ನವದೆಹಲಿಯ ನರೇಲಾದಲ್ಲಿ ಕಾರ್ಖಾನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡ ಸ್ಥಳದ ದೃಶ್ಯ. Photo | PTI
ದೇಶ

ದೆಹಲಿ: ಆಹಾರ ಸಂಸ್ಕರಣಾ ಘಟಕದಲ್ಲಿ ಬೆಂಕಿ ಅವಘಡ; 3 ಕಾರ್ಮಿಕರು ಸಾವು, ಆರು ಮಂದಿಗೆ ಗಾಯ

ದೆಹಲಿಯ ನರೇಲಾ ಕೈಗಾರಿಕಾ ಪ್ರದೇಶದಲ್ಲಿ ಶನಿವಾರ ಮುಂಜಾನೆ ಆಹಾರ ಸಂಸ್ಕರಣಾ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡು ಸ್ಫೋಟ ಸಂಭವಿಸಿದ ಪರಿಣಾಮ ಮೂವರು ಕಾರ್ಮಿಕರು ಸಾವಿಗೀಡಾಗಿದ್ದಾರೆ ಮತ್ತು ಆರು ಮಂದಿ ಗಾಯಗೊಂಡಿದ್ದಾರೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ನವದೆಹಲಿ: ಇಲ್ಲಿನ ನರೇಲಾ ಕೈಗಾರಿಕಾ ಪ್ರದೇಶದಲ್ಲಿ ಶನಿವಾರ ಮುಂಜಾನೆ ಆಹಾರ ಸಂಸ್ಕರಣಾ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡು ಸ್ಫೋಟ ಸಂಭವಿಸಿದ ಪರಿಣಾಮ ಮೂವರು ಕಾರ್ಮಿಕರು ಸಾವಿಗೀಡಾಗಿದ್ದಾರೆ ಮತ್ತು ಆರು ಮಂದಿ ಗಾಯಗೊಂಡಿದ್ದಾರೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಹೆಸರುಬೇಳೆಯನ್ನು ಸಂಸ್ಕರಿಸುವ ಶಾಯಮ್ ಕೃಪಾ ಫುಡ್ಸ್ ಪ್ರೈವೇಟ್ ಲಿಮಿಟೆಡ್‌ನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಕುರಿತು ಮುಂಜಾನೆ 3.35 ಕ್ಕೆ ತಮಗೆ ಕರೆ ಬಂದಿದೆ ಎಂದು ಅವರು ಹೇಳಿದರು.

ಬೆಂಕಿಯು ಕ್ಷಣಾರ್ಧದಲ್ಲಿ ಕಾರ್ಖಾನೆಯನ್ನು ಆವರಿಸಿದೆ. ಈ ವೇಳೆ ಕೆಲವು ಕಾರ್ಮಿಕರು ಕಾರ್ಖಾನೆಯೊಳಗೆ ಸಿಲುಕಿಕೊಂಡರು ಎಂದು ಅಧಿಕಾರಿ ತಿಳಿಸಿದ್ದಾರೆ.

ಹದಿನಾಲ್ಕು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾದವು ಮತ್ತು ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ. ಕಟ್ಟಡದ ಒಳಗಿದ್ದ ಒಂಬತ್ತು ಜನರನ್ನು ರಕ್ಷಿಸಿ ನರೇಲಾದ ಎಸ್‌ಎಚ್‌ಆರ್‌ಸಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ದೆಹಲಿ ಅಗ್ನಿಶಾಮಕ ಸೇವೆ (ಡಿಎಫ್ಎಸ್) ಅಧಿಕಾರಿಯೊಬ್ಬರು ಬೆಳಿಗ್ಗೆ 8.30ರ ಸುಮಾರಿಗೆ ತಿಳಿಸಿದ್ದಾರೆ.

ಅವರಲ್ಲಿ ಮೂವರು ಶ್ಯಾಮ್ (24), ರಾಮ್ ಸಿಂಗ್ (30) ಮತ್ತು ಬೀರ್ಪಾಲ್ (42) ಮೃತಪಟ್ಟಿದ್ದಾರೆ ಎಂದು ಘೋಷಿಸಲಾಗಿದ್ದು, ಇತರ ಕಾರ್ಮಿಕರು ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಪೈಪ್‌ಲೈನ್ ಒಂದರಿಂದ ಅನಿಲ ಸೋರಿಕೆಯಾದ ನಂತರ ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರಾಥಮಿಕ ತನಿಖೆ ಸೂಚಿಸುತ್ತದೆ ಎಂದು ಅವರು ಹೇಳಿದರು.

ಹೆಸರುಬೇಳೆಯನ್ನು ಹುರಿಯಲು ಬಳಸುವ ಬರ್ನರ್‌ಗಳಿಗೆ ಅನಿಲವನ್ನು ಸರಬರಾಜು ಮಾಡಲಾಗುತ್ತಿತ್ತು. ಬೆಂಕಿ ಹರಡುತ್ತಿದ್ದಂತೆ, ಕಂಪೋಸರ್ ಹೆಚ್ಚು ಬಿಸಿಯಾಗಿ ಸ್ಫೋಟ ಸಂಭವಿಸಿದೆ. ಈ ಸಂಬಂಧ ಸೂಕ್ತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel