ಉಗ್ರಗಾಮಿಗಳು 
ದೇಶ

ಮಣಿಪುರ: ಪೊಲೀಸ್ ಔಟ್‌ಪೋಸ್ಟ್‌, ಹಲವರು ಮನೆಗಳಿಗೆ ಉಗ್ರಗಾಮಿಗಳಿಂದ ಬೆಂಕಿ!

ಶಂಕಿತ ಉಗ್ರಗಾಮಿಗಳು ಶನಿವಾರ ಮಣಿಪುರದ ಜಿರಿಬಾಮ್ ಜಿಲ್ಲೆಯಲ್ಲಿ ಪೊಲೀಸ್ ಔಟ್‌ಪೋಸ್ಟ್‌ ಮತ್ತು ಹಲವಾರು ಮನೆಗಳಿಗೆ ಬೆಂಕಿ ಹಚ್ಚಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇಂಫಾಲ್: ಶಂಕಿತ ಉಗ್ರಗಾಮಿಗಳು ಶನಿವಾರ ಮಣಿಪುರದ ಜಿರಿಬಾಮ್ ಜಿಲ್ಲೆಯಲ್ಲಿ ಪೊಲೀಸ್ ಔಟ್‌ಪೋಸ್ಟ್‌ ಮತ್ತು ಹಲವಾರು ಮನೆಗಳಿಗೆ ಬೆಂಕಿ ಹಚ್ಚಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬರಾಕ್ ನದಿಯ ದಡದಲ್ಲಿರುವ ಚೋಟೊಬೆಕ್ರಾ ಪ್ರದೇಶದಲ್ಲಿ ಮಧ್ಯರಾತ್ರಿ 12.30 ರ ಸುಮಾರಿಗೆ ಜಿರಿ ಪೊಲೀಸ್ ಔಟ್‌ಪೋಸ್ಟ್ ಗೆ ಉಗ್ರರು ಬೆಂಕಿ ಹಚ್ಚಿ ಸುಟ್ಟು ಹಾಕಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ರಾಜಧಾನಿ ಇಂಫಾಲ್‌ನಿಂದ ಸುಮಾರು 220 ಕಿಮೀ ದೂರದಲ್ಲಿರುವ ಜಿಲ್ಲೆಯ ಲಮ್ತೈ ಖುನೌ ಮತ್ತು ಮೊಧುಪುರ್ ಪ್ರದೇಶಗಳಲ್ಲಿ ಕತ್ತಲೆಯ ಲಾಭ ಪಡೆದ ಬೆಟ್ಟ ಮೂಲದ ಬಂದೂಕುಧಾರಿ ಉಗ್ರರು ಅನೇಕ ದಾಳಿ ನಡೆಸಿದ್ದಾರೆ. ಜಿರಿಬಾಮ್ ಜಿಲ್ಲೆಯ ಹೊರವಲಯದಲ್ಲಿ ಹಲವಾರು ಮನೆಗಳು ಸುಟ್ಟುಹೋಗಿವೆ. ಆದರೆ, ನಿಖರವಾದ ಸಂಖ್ಯೆ ತಿಳಿದುಬಂದಿಲ್ಲ ಎಂದು ಜಿಲ್ಲಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಉಗ್ರರ ವಿರುದ್ಧದ ಭದ್ರತಾ ಕಾರ್ಯಾಚರಣೆಯಲ್ಲಿ ನೆರವಾಗಲು ಮಣಿಪುರ ಪೊಲೀಸರ ಕಮಾಂಡೋ ತುಕಡಿಯನ್ನು ಶನಿವಾರ ಬೆಳಗ್ಗೆ ಇಂಫಾಲ್‌ನಿಂದ ಜಿರಿಬಾಮ್‌ಗೆ ವಿಮಾನದಲ್ಲಿ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಮಧ್ಯೆ ಇನ್ನರ್ ಮಣಿಪುರ ಲೋಕಸಭಾ ಕ್ಷೇತ್ರದಿಂದ ಹೊಸದಾಗಿ ಆಯ್ಕೆಯಾದ ಕಾಂಗ್ರೆಸ್ ಸಂಸದ ಅಂಗೋಮ್ಚಾ ಬಿಮೋಲ್ ಅಕೋಯಿಜಮ್, ಜಿರಿಬಾಮ್ ಜಿಲ್ಲೆಯ ಜನರ ಜೀವ ಮತ್ತು ಆಸ್ತಿಯನ್ನು ರಕ್ಷಿಸಬೇಕೆಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅಕೋಯಿಜಮ್, ಜಿರಿಬಾಮ್‌ನ ಜಿಲ್ಲಾ ಅಧಿಕಾರಿಗಳೊಂದಿಗೆ ಮಾತನಾಡಿದ್ದು, ಭದ್ರತಾ ಸಿಬ್ಬಂದಿ ಅಲ್ಲಿಗೆ ತೆರಳಿರುವುದಾಗಿ ಹೇಳಿದ್ದಾರೆ. ಪಟ್ಟಣದಲ್ಲಿರುವವರಿಗೆ ಭದ್ರತೆ ಒದಗಿಸಲಾಗಿದ್ದರೂ, ಬಾಹ್ಯ ಪ್ರದೇಶಗಳಲ್ಲಿರುವವರಿಗೆ ಭದ್ರತೆಯನ್ನು ಒದಗಿಸುತ್ತಿಲ್ಲ ಎಂದು ಹೇಳಿದರು. ಉಗ್ರಗಾಮಿಗಳು ವ್ಯಕ್ತಿಯೊಬ್ಬನನ್ನು ಕೊಂದ ನಂತರ ಹಿಂಸಾಚಾರ ಭುಗಿಲೆದ್ದರಿಂದ ಸುಮಾರು 239 ಜನರನ್ನು, ಹೆಚ್ಚಾಗಿ ಮಹಿಳೆಯರು ಮತ್ತು ಮಕ್ಕಳನ್ನು ಜಿರಿಬಾಮ್ ಜಿಲ್ಲೆಯ ತಮ್ಮ ಗ್ರಾಮಗಳಿಂದ ಸ್ಥಳಾಂತರಿಸಲಾಗಿದೆ ಮತ್ತು ಜಿರಿ ಪಟ್ಟಣದ ಕ್ರೀಡಾ ಸಂಕೀರ್ಣದಲ್ಲಿ ಆಶ್ರಯ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಜೂನ್ 6 ರಂದು ಜಿರಿಬಾಮ್ ಜಿಲ್ಲಾಡಳಿತವು ಒಂದು ಸಮುದಾಯಕ್ಕೆ ಸೇರಿದ 59 ವರ್ಷದ ವ್ಯಕ್ತಿಯನ್ನು ಮತ್ತೊಂದು ಸಮುದಾಯಕ್ಕೆ ಸೇರಿದ ಉಗ್ರಗಾಮಿಗಳು ಕೊಂದ ನಂತರ ಜಿಲ್ಲೆಯಲ್ಲಿ ಅನಿರ್ದಿಷ್ಟ ಕರ್ಫ್ಯೂ ವಿಧಿಸಿತ್ತು. ಜಿರಿಬಾಮ್ ಮೈಟಿಗಳು, ಮುಸ್ಲಿಮರು, ನಾಗಾಗಳು, ಕುಕಿಗಳು ಮತ್ತು ಮಣಿಪುರಿಯೇತರರನ್ನು ಒಳಗೊಂಡ ವೈವಿಧ್ಯಮಯ ಜನಾಂಗೀಯ ಸಂಯೋಜನೆಯನ್ನು ಹೊಂದಿರುವ ಜಿಲ್ಲೆಯಾಗಿದೆ. ಕಳೆದ ವರ್ಷ ಮೇ ತಿಂಗಳಿನಿಂದ ಮಣಿಪುರದಲ್ಲಿ ಉಲ್ಬಣಗೊಂಡ ಜನಾಂಗೀಯ ಕಲಹದಿಂದ ಇದುವರೆಗೆ ಪ್ರಭಾವಿತವಾಗಿಲ್ಲ. ಇಂಫಾಲ್ ಕಣಿವೆ ಮೂಲದ ಮೈಟೀಸ್ ಮತ್ತು ಬೆಟ್ಟದ ಮೂಲದ ಕುಕಿಗಳ ನಡುವಿನ ಜನಾಂಗೀಯ ಸಂಘರ್ಷದಲ್ಲಿ 200 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು. ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಾವು ನಮ್ಮ ರೈತರನ್ನು ರಕ್ಷಿಸಬೇಕು, ನ್ಯಾಯಾಲಯದ ತೀರ್ಪನ್ನೂ ಪಾಲಿಸಬೇಕು: CWRC ಆದೇಶಕ್ಕೆ ಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ

