ನರೇಶ್ ಮಾಸ್ಕೆ
ದೇಶ

ಮಹಾರಾಷ್ಟ್ರದಲ್ಲಿ ಮತ್ತೆ ಪಕ್ಷಾಂತರ: ಉದ್ಧವ್ ಬಣದ ಇಬ್ಬರು ನೂತನ ಸಂಸದರು ಸಂಪರ್ಕದಲ್ಲಿ- ಶಿವಸೇನೆ ನಾಯಕ ನರೇಶ್

ಠಾಕ್ರೆ ಬಣದ ಇಬ್ಬರು ಲೋಕಸಭಾ ಸದಸ್ಯರು ಈಗಾಗಲೇ ನಮ್ಮ ಸಂಪರ್ಕದಲ್ಲಿದ್ದು, ಇನ್ನೂ ನಾಲ್ವರು ಅವರೊಂದಿಗೆ ಸೇರಿಕೊಂಡು ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಅವರನ್ನು ಬೆಂಬಲಿಸುತ್ತಾರೆ ಎಂದರು.

ನವದೆಹಲಿ: ಉದ್ಧವ್ ಠಾಕ್ರೆ ಅವರ ಶಿವಸೇನೆಯಿಂದ ಹೊಸದಾಗಿ ಆಯ್ಕೆಯಾದ ಇಬ್ಬರು ಲೋಕಸಭಾ ಸದಸ್ಯರು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಶಿವಸೇನೆ ಶನಿವಾರ ಹೇಳಿದೆ.

ಇಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಶಿವಸೇನಾ ವಕ್ತಾರ ನರೇಶ್ ಮಾಸ್ಕೆ, ಪಕ್ಷಾಂತರ ವಿರೋಧಿ ಕಾನೂನನ್ನು ಉಲ್ಲೇಖಿಸಿ ಇಬ್ಬರು ಲೋಕಸಭಾ ಸದಸ್ಯರನ್ನು ಹೆಸರಿಸಲು ನಿರಾಕರಿಸಿದರು. ಆದರೆ, ಇನ್ನೂ ನಾಲ್ವರು ಶಾಸಕರು ಸೇರಿದಂತೆ ಎಲ್ಲರೂ ಶೀಘ್ರದಲ್ಲೇ ಶಿಂಧೆ ನೇತೃತ್ವದ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಿದರು.

'ಉದ್ಧವ್ ಠಾಕ್ರೆ ಅವರು ಬಸ್ಸುಗಳಲ್ಲಿ ಬಂದ ನಿರ್ದಿಷ್ಟ ಸಮುದಾಯದವರ ಬಳಿ ಮತಯಾಚಿಸಿದ ರೀತಿಗೆ ಲೋಕಸಭೆಯ ಇಬ್ಬರು ನೂತನ ಸದಸ್ಯರು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ' ಎಂದು ಥಾಣೆಯಿಂದ ಹೊಸದಾಗಿ ಆಯ್ಕೆಯಾದ ಲೋಕಸಭಾ ಸದಸ್ಯರಾದ ಮ್ಹಾಸ್ಕೆ ಹೇಳಿದರು.

ಠಾಕ್ರೆ ಬಣದ ಇಬ್ಬರು ಲೋಕಸಭಾ ಸದಸ್ಯರು ಈಗಾಗಲೇ ನಮ್ಮ ಸಂಪರ್ಕದಲ್ಲಿದ್ದು, ಇನ್ನೂ ನಾಲ್ವರು ಅವರೊಂದಿಗೆ ಸೇರಿಕೊಂಡು ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಅವರನ್ನು ಬೆಂಬಲಿಸುತ್ತಾರೆ ಎಂದರು.

ಏಕನಾಥ್ ಶಿಂಧೆ ಬಣದ ಶಾಸಕರು ಮತ್ತು ಸಂಸದರು ಉದ್ಧವ್ ಠಾಕ್ರೆ ಅವರ ಬಣಕ್ಕೆ ಮತ್ತೆ ಸೇರಲು ಉತ್ಸುಕರಾಗಿದ್ದಾರೆ ಎಂದು ಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವುತ್ ಹೇಳಿಕೆ ನೀಡಿದ ಬೆನ್ನಲ್ಲೇ ಮ್ಹಾಸ್ಕೆ ಅವರ ಹೇಳಿಕೆಗಳು ಬಂದಿವೆ.

ಶಿಂಧೆ ನೇತೃತ್ವದ ಶಿವಸೇನೆ ಏಳು ಲೋಕಸಭಾ ಸ್ಥಾನಗಳನ್ನು ಗೆದ್ದರೆ, ಠಾಕ್ರೆ ಬಣ ಒಂಬತ್ತು ಸ್ಥಾನಗಳನ್ನು ಗೆದ್ದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT