರೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಶನಿವಾರ ಬೆಳಗ್ಗೆ 11 ಗಂಟೆಗೆ ಕಾಂಗ್ರೆಸ್ ಕೇಂದ್ರ ಕಚೇರಿಯಲ್ಲಿ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಕಾಂಗ್ರೆಸ್ ಚುನಾವಣೆಯಲ್ಲಿ ಎರಡನೇ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಮತ್ತು 2019 ರ ಲೋಕಸಭೆ ಚುನಾವಣೆಯಲ್ಲಿ 52 ಸ್ಥಾನ ಗೆದ್ದಿದ್ದ ಕಾಂಗ್ರೆಸ್ ಈ ಬಾರಿ 99 ಸ್ಥಾನ ಗೆದ್ದಿದೆ.

10 ವರ್ಷಗಳ ನಂತರ ಲೋಕಸಭೆಯಲ್ಲಿ ಪ್ರತಿಪಕ್ಷದ ನಾಯಕನ ಸ್ಥಾನವನ್ನು ಕಾಂಗ್ರೆಸ್ ಹೊಂದಲಿದೆ. 2014 ಮತ್ತು 2019 ರಲ್ಲಿ ಲೋಕಸಭೆ ಸ್ಥಾನಗಳ ಒಟ್ಟು ಸ್ಥಾನಗಳ ಶೇಕಡಾ 10 ಕ್ಕಿಂತ ಕಡಿಮೆಯಿದ್ದ ಕಾರಣ ಅಧಿಕೃತ ಪ್ರತಿಫಕ್ಷದ ಸ್ಥಾನ ಪಡೆಯಲು ವಿಫಲವಾಗಿತ್ತು.

ಸಭೆಯಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಉನ್ನತ ಕಾಂಗ್ರೆಸ್ ನಾಯಕರು ಭಾಗವಹಿಸಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT