ಎನ್ ಡಿಎ ಮೈತ್ರಿಕೂಟ ಸಭೆ 
ದೇಶ

NDA ಸಂಚಾಲಕ ಹುದ್ದೆಗೆ TDP ಬೇಡಿಕೆ?: ಬಿಜೆಪಿಯಲ್ಲಿ ಟೆನ್ಶನ್, ಇಕ್ಕಟ್ಟಿನ ಪರಿಸ್ಥಿತಿ!

ಎನ್ ಡಿಎ ಮೈತ್ರಿಕೂಟ ಕೇಂದ್ರದಲ್ಲಿ ಅಧಿಕಾರದ ಗದ್ದುಗೆ ಏರಲು ಸಜ್ಜಾಗುತ್ತಿದ್ದಂತೆ ಬಿಜೆಪಿ ನಂತರ ಅತಿ ಹೆಚ್ಚು ಸ್ಥಾನಗಳನ್ನು ಹೊಂದಿರುವ ಟಿಡಿಪಿ ಎನ್ ಡಿಎ ಸಂಚಾಲಕ ಹುದ್ದೆಗೆ ಬೇಡಿಕೆ ಮುಂದಿಡುತ್ತಿದೆ ಎಂಬ ಮಾತುಗಳು ದೆಹಲಿಯ ರಾಜಕೀಯ ಪಡಸಾಲೆಯಲ್ಲಿ ಕೇಳಿಬರುತ್ತಿದ್ದು, ಅದು ಬಿಜೆಪಿಗೆ ತೀವ್ರ ಇರಿಸುಮುರುಸು ಉಂಟುಮಾಡಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ನವದೆಹಲಿ: ಎನ್ ಡಿಎ ಮೈತ್ರಿಕೂಟ ಕೇಂದ್ರದಲ್ಲಿ ಅಧಿಕಾರದ ಗದ್ದುಗೆ ಏರಲು ಸಜ್ಜಾಗುತ್ತಿದ್ದಂತೆ ಬಿಜೆಪಿ ನಂತರ ಅತಿ ಹೆಚ್ಚು ಸ್ಥಾನಗಳನ್ನು ಹೊಂದಿರುವ ಟಿಡಿಪಿ ಎನ್ ಡಿಎ ಸಂಚಾಲಕ ಹುದ್ದೆಗೆ ಬೇಡಿಕೆ ಮುಂದಿಡುತ್ತಿದೆ ಎಂಬ ಮಾತುಗಳು ದೆಹಲಿಯ ರಾಜಕೀಯ ಪಡಸಾಲೆಯಲ್ಲಿ ಕೇಳಿಬರುತ್ತಿದೆ. ಇದು ಬಿಜೆಪಿಗೆ ತಲೆನೋವಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಎನ್‌ಡಿಎ ಸಂಚಾಲಕ ಸ್ಥಾನಕ್ಕಾಗಿ ಟಿಡಿಪಿ ಬಿಜೆಪಿ ಮುಂದೆ ಬೇಡಿಕೆಯಿಟ್ಟಿದೆ ಎಂಬುದು ಮೂಲಗಳನ್ನು ಆಧರಿಸಿದ ಮಾಧ್ಯಮ ವರದಿ. ಟಿಡಿಪಿ ಲೋಕಸಭೆ ಸ್ಪೀಕರ್ ಅಥವಾ ಎನ್‌ಡಿಎ ಸಂಚಾಲಕ ಹುದ್ದೆಯ ಬೇಡಿಕೆಯನ್ನು ಗಟ್ಟಿಯಾಗಿ ಮುಂದಿಡಲಿದೆ ಎಂದು ಹೇಳಲಾಗುತ್ತಿದೆ. ನಮ್ಮ ಪಕ್ಷದ ನಾಯಕರು ನಾಳೆ ನಡೆಯಲಿರುವ ಎನ್‌ಡಿಎ ಸಂಸದೀಯ ಪಕ್ಷದ ಸಭೆಯ ಮೊದಲು ಮಿತ್ರಪಕ್ಷಗಳ ಎಲ್ಲಾ ಸಂಭಾವ್ಯ ಬೇಡಿಕೆಗಳನ್ನು ಗಮನಿಸಲಿದೆ ಎಂದು ಟಿಎನ್‌ಐಇ ಪ್ರತಿನಿಧಿಗೆ ಬಿಜೆಪಿ ಹಿರಿಯ ನಾಯಕರೊಬ್ಬರು ಹೇಳಿದ್ದಾರೆ.

ವಾಸ್ತವವಾಗಿ, ಸಮ್ಮಿಶ್ರ ಸರ್ಕಾರದ ಸಂಪುಟದಲ್ಲಿ ಟಿಡಿಪಿ ಮತ್ತು ಜೆಡಿಯು ಬೇಡಿಕೆಗಳಿಗೆ ಸಂಬಂಧಿಸಿದಂತೆ ಹಲವು ಸುದ್ದಿಗಳು ಬರುತ್ತಿವೆ. ಸರ್ಕಾರ ರಚನೆಗೂ ಮುನ್ನ ಮಿತ್ರಪಕ್ಷಗಳೊಂದಿಗೆ ಮಾತನಾಡುವ ಕಾರ್ಯವನ್ನು ನಿಯೋಜಿಸಿರುವ ಹಿರಿಯ ನಾಯಕರು ಇತರ ಆಯ್ಕೆಗಳ ಬಗ್ಗೆಯೂ ನೋಡುತ್ತಿದ್ದಾರೆ.

ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರ ನಿವಾಸದಲ್ಲಿ ಇಂದು ನಡೆದ ಸಭೆಯಲ್ಲಿ ಮಿತ್ರಪಕ್ಷಗಳ ಸಚಿವ ಸ್ಥಾನದ ಹಂಚಿಕೆ ಮತ್ತು ಸಮ್ಮಿಶ್ರ ಸರ್ಕಾರಕ್ಕೆ ತಮ್ಮ ಪಕ್ಷದೊಳಗಿನ ಸಂಭಾವ್ಯರನ್ನು ಆಯ್ಕೆ ಮಾಡುವುದು ಮುಂತಾದ ವಿಷಯಗಳ ಕುರಿತು ಚರ್ಚಿಸಲಾಯಿತು. ಟಿಡಿಪಿ ಎನ್‌ಡಿಎ ಸಂಚಾಲಕ ಮತ್ತು ಲೋಕಸಭಾ ಸ್ಪೀಕರ್ ಹುದ್ದೆಗಳೆರಡಕ್ಕೂ ಬೇಡಿಕೆ ಇಟ್ಟರೆ ಬಿಜೆಪಿಯಿಂದ ಪ್ರತಿರೋಧ ಎದುರಿಸಬೇಕಾಗುತ್ತದೆ ಎಂದು ಹಿರಿಯ ನಾಯಕರೊಬ್ಬರು ಹೇಳುತ್ತಾರೆ.

ರಾಷ್ಟ್ರೀಯ ಅಭಿವೃದ್ಧಿಗಾಗಿ ಮೋದಿ 3.0 ಸರ್ಕಾರದ ನೇತೃತ್ವ ವಹಿಸಲು ಎನ್ ಡಿಎ ನಾಯಕರು ನರೇಂದ್ರ ಮೋದಿ ಅವರನ್ನು ತಮ್ಮ ನಾಯಕನನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಿದ್ದಾರೆ. ಈ ಮೈತ್ರಿಕೂಟದಲ್ಲಿರುವ ಪ್ರತಿಯೊಬ್ಬರೂ ಸರ್ಕಾರದ ಸುಗಮ ರಚನೆ ಮತ್ತು ಕಾರ್ಯನಿರ್ವಹಣೆಗೆ ಬದ್ಧರಾಗಿದ್ದಾರೆ. ಮುಂದಿನ ದಿನಗಳಲ್ಲಿ ದುರದೃಷ್ಟಕರ ಘಟನೆಗಳು ನಡೆದರೆ ಇದು ಬಿಜೆಪಿಗೆ ಮಾತ್ರವಲ್ಲದೆ, ಎನ್ ಡಿಎ ಸರ್ಕಾರಕ್ಕೆ ತೊಂದರೆಯುಂಟುಮಾಡಿದವರ ಭವಿಷ್ಯಕ್ಕೂ ತೊಂದರೆಯಾಗುತ್ತದೆ ಎಂದು ಬಿಜೆಪಿ ಮೂಲಗಳು ಹೇಳುತ್ತವೆ.

ವಾಸ್ತವವಾಗಿ, ಬಿಹಾರ ಮತ್ತು ಆಂಧ್ರ ಪ್ರದೇಶಕ್ಕೆ ವಿಶೇಷ ಆರ್ಥಿಕ ಪ್ಯಾಕೇಜ್‌ಗಳಿಗಾಗಿ ಜೆಡಿಯು ಮತ್ತು ಟಿಡಿಪಿ ಎರಡರ ಬೇಡಿಕೆಗಳನ್ನು ಬಿಜೆಪಿ ನಾಯಕತ್ವವು ಪರಿಗಣಿಸುವ ನಿರೀಕ್ಷೆಯಿದೆ, ಆದರೆ ಎನ್‌ಡಿಎ ಸಂಚಾಲಕ ಅಥವಾ ಲೋಕಸಭೆ ಸ್ಪೀಕರ್‌ನಂತಹ ಮಿತ್ರಪಕ್ಷಗಳ ಪ್ರತಿಯೊಂದು ಬೇಡಿಕೆಯನ್ನು ಪೂರೈಸುವುದು ಅಸಾಧ್ಯವೆಂದು ತೋರುತ್ತದೆ ಎಂದು ಬಿಜೆಪಿಗೆ ನಿಕಟವಾಗಿರುವ ರಾಜಕೀಯ ವೀಕ್ಷಕರು ಹೇಳಿದ್ದಾರೆ.

ವಾಸ್ತವವಾಗಿ, ಮೈತ್ರಿಕೂಟದ ಸಂಚಾಲಕ ಹುದ್ದೆಯು ಅತಿ ಹೆಚ್ಚು ಸಂಸದರನ್ನು ಹೊಂದಿರುವ ಪಕ್ಷದೊಂದಿಗೆ ಉಳಿಯುತ್ತದೆ ಅಥವಾ ಮೈತ್ರಿಯಲ್ಲಿ ಎರಡನೇ ಅಥವಾ ಮೂರನೇ ಅತಿ ಹೆಚ್ಚು ಸಂಸದರನ್ನು ಹೊಂದಿರುವ ಪಕ್ಷಕ್ಕೆ ಹೋಗುತ್ತದೆ. ಲೋಕಸಭೆ ಸ್ಪೀಕರ್ ಸ್ಥಾನ ಟಿಡಿಪಿಗೆ ಹೋದರೆ, ಜೆಡಿಯು ಎನ್‌ಡಿಎ ಸಂಚಾಲಕ ಸ್ಥಾನಕ್ಕೆ ಸಹಜವಾಗಿ ಹಕ್ಕುದಾರರಾಗಿ ಹೊರಹೊಮ್ಮಬಹುದು ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಲಬುರಗಿ: ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ನಾಯಕತ್ವ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

SCROLL FOR NEXT