ಅಖಿಲೇಶ್ ಯಾದವ್ 
ದೇಶ

ಲೋಕಸಭೆಯಲ್ಲಿ ಎಸ್‌ಪಿ ನಾಯಕರಾಗಲಿದ್ದಾರೆ ಅಖಿಲೇಶ್ ಯಾದವ್

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಲೋಕಸಭೆಯಲ್ಲಿ ಪಕ್ಷದ ನಾಯಕರಾಗಲಿದ್ದು, ದೆಹಲಿಯಲ್ಲಿ ಈ ಪ್ರಕ್ರಿಯೆಗಳು ನಡೆಯಲಿವೆ.

ಲಖನೌ: ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಲೋಕಸಭೆಯಲ್ಲಿ ಪಕ್ಷದ ನಾಯಕರಾಗಲಿದ್ದು, ದೆಹಲಿಯಲ್ಲಿ ಈ ಪ್ರಕ್ರಿಯೆಗಳು ನಡೆಯಲಿವೆ ಎಂದು ಅವರ ಪಕ್ಷದ ಹಿರಿಯ ನಾಯಕರೊಬ್ಬರು ಶನಿವಾರ ತಿಳಿಸಿದ್ದಾರೆ.

ಅಖಿಲೇಶ್ ಯಾದವ್ ಅವರು ಉತ್ತರ ಪ್ರದೇಶ ವಿಧಾನಸಭೆಯ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಸಮಾಜವಾದಿ ಪಕ್ಷದ ಮುಖ್ಯ ವಕ್ತಾರ ರಾಜೇಂದ್ರ ಚೌಧರಿ ಅವರು ಪಿಟಿಐಗೆ ತಿಳಿಸಿದ್ದಾರೆ.

“ಲೋಕಸಭೆಯಲ್ಲಿ ಅಖಿಲೇಶ್ ಯಾದವ್ ಪಕ್ಷದ ನಾಯಕರಾಗುತ್ತಾರೆ ಎಂದು ತಿಳಿದುಬಂದಿದೆ. ಆದರೆ ಸಂಸದೀಯ ಪಕ್ಷದ ನಾಯಕನನ್ನು ಆಯ್ಕೆ ಮಾಡುವ ಔಪಚಾರಿಕತೆ ಇದೆ ಮತ್ತು ಇದು ದೆಹಲಿಯಲ್ಲಿ ನಡೆಯಲಿದೆ. ಪ್ರಧಾನಿ ಮೋದಿ ಪ್ರಮಾಣ ವಚನ ಸ್ವೀಕಾರ ಮತ್ತು ಲೋಕಸಭೆಯ ಹಂಗಾಮಿ ಸ್ಪೀಕರ್ ಆಯ್ಕೆ ಬಳಿಕ ಸಂಸದೀಯ ಪಕ್ಷದ ನಾಯಕರ ಆಯ್ಕೆಯ ಪ್ರಕ್ರಿಯೆ ನಡೆಯಲಿದೆ’ ಎಂದು ಅವರು ಹೇಳಿದ್ದಾರೆ.

ಅಖಿಲೇಶ್ ಯಾದವ್ ಅವರು ಮೈನ್‌ಪುರಿಯ ಕರ್ಹಾಲ್ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದು, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂದು ಚೌಧರಿ ಖಚಿತಪಡಿಸಿದ್ದಾರೆ.

ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಕನೌಜ್ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT