ನವೀನ್ ಪಟ್ನಾಯಕ್ ಜೊತೆ ಪಾಂಡಿಯನ್ online desk
ದೇಶ

ಪಾಂಡಿಯನ್ ಸಮರ್ಥನೆಗೆ ಧಾವಿಸಿದ ನವೀನ್ ಪಟ್ನಾಯಕ್: ಆತ ಸಮಗ್ರತೆ ಮತ್ತು ಪ್ರಾಮಾಣಿಕತೆಯ ವ್ಯಕ್ತಿ ಎಂದ ಮಾಜಿ ಸಿಎಂ

ಒಡಿಶಾದ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರ ಕಳೆದುಕೊಂಡಿರುವ ಬಿಜೆಪಿ ಪಕ್ಷದ ನಾಯಕ ತಮ್ಮ ಪಕ್ಷದ ಉತ್ತರಾಧಿಕಾರಿಯೆಂದೇ ಬಿಂಬಿತರಾಗಿರುವ ವಿಕೆ ಪಾಂಡಿಯನ್ ಬೆನ್ನಿಗೆ ನಿಂತಿದ್ದಾರೆ.

ಒಡಿಶಾ: ಒಡಿಶಾದ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರ ಕಳೆದುಕೊಂಡಿರುವ ಬಿಜೆಪಿ ಪಕ್ಷದ ನಾಯಕ ತಮ್ಮ ಪಕ್ಷದ ಉತ್ತರಾಧಿಕಾರಿಯೆಂದೇ ಬಿಂಬಿತರಾಗಿರುವ ವಿಕೆ ಪಾಂಡಿಯನ್ ಬೆನ್ನಿಗೆ ನಿಂತಿದ್ದಾರೆ.

ಚುನಾವಣಾ ಸೋಲಿಗೆ ಪಾಂಡಿಯನ್ ಕಾರಣ ಎಂಬ ಟೀಕೆಗಳಿಗೆ ಪ್ರತಿಕ್ರಿಯೆ ನೀಡಿರುವ ನಿರ್ಗಮಿತ ಸಿಎಂ ನವೀನ್ ಪಟ್ನಾಯಕ್, ಚುನಾವಣಾ ಸೋಲಿಗೆ ಪಾಂಡಿಯನ್ ಅವರನ್ನು ದೂಷಿಸುವುದು ಸರಿಯಲ್ಲ ಎಂದು ಹೇಳಿದ್ದಾರೆ.

ರಾಜ್ಯದ ಆಡಳಿತದಲ್ಲಿ ಹಾಗೂ ಬಿಜೆಡಿಯಲ್ಲಿ ಪಾಂಡಿಯನ್ ನಿರ್ವಹಿಸಿರುವ ಕೆಲಸಗಳ ಬಗ್ಗೆ ನವೀನ್ ಪಟ್ನಾಯಕ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪಾಂಡಿಯನ್ ಬಗ್ಗೆ ಟೀಕೆಗಳು ವ್ಯಕ್ತವಾಗುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಇದು ದುರದೃಷ್ಟಕರ ಎಂದು ನವೀನ್ ಪಟ್ನಾಯಕ್ ಹೇಳಿದ್ದಾರೆ.

ಈ ಹಿಂದೆ ಬಿಜೆಡಿ ಮತ್ತು ಸರ್ಕಾರಿ ವ್ಯವಹಾರಗಳಲ್ಲಿ ನಿರಂತರವಾಗಿ ಕಾಣಿಸಿಕೊಂಡಿದ್ದ ಪಾಂಡಿಯನ್, ಚುನಾವಣಾ ಫಲಿತಾಂಶಗಳು ಪ್ರಕಟವಾದಾಗಿನಿಂದ ಮಾಧ್ಯಮಗಳಿಂದ ದೂರ ಉಳಿದಿದ್ದಾರೆ. ಚುನಾವಣಾ ಸೋಲಿನ ಪರಾಮರ್ಶೆಗೆ ನವೀನ್ ನಡೆಸುತ್ತಿರುವ ಸಭೆಗಳಲ್ಲಿ ಅವರು ಕಾಣಿಸಿಕೊಂಡಿರಲಿಲ್ಲ. ಪಾಂಡಿಯನ್ ಕೊನೆಯ ಬಾರಿಗೆ ನವದೆಹಲಿಗೆ ಪ್ರಯಾಣಿಸುತ್ತಿದ್ದಾಗ ಮಾಧ್ಯಮಗಳಿಗೆ ಕಾಣಿಸಿಕೊಂಡಿದ್ದರು.

