ಮಮತಾ ಬ್ಯಾನರ್ಜಿ 
ದೇಶ

INDIA ಇಂದು ಸರ್ಕಾರ ರಚನೆಗೆ ಹಕ್ಕು ಮಂಡಿಸದೇ ಇರಬಹುದು, ಆದ್ರೆ ಮುಂದೆ ಮಂಡಿಸಲ್ಲ ಅಂತ ಅಲ್ಲ: ಮಮತಾ

ವಿರೋಧ ಪಕ್ಷಗಳ ಮೈತ್ರಿಕೂಟ ಇಂಡಿಯಾ ಬಣ ಇಂದು ಸರ್ಕಾರ ರಚನೆಗೆ ಹಕ್ಕು ಮಂಡಿಸದೇ ಇರಬಹುದು, ಆದರೆ ಮುಂದಿ ಸರ್ಕಾರ ರಚನೆಗೆ ಹಕ್ಕು ಮಂಡಿಸುವುದಿಲ್ಲ ಎಂದಲ್ಲ...

ಕೋಲ್ಕತ್ತಾ: ವಿರೋಧ ಪಕ್ಷಗಳ ಮೈತ್ರಿಕೂಟ ಇಂಡಿಯಾ ಬಣ ಇಂದು ಸರ್ಕಾರ ರಚನೆಗೆ ಹಕ್ಕು ಮಂಡಿಸದೇ ಇರಬಹುದು, ಆದರೆ ಮುಂದಿ ಸರ್ಕಾರ ರಚನೆಗೆ ಹಕ್ಕು ಮಂಡಿಸುವುದಿಲ್ಲ ಎಂದಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಹೇಳಿದ್ದಾರೆ.

ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ, ತಮ್ಮ ಪಕ್ಷ "ಕಾದು ನೋಡುವ" ಮೋಡ್‌ನಲ್ಲಿರುತ್ತದೆ ಮತ್ತು "ದುರ್ಬಲ ಹಾಗೂ ಅಸ್ಥಿರ" ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವನ್ನು ಅಧಿಕಾರದಿಂದ ದೂರವಿಟ್ಟರೆ ನನಗೆ ಸಂತೋಷವಾಗುತ್ತದೆ ಎಂದು ಹೇಳಿದರು.

"ದೇಶಕ್ಕೆ ಬದಲಾವಣೆ ಬೇಕು; ದೇಶ ಬದಲಾವಣೆ ಬಯಸುತ್ತಿದೆ. ಈ ಜನಾದೇಶ ಬದಲಾವಣೆಗಾಗಿತ್ತು. ನಾವು ಕಾಯುತ್ತಿದ್ದೇವೆ ಮತ್ತು ಪರಿಸ್ಥಿತಿಯ ಮೇಲೆ ನಿಗಾ ಇಡುತ್ತಿದ್ದೇವೆ. ಈ ಜನಾದೇಶ ನರೇಂದ್ರ ಮೋದಿ ವಿರುದ್ಧವಾಗಿದೆ. ಆದ್ದರಿಂದ ಅವರು ಈ ಬಾರಿ ಪ್ರಧಾನಿಯಾಗಬಾರದು. ಬೇರೆಯವರು ಆಗಬೇಕಿತ್ತು. ಆದರೂ ಅವರಿಗೆ ಅಧಿಕಾರ ವಹಿಸಿಕೊಳ್ಳಲು ಅವಕಾಶ ನೀಡಲಾಗಿದೆ’’ ಎಂದು ಹೊಸದಾಗಿ ಆಯ್ಕೆಯಾದ ಟಿಎಂಸಿ ಸಂಸದರ ಸಭೆಯ ನಂತರ ಮಮತಾ ಬ್ಯಾನರ್ಜಿ ಸುದ್ದಿಗಾರರಿಗೆ ತಿಳಿಸಿದರು.

ಹೊಸ ಸರ್ಕಾರದ ಪ್ರಮಾಣ ವಚನ ಸಮಾರಂಭಕ್ಕೆ ಪಕ್ಷ ಹಾಜರಾಗುವುದಿಲ್ಲ ಎಂದು ತೃಣಮೂಲ ಕಾಂಗ್ರೆಸ್ ವರಿಷ್ಠೆ ತಿಳಿಸಿದ್ದಾರೆ.

"ಬಿಜೆಪಿಯು ಪ್ರಜಾಸತ್ತಾತ್ಮಕವಾಗಿ ಮತ್ತು ಕಾನೂನುಬಾಹಿರವಾಗಿ ಸರ್ಕಾರವನ್ನು ರಚಿಸುತ್ತಿದೆ. ಇಂದು ಇಂಡಿಯಾ ಬಣ ಸರ್ಕಾರ ರಚನೆಗೆ ಹಕ್ಕು ಮಂಡಿಸಿರಬಹುದು. ಆದರೆ ನಾಳೆ ಅದು ಹಕ್ಕು ಮಂಡಿಸುವುದಿಲ್ಲ ಎಂದು ಅರ್ಥವಲ್ಲ. ಸ್ವಲ್ಪ ಸಮಯ ಕಾಯೋಣ" ಎಂದು ಅವರು ಹೇಳಿದರು.

ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಟಿಎಂಸಿ ಸಂಸದರು, ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಹಿಂಪಡೆಯುವಂತೆ ಒತ್ತಾಯಿಸಲಿದ್ದಾರೆ ಎಂದು ಅವರು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