ನವದೆಹಲಿಯ ನರೇಲಾದಲ್ಲಿ ಕಾರ್ಖಾನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡ ಸ್ಥಳದ ದೃಶ್ಯ. Photo | PTI
ದೇಶ

ದೆಹಲಿ: ಆಹಾರ ಸಂಸ್ಕರಣಾ ಘಟಕದಲ್ಲಿ ಬೆಂಕಿ ಅವಘಡ; 3 ಕಾರ್ಮಿಕರು ಸಾವು, ಆರು ಮಂದಿಗೆ ಗಾಯ

ದೆಹಲಿಯ ನರೇಲಾ ಕೈಗಾರಿಕಾ ಪ್ರದೇಶದಲ್ಲಿ ಶನಿವಾರ ಮುಂಜಾನೆ ಆಹಾರ ಸಂಸ್ಕರಣಾ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡು ಸ್ಫೋಟ ಸಂಭವಿಸಿದ ಪರಿಣಾಮ ಮೂವರು ಕಾರ್ಮಿಕರು ಸಾವಿಗೀಡಾಗಿದ್ದಾರೆ ಮತ್ತು ಆರು ಮಂದಿ ಗಾಯಗೊಂಡಿದ್ದಾರೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ನವದೆಹಲಿ: ಇಲ್ಲಿನ ನರೇಲಾ ಕೈಗಾರಿಕಾ ಪ್ರದೇಶದಲ್ಲಿ ಶನಿವಾರ ಮುಂಜಾನೆ ಆಹಾರ ಸಂಸ್ಕರಣಾ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡು ಸ್ಫೋಟ ಸಂಭವಿಸಿದ ಪರಿಣಾಮ ಮೂವರು ಕಾರ್ಮಿಕರು ಸಾವಿಗೀಡಾಗಿದ್ದಾರೆ ಮತ್ತು ಆರು ಮಂದಿ ಗಾಯಗೊಂಡಿದ್ದಾರೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಹೆಸರುಬೇಳೆಯನ್ನು ಸಂಸ್ಕರಿಸುವ ಶಾಯಮ್ ಕೃಪಾ ಫುಡ್ಸ್ ಪ್ರೈವೇಟ್ ಲಿಮಿಟೆಡ್‌ನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಕುರಿತು ಮುಂಜಾನೆ 3.35 ಕ್ಕೆ ತಮಗೆ ಕರೆ ಬಂದಿದೆ ಎಂದು ಅವರು ಹೇಳಿದರು.

ಬೆಂಕಿಯು ಕ್ಷಣಾರ್ಧದಲ್ಲಿ ಕಾರ್ಖಾನೆಯನ್ನು ಆವರಿಸಿದೆ. ಈ ವೇಳೆ ಕೆಲವು ಕಾರ್ಮಿಕರು ಕಾರ್ಖಾನೆಯೊಳಗೆ ಸಿಲುಕಿಕೊಂಡರು ಎಂದು ಅಧಿಕಾರಿ ತಿಳಿಸಿದ್ದಾರೆ.

ಹದಿನಾಲ್ಕು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾದವು ಮತ್ತು ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ. ಕಟ್ಟಡದ ಒಳಗಿದ್ದ ಒಂಬತ್ತು ಜನರನ್ನು ರಕ್ಷಿಸಿ ನರೇಲಾದ ಎಸ್‌ಎಚ್‌ಆರ್‌ಸಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ದೆಹಲಿ ಅಗ್ನಿಶಾಮಕ ಸೇವೆ (ಡಿಎಫ್ಎಸ್) ಅಧಿಕಾರಿಯೊಬ್ಬರು ಬೆಳಿಗ್ಗೆ 8.30ರ ಸುಮಾರಿಗೆ ತಿಳಿಸಿದ್ದಾರೆ.

ಅವರಲ್ಲಿ ಮೂವರು ಶ್ಯಾಮ್ (24), ರಾಮ್ ಸಿಂಗ್ (30) ಮತ್ತು ಬೀರ್ಪಾಲ್ (42) ಮೃತಪಟ್ಟಿದ್ದಾರೆ ಎಂದು ಘೋಷಿಸಲಾಗಿದ್ದು, ಇತರ ಕಾರ್ಮಿಕರು ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಪೈಪ್‌ಲೈನ್ ಒಂದರಿಂದ ಅನಿಲ ಸೋರಿಕೆಯಾದ ನಂತರ ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರಾಥಮಿಕ ತನಿಖೆ ಸೂಚಿಸುತ್ತದೆ ಎಂದು ಅವರು ಹೇಳಿದರು.

ಹೆಸರುಬೇಳೆಯನ್ನು ಹುರಿಯಲು ಬಳಸುವ ಬರ್ನರ್‌ಗಳಿಗೆ ಅನಿಲವನ್ನು ಸರಬರಾಜು ಮಾಡಲಾಗುತ್ತಿತ್ತು. ಬೆಂಕಿ ಹರಡುತ್ತಿದ್ದಂತೆ, ಕಂಪೋಸರ್ ಹೆಚ್ಚು ಬಿಸಿಯಾಗಿ ಸ್ಫೋಟ ಸಂಭವಿಸಿದೆ. ಈ ಸಂಬಂಧ ಸೂಕ್ತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಂದಿಕೊಳ್ಳಲು ಸಾಧ್ಯವಿಲ್ಲ ಎಂದು ಯಾರು ಹೇಳಿದ್ದು?': ಅಮೆರಿಕ ವ್ಯಾಪಾರ ಒಪ್ಪಂದದ ಅನಿಶ್ಚಿತತೆ ನಡುವೆಯೇ ಹೊಸ ಮಾರುಕಟ್ಟೆಗಳತ್ತ ಭಾರತ ಕಣ್ಣು!

ಯುವನಿಧಿಗೆ ನಿರುದ್ಯೋಗಿ ವಿದ್ಯಾರ್ಥಿಗಳ ನೋಂದಣಿ ನೋಡ್ತಿದ್ದರೆ ಆತಂಕಕಾರಿ, ಶಿಕ್ಷಣದಲ್ಲಿ ಬದಲಾವಣೆ ಅಗತ್ಯ: ವಿಟಿಯು ಉಪಕುಲಪತಿ

ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ವಿಡಿಯೋ ಹರಿಬಿಟ್ಟ ಆರೋಪಿಗಳು: ಹುಬ್ಬಳ್ಳಿ ಪೊಲೀಸರಿಂದ ಮೂವರ ಬಂಧನ!

ದಾವಣಗೆರೆ: ಮಕ್ಕಳ ಹಾದಿ ಹಿಡಿದ ಬಿಜೆಪಿ ಮುಖಂಡ; ಕಾರಿನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ

ಕರ್ನಾಟಕದ ಮುಕುಟಕ್ಕೆ ಮತ್ತೊಂದು ಗರಿ: ಬೆಂಗಳೂರು ಮೂಲದ ಮೇಜರ್ Swathi ShanthaKumarಗೆ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ!

SCROLL FOR NEXT