ಜೆಡಿಯು ವಕ್ತಾರ ಕೆ.ಸಿ.ತ್ಯಾಗಿ (Photo | PTI)
ದೇಶ

ಹೊಸ ಕ್ಯಾತೆ ತೆಗೆದ JDU: ಅಗ್ನಿವೀರ್ ಯೋಜನೆ ಮರುಪರಿಶೀಲಿಸುವಂತೆ ಒತ್ತಾಯ

‘ಅಗ್ನಿವೀರ್ ಯೋಜನೆ ಬಗ್ಗೆ ಒಂದು ವರ್ಗದ ಮತದಾರರು ತೀವ್ರ ಅಸಮಾಧಾನಗೊಂಡಿದ್ದಾರೆ. ಸಾರ್ವಜನಿಕರಿಂದ ಪ್ರಶ್ನಿಸಲ್ಪಟ್ಟಿರುವ ಯೋಜನೆಗಳ ಕುರಿತು ವಿವರವಾಗಿ ಚರ್ಚಿಸಿ ತೆಗೆದುಹಾಕಬೇಕು.

ನವದೆಹಲಿ: ‘ಅಗ್ನಿವೀರ್ ಯೋಜನೆ ಬಗ್ಗೆ ಒಂದು ವರ್ಗದ ಮತದಾರರು ತೀವ್ರ ಅಸಮಾಧಾನಗೊಂಡಿದ್ದಾರೆ. ಸಾರ್ವಜನಿಕರಿಂದ ಪ್ರಶ್ನಿಸಲ್ಪಟ್ಟಿರುವ ಯೋಜನೆಗಳ ಕುರಿತು ವಿವರವಾಗಿ ಚರ್ಚಿಸಿ ತೆಗೆದುಹಾಕಬೇಕು ಎಂದು ಜೆಡಿಯು ವಕ್ತಾರ ಕೆ.ಸಿ.ತ್ಯಾಗಿ ಅವರು ಗುರುವಾರ ಹೇಳಿದ್ದಾರೆ.

"ಏಕರೂಪ ನಾಗರಿಕ ಸಂಹಿತೆ ಬಗ್ಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ, ಬಿಹಾರ ಮುಖ್ಯಮಂತ್ರಿಗಳು ಕಾನೂನು ಆಯೋಗದ ಮುಖ್ಯಸ್ಥರಿಗೆ ಪತ್ರ ಬರೆದಿದ್ದಾರೆ. ನಾವು ಅದನ್ನು ವಿರೋಧಿಸುವುದಿಲ್ಲ ಆದರೆ ಎಲ್ಲಾ ಮಿತ್ರಪಕ್ಷಗಳೊಂದಿಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಬೇಕು" ಎಂದು ತ್ಯಾಗಿ ತಿಳಿಸಿದ್ದಾರೆ.

ಜಾತಿ ಆಧಾರಿತ ಜನಗಣತಿ ಕುರಿತು ಮಾತನಾಡಿದ ಕೆ.ಸಿ.ತ್ಯಾಗಿ, "ದೇಶದ ಯಾವ ಪಕ್ಷವೂ ಜಾತಿ ಆಧಾರಿತ ಜನಗಣತಿ ಬೇಡ ಎಂದು ಹೇಳಿಲ್ಲ. ಬಿಹಾರ ಅದಕ್ಕೆ ಮಾರ್ಗ ತೋರಿಸಿದೆ. ಪ್ರಧಾನಿ ಕೂಡ ಸರ್ವಪಕ್ಷ ನಿಯೋಗದಲ್ಲಿ ವಿರೋಧ ವ್ಯಕ್ತಪಡಿಸಿಲ್ಲ. ಜಾತಿ ಆಧಾರಿತ ಜನಗಣತಿಯನ್ನು ನಾವು ಮುಂದುವರಿಸುತ್ತೇವೆ ಎಂದು ಹೇಳಿದರು.

"ಯಾವುದೇ ಪೂರ್ವ ಷರತ್ತಿಲ್ಲದೆ ಬಿಜೆಪಿಗೆ ಬೇಷರತ್ ಬೆಂಬಲ ನೀಡಿದ್ದೇವೆ. ಆದರೆ ಬಿಹಾರಕ್ಕೆ ವಿಶೇಷ ಸ್ಥಾನಮಾನ ಪಡೆಯುವುದು ನಮ್ಮ ಹೃದಯದಲ್ಲಿದೆ..." ಎಂದು ಅವರು ತಿಳಿಸಿದ್ದಾರೆ.

ನಿನ್ನೆ ದೆಹಲಿಯಲ್ಲಿ ನಡೆದ ಎನ್ ಡಿಎ ನಾಯಕರ ಸಭೆಯಲ್ಲಿ ಜೆಡಿಯು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಭಾಗವಹಿಸಿ, ಕೇಂದ್ರದಲ್ಲಿ ಹೊಸ ಸರ್ಕಾರ ರಚಿಸಲು ಬಿಜೆಪಿಗೆ ಬೆಂಬಲ ನೀಡುವುದಾಗಿ ಪತ್ರ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT