ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ 
ದೇಶ

ದೆಹಲಿ: ಕೇಜ್ರಿವಾಲ್ ನಿವಾಸದಲ್ಲಿ AAP ಶಾಸಕರಿಂದ 'ತುರ್ತು' ಸಭೆ; ಹೊಸ ಮುಖ್ಯಮಂತ್ರಿ ಘೋಷಣೆ ಸಾಧ್ಯತೆ

ಆಡಳಿತರೂಢ ಆಮ್ ಆದ್ಮಿ ಪಕ್ಷ ಗುರುವಾರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದಲ್ಲಿ ಪಕ್ಷದ ಎಲ್ಲಾ ಶಾಸಕರ 'ತುರ್ತು' ಸಭೆ ಕರೆದಿದೆ.

ನವದೆಹಲಿ: ಆಡಳಿತರೂಢ ಆಮ್ ಆದ್ಮಿ ಪಕ್ಷ ಗುರುವಾರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದಲ್ಲಿ ಪಕ್ಷದ ಎಲ್ಲಾ ಶಾಸಕರ 'ತುರ್ತು' ಸಭೆ ಕರೆದಿದೆ.

ಮೂಲಗಳ ಪ್ರಕಾರ, ಮುಂಬರುವ ದಿನಗಳಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳುವ ಸಾಧ್ಯದೆ ಇದೆ. ಅರವಿಂದ್ ಕೇಜ್ರಿವಾಲ್ ಜೈಲಿನಲ್ಲಿರುವಾಗ, ಪಕ್ಷದ ಭವಿಷ್ಯದ ಹಿತದೃಷ್ಟಿಯಿಂದ ಹೊಸ ಮುಖ್ಯಮಂತ್ರಿಯನ್ನು ಘೋಷಿಸಬಹುದು.

ಜನವರಿ 2025 ರ ಅಂತ್ಯದ ವೇಳೆಗೆ ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಎಎಪಿ ಈ ಕ್ರಮಕ್ಕೆ ಮುಂದಾಗಿದೆ ಎನ್ನಲಾಗಿದೆ.

ದೆಹಲಿಯಲ್ಲಿ ಮೈತ್ರಿ ಮಾಡಿಕೊಂಡರೂ ಎಲ್ಲಾ ಏಳು ಲೋಕಸಭಾ ಸ್ಥಾನಗಳನ್ನು ಕಳೆದುಕೊಂಡಿರುವ ಎಎಪಿ ಮತ್ತು ಕಾಂಗ್ರೆಸ್ ತೀವ್ರ ಹಿನ್ನಡೆ ಅನುಭವಿಸಿದೆ. ಇದರ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

ಎಎಪಿ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನಡೆಸಿದ ಬಿರುಸಿನ ಚುನಾವಣಾ ಪ್ರಚಾರದ ನಂತರವೂ ನಾಲ್ಕು ಸ್ಥಾನಗಳಲ್ಲಿ ಸ್ಪರ್ಧಿಸಿದ್ದ ಎಎಪಿ ಕಠಿಣ ಹೋರಾಟ ಮಾಡುವಲ್ಲಿ ವಿಫಲವಾಗಿದೆ.

ಆದರೆ, ಈ ಫಲಿತಾಂಶ ಬಿಜೆಪಿಗೆ ಸಂದೇಶವನ್ನೂ ನೀಡಿದೆ. ನಗರ ಸ್ಥಾನಗಳಲ್ಲಿ ಪಕ್ಷವು ಮುನ್ನಡೆದಿದ್ದರೂ, ಎಲ್ಲಾ ಏಳರಲ್ಲಿ ವಿಜಯದ ಅಂತರವು ಗಮನಾರ್ಹವಾಗಿ ಕಡಿಮೆಯಾಗಿದೆ. ಇದು ರಾಷ್ಟ್ರ ರಾಜಧಾನಿಯಲ್ಲಿ ಹೆಚ್ಚು ಸ್ಪರ್ಧಾತ್ಮಕ ರಾಜಕೀಯ ಚಿತ್ರಣವನ್ನು ಸೂಚಿಸುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕರ್ನಾಟಕದ ಮುಕುಟಕ್ಕೆ ಮತ್ತೊಂದು ಗರಿ: ಬೆಂಗಳೂರು ಮೂಲದ ಮೇಜರ್ Swathi ShanthaKumarಗೆ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ!

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

SCROLL FOR NEXT