ನಾನು ಸೇರಿದಂತೆ ಎಲ್ಲರೂ ಸರ್ಕಾರಿ ನೌಕರರೇ; ಭ್ರಷ್ಟಾಚಾರಕ್ಕೆ ಅವಕಾಶ ಇಲ್ಲ, ಡಬಲ್ ಬಿಲ್ ಮಾಡುವವರನ್ನು ಮಟ್ಟ ಹಾಕುವೆ: CM ಡಿಕೆಶಿ ಎಚ್ಚರಿಕೆ

ನಿಮ್ಮ ಜೊತೆಗಿದ್ದವರು ಯಾರು?: ರಾಹುಲ್ ಗಾಂಧಿ ರಜಾ ಫೋಟೋ ಬಗ್ಗೆ ಕೇಂದ್ರ ಸಚಿವರ ಪ್ರಶ್ನೆ, ಕಾಂಗ್ರೆಸ್ ಕೆಂಡಮಂಡಲ!

ಕಾವೇರಿ ಕಿಚ್ಚು: ಕರ್ನಾಟಕಕ್ಕೆ ಮತ್ತೆ ಬಿಗ್ ಶಾಕ್‌; ತಮಿಳುನಾಡಿಗೆ ನಿತ್ಯ 12 ಸಾವಿರ ಕ್ಯೂಸೆಕ್ ನೀರು ಬಿಡುವಂತೆ CWRC ಆದೇಶ!

ರಾತ್ರೋರಾತ್ರಿ ನೈಟಿಯಲ್ಲೇ ಬಸ್ ಕಂಡಕ್ಟರ್ ಜೊತೆ ಓಡಿ ಹೋದ ನಟ, YouTuber ಅಖಿಲ್ NRD ಪತ್ನಿ; Video ವೈರಲ್!