ಚಂದ್ರಬಾಬು ನಾಯ್ಡು 
ದೇಶ

ಆಂಧ್ರ ಪ್ರದೇಶ: ಜೂನ್ 12 ರಂದು ನೂತನ ಸಿಎಂ ಆಗಿ ಚಂದ್ರಬಾಬು ನಾಯ್ಡು ಪದಗ್ರಹಣ

ಆಂಧ್ರ ಪ್ರದೇಶದ ನೂತನ ಸಿಎಂ ಆಗಿ ಚಂದ್ರಬಾಬು ನಾಯ್ಡು ಜೂನ್ 12 ರಂದು ಪದಗ್ರಹಣ ಮಾಡಲಿದ್ದಾರೆ. ಅಂದು ಸಂಜೆ 4.55ಕ್ಕೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಟಿಡಿಪಿ ನಾಯಕ ಕೆ.ರಘುರಾಮ ಕೃಷ್ಣ ರಾಜು ಶುಕ್ರವಾರ ಮಾಹಿತಿ ನೀಡಿದ್ದಾರೆ.

ವಿಜಯವಾಡ: ಆಂಧ್ರಪ್ರದೇಶದ ನೂತನ ಸಿಎಂ ಆಗಿ ಚಂದ್ರಬಾಬು ನಾಯ್ಡು ಜೂನ್ 12 ರಂದು ಪದಗ್ರಹಣ ಮಾಡಲಿದ್ದಾರೆ. ಅಂದು ಸಂಜೆ 4.55ಕ್ಕೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಟಿಡಿಪಿ ನಾಯಕ ಕೆ.ರಘುರಾಮ ಕೃಷ್ಣ ರಾಜು ಶುಕ್ರವಾರ ಮಾಹಿತಿ ನೀಡಿದ್ದಾರೆ.

'ಇದು ರಾಜ್ಯದ ಜನತೆಗೆ ಅತ್ಯಂತ ಸುಂದರ ಕ್ಷಣವಾಗಿರಲಿದೆ. ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಚಂದ್ರಬಾಬು ನಾಯ್ಡು, ಪವನ್ ಕಲ್ಯಾಣ್ ಅವರನ್ನು ಶ್ಲಾಘಿಸಿದ್ದಾರೆ. ಈ ಇಬ್ಬರು ನಾಯಕರು ಮೋದಿ ಅವರಿಗೆ ಹೆಚ್ಚಿನ ಗೌರವ ನೀಡಿದ್ದಾರೆ. ಮಾಜಿ ಸಿಎಂ ಜಗನ್ ಮೋಹನ್ ರೆಡ್ಡಿ ಅವರಿಂದ ಆಗಿರುವ ಹಾನಿ ಸರಿಪಡಿಸಲು ಕೇಂದ್ರ ಸರ್ಕಾರದ ಹೆಚ್ಚಿನ ಸಹಕಾರದ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ.

ನೂತನ ಮೋದಿ ಸಂಪುಟದಲ್ಲಿ ನಿರ್ದಿಷ್ಟ ಸಚಿವ ಸ್ಥಾನದ ಬಗ್ಗೆ ಟಿಡಿಪಿ ಏನಾದರೂ ಬೇಡಿಕೆ ಇಟ್ಟಿದ್ದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಕೆ. ರಘು ರಾಮ ಕೃಷ್ಣ ರಾಜು, "ಇದು ನಾನು ಪ್ರತಿಕ್ರಿಯಿಸುವ ವಿಷಯವಲ್ಲ. ಆದರೆ ನಮ್ಮ ಪಕ್ಷದ ನಾಯಕರು ಬೇಡಿಕೆ ಇಡುವಂತಹ ವ್ಯಕ್ತಿಯಲ್ಲ. ಅವರ ಉತ್ತಮ ಸಂಬಂಧದ ಬಲದಿಂದ ಎಷ್ಟು ಸಾಧ್ಯವೋ ಅಷ್ಟು ಹೊರತರಬಹುದು ಎಂದು ಭಾವಿಸುತ್ತೇನೆ. ಆದರೆ ಅವರು ಎಂದಿಗೂ ಬೇಡಿಕೆ ಇಡುವುದಿಲ್ಲ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT