ನಿತೀಶ್ ಕುಮಾರ್-ನರೇಂದ್ರ ಮೋದಿ ANI
ದೇಶ

ಅಲ್ಲಿ ಇಲ್ಲಿ ಅಲ್ಪ ಸ್ವಲ್ಪ ಗೆದ್ದವರು ಮುಂದಿನ ಬಾರಿ ಎಲ್ಲೆಡೆಯೂ ಸೋಲುತ್ತಾರೆ: ನಿತೀಶ್ ಕುಮಾರ್

ಲೋಕಸಭೆ ಚುನಾವಣೆ ಫಲಿತಾಂಶದ ನಂತರ ನಿತೀಶ್ ಕುಮಾರ್ ಮತ್ತು ಚಂದ್ರಬಾಬು ನಾಯ್ಡು ನಿಲುವಿನತ್ತ ಎಲ್ಲರ ಕಣ್ಣು ನೆಟ್ಟಿತ್ತು. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಜನತಾ ದಳ ಯುನೈಟೆಡ್ (ಜೆಡಿಯು) ವಕ್ತಾರರು ಎನ್‌ಡಿಎಯಲ್ಲಿ ಉಳಿಯುವ ಬಗ್ಗೆ ಮಾತನಾಡಿದ್ದಾರೆ.

ನವದೆಹಲಿ: ಲೋಕಸಭೆ ಚುನಾವಣೆ ಫಲಿತಾಂಶದ ನಂತರ ನಿತೀಶ್ ಕುಮಾರ್ ಮತ್ತು ಚಂದ್ರಬಾಬು ನಾಯ್ಡು ನಿಲುವಿನತ್ತ ಎಲ್ಲರ ಕಣ್ಣು ನೆಟ್ಟಿತ್ತು. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಜನತಾ ದಳ ಯುನೈಟೆಡ್ (ಜೆಡಿಯು) ವಕ್ತಾರರು ಎನ್‌ಡಿಎಯಲ್ಲಿ ಉಳಿಯುವ ಬಗ್ಗೆ ಮಾತನಾಡಿದ್ದಾರೆ.

ಇದೀಗ ನಿತೀಶ್ ಕುಮಾರ್ ಕೂಡ ಪ್ರಧಾನಿ ಮೋದಿ ಸಮ್ಮುಖದಲ್ಲಿ ಇದನ್ನು ಪುನರುಚ್ಚರಿಸಿದ್ದಾರೆ. ಎನ್‌ಡಿಎ ನಾಯಕನ ಆಯ್ಕೆ ಮಾಡಲು ನಡೆದ ಸಭೆಯಲ್ಲಿ ರಾಜನಾಥ್ ಸಿಂಗ್ ಅವರು ಪ್ರಧಾನಿ ಹುದ್ದೆಗೆ ನರೇಂದ್ರ ಮೋದಿ ಅವರ ಹೆಸರನ್ನು ಪ್ರಸ್ತಾಪಿಸಿದರು. ಜೆಡಿಯು ಅಧ್ಯಕ್ಷ ನಿತೀಶ್ ಕುಮಾರ್ ಕೂಡ ಈ ಪ್ರಸ್ತಾವನೆಯನ್ನು ಅನುಮೋದಿಸಿದ್ದಾರೆ.

ಪ್ರಧಾನಿ ಹುದ್ದೆಗೆ ನರೇಂದ್ರ ಮೋದಿ ಅವರ ಹೆಸರನ್ನು ಅನುಮೋದಿಸಿದ ನಿತೀಶ್ ಕುಮಾರ್, ಎಲ್ಲರೂ ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಹೇಳಿದರು. ಯಾವುದೇ ಕೆಲಸ ಉಳಿದಿದ್ದರೂ ಪ್ರಧಾನಿ ಮೋದಿ ಪೂರ್ಣಗೊಳಿಸುತ್ತಾರೆ. ಬಿಹಾರದ ಉಳಿದ ಕಾಮಗಾರಿ ಪೂರ್ಣಗೊಳ್ಳಲಿದೆ. ಈ ವೇಳೆ ನಿತೀಶ್‌ ಕುಮಾರ್‌ ಅಲ್ಲಿ ಇಲ್ಲಿ ಅಲ್ಪ ಸ್ವಲ್ಪ ಗೆದ್ದವರು ಮುಂದಿನ ಬಾರಿ ಸ್ಪರ್ಧಿಸಿದರೆ ಅವರು ಸೋಲುತ್ತಾರೆ ಎಂದು ನಿತೀಶ್ ಕುಮಾರ್ ಹೇಳಿದರು. ಇದಕ್ಕೆ ಪ್ರಧಾನಿ ಮೋದಿ ಮುಗುಳ್ನಕ್ಕರು.

ಈ ಬಾರಿ ಸೋತಿರುವ ಎಲ್ಲ ಸ್ಥಾನಗಳನ್ನು ಎನ್‌ಡಿಎ ಗೆಲ್ಲಲಿದೆ ಎಂದು ಭರವಸೆ ವ್ಯಕ್ತಪಡಿಸಿದರು. ದೇಶ ಮತ್ತು ಬಿಹಾರ ಅಭಿವೃದ್ಧಿ ಪಥದಲ್ಲಿ ಮುನ್ನಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ನಿತೀಶ್ ಕುಮಾರ್, ನಿಮ್ಮ (ಪಿಎಂ ಮೋದಿ) ಆಶಯದಂತೆ ನಾವು ನಿಮ್ಮನ್ನು ಬೆಂಬಲಿಸುತ್ತೇವೆ ಎಂದು ಭರವಸೆ ನೀಡಿದರು.

ಶೀಘ್ರ ಕಾಮಗಾರಿ ಆರಂಭಿಸುವಂತೆ ಪ್ರಧಾನಿ ಮೋದಿಯವರನ್ನು ಒತ್ತಾಯಿಸಿದ ಅವರು, ನಿಮ್ಮ ಕೆಲಸವನ್ನು ಆದಷ್ಟು ಬೇಗ ಆರಂಭಿಸಿ ಎಂದು ಹೇಳಿದರು. ಪ್ರಮಾಣ ವಚನಕ್ಕೆ ಸಂಬಂಧಿಸಿದಂತೆ ನಿತೀಶ್, ಭಾನುವಾರಕ್ಕೆ ದಿನ ನಿಗದಿಯಾಗಿದೆ ಆದರೆ ಇಂದು ಕೂಡ ಆಗಿದ್ದರೆ ಚೆನ್ನಾಗಿರುತ್ತಿತ್ತು ಎಂದು ಹೇಳಿದರು. ನರೇಂದ್ರ ಮೋದಿ ಕಳೆದ 10 ವರ್ಷಗಳಿಂದ ಪ್ರಧಾನಿಯಾಗಿದ್ದು, ಮತ್ತೊಮ್ಮೆ ಪ್ರಧಾನಿಯಾಗಲಿರುವುದು ಸಂತಸದ ವಿಷಯ ಎಂದು ನಿತೀಶ್ ಕುಮಾರ್ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್, ಇಂದು ರಾಜೀನಾಮೆ ಅನುಮಾನ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಸಿಎಂ ಕುರ್ಚಿ ಕದನ: ಸಿದ್ದರಾಮಯ್ಯ ಮನೆ ಮುಂದೆ ಬೆಂಬಲಿಗರ ಶಕ್ತಿ ಪ್ರದರ್ಶನ, ರಾಜೀನಾಮೆ ನೀಡದಂತೆ ಆಗ್ರಹ..!

SCROLL FOR NEXT