"ತಮ್ಮ ಉತ್ತಮ ಕೆಲಸದ ನಂತರ, ಅವರು ಐಎಎಸ್ ಅಧಿಕಾರಿಯಾಗಿ ನಿವೃತ್ತಿ ಹೊಂದಿದರು ಮತ್ತು ನನ್ನ ಪಕ್ಷಕ್ಕೆ ಸೇರ್ಪಡೆಗೊಂಡರು ಮತ್ತು ಅತ್ಯುತ್ತಮವಾದ ಕೆಲಸಕ್ಕೆ ಕೊಡುಗೆ ನೀಡಿದರು. ಅವರು ಯಾವುದೇ ಹುದ್ದೆಯನ್ನು ಹೊಂದಿರಲಿಲ್ಲ, ಅವರು ಯಾವುದೇ ಕ್ಷೇತ್ರದಿಂದ ಈ ಚುನಾವಣೆಯಲ್ಲಿ ಸ್ಪರ್ಧಿಸಲಿಲ್ಲ, ಅವರು ಪ್ರಾಮಾಣಿಕತೆಯ ವ್ಯಕ್ತಿಯಾಗಿದ್ದು ಅವರನ್ನು ಸ್ಮರಿಸಬೇಕು ಎಂದು ನವೀನ್ ಪಟ್ನಾಯಕ್ ಹೇಳಿದ್ದಾರೆ.

ಇದೇ ವೇಳೆ ಪಾಂಡಿಯನ್ ತಮ್ಮ ರಾಜಕೀಯ ಉತ್ತರಾಧಿಕಾರಿಯಲ್ಲ ಎಂದು ಪುನರುಚ್ಚರಿಸಿದ ನವೀನ್, ತಮ್ಮ ರಾಜಕೀಯ ಉತ್ತರಾಧಿಕಾರಿ ಯಾರು ಎಂಬುದನ್ನು ರಾಜ್ಯದ ಜನರು ನಿರ್ಧರಿಸುತ್ತಾರೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ನಿರ್ಣಯಕ್ಕೆ ಒಪ್ಪಬೇಕು, ವರಿಷ್ಠರು ಹೇಳಿದಾಗ ದೆಹಲಿಗೆ ಹೋಗುವೆ: ಖರ್ಗೆ ಭೇಟಿ ಬಳಿಕ ಸಿದ್ದರಾಮಯ್ಯ ಪ್ರತಿಕ್ರಿಯೆ; ಡಿಕೆಶಿ ಆಪ್ತರ ನಡೆಗೆ CM ತೀವ್ರ ಅಸಮಾಧಾನ

ರಾಜ್ಯದಲ್ಲಿ ಯಾರೂ ನಿರೀಕ್ಷಿಸದಂತಹ "ಸ್ಫೋಟಕ" ರಾಜಕೀಯ ಬೆಳವಣಿಗೆ: ಕುಮಾರಸ್ವಾಮಿ ಭವಿಷ್ಯ

'ಸಿಎಂ ಕುರ್ಚಿ' ಕದನದ ನಡುವೆ ವರದಿಗಾರರ ಪ್ರಶ್ನೆಗೆ ಕೆರಳಿದ ಡಿಕೆಶಿ! ಹೇಳಿದ್ದೇನು?

ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ಸರಣಿ: ನಾಯಕ ಯಾರು? ರಿಷಭ್ ಪಂತ್ ಅಥವಾ ಕೆಎಲ್ ರಾಹುಲ್! ನಾಳೆ ನಿರ್ಧಾರ

"ನಾವೂ ಕಲಿಯಬೇಕು": ಮಾಮ್ದಾನಿ-ಟ್ರಂಪ್ ಭೇಟಿಯ ಬಗ್ಗೆ ತರೂರ್ ಪೋಸ್ಟ್; ನೀವು ಹೇಳಿದ್ದು ಸರಿ ಆದರೆ ರಾಹುಲ್ ಗೆ ಇದೆಲ್ಲಾ ಅರ್ಥ ಆಗತ್ತಾ?: BJP

SCROLL FOR NEXT