ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಪಾಲ್ಗೊಂಡಿದ್ದರು. Kamal Singh. PTI Photo
ದೇಶ

ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆಯಾಗಿ ಸೋನಿಯಾ ಗಾಂಧಿ ಮರು ಆಯ್ಕೆ; ವಿಪಕ್ಷ ನಾಯಕನ ಸ್ಥಾನಕ್ಕೆ ಒಪ್ಪಿಗೆ ಸೂಚಿಸದ ರಾಹುಲ್

ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷರಾಗಿ ಮಾಜಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಶನಿವಾರ ಅವಿರೋಧವಾಗಿ ಮರು ಆಯ್ಕೆಯಾಗಿದ್ದಾರೆ.

ನವದೆಹಲಿ: ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷರಾಗಿ ಮಾಜಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಶನಿವಾರ ಅವಿರೋಧವಾಗಿ ಮರು ಆಯ್ಕೆಯಾಗಿದ್ದಾರೆ.

ಇಂದು ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷರಾಗಿ ಸೋನಿಯಾ ಗಾಂಧಿ ಅವರ ಹೆಸರನ್ನು ಪ್ರಸ್ತಾಪಿಸಿದರು.

ಈ ಪ್ರಸ್ತಾವನೆಯನ್ನು ಗೌರವ್ ಗೊಗೊಯ್, ಕೆ ಸುಧಾಕರನ್ ಮತ್ತು ತಾರಿಕ್ ಅನ್ವರ್ ಅವರು ಅನುಮೋದಿಸಿದ್ದಾರೆ.

77 ವರ್ಷದ ಸೋನಿಯಾ ಗಾಂಧಿ ಅವರು ಫೆಬ್ರವರಿಯಲ್ಲಿ ರಾಜ್ಯಸಭೆಗೆ ಆಯ್ಕೆಯಾದರು. ಇದಕ್ಕೂ ಮೊದಲು, ಕಾಂಗ್ರೆಸ್ ಕಾರ್ಯಕಾರಿ ಸಮಿತಿಯು ರಾಹುಲ್ ಗಾಂಧಿ ಅವರನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಸರ್ವಾನುಮತದಿಂದ ಆಯ್ಕೆ ಮಾಡಿತು. ಆದರೆ ರಾಹುಲ್ ಗಾಂಧಿ ಪ್ರತಿಪಕ್ಷದ ನಾಯಕನ ಸ್ಥಾನಕ್ಕೆ ಇನ್ನೂ ಒಪ್ಪಿಗೆ ಸೂಚಿಸಿಲ್ಲ. ಈ ಬಗ್ಗೆ ಅವರು "ಶೀಘ್ರದಲ್ಲೇ" ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಪಕ್ಷದ ವರಿಷ್ಠರಿಗೆ ತಿಳಿಸಿದ್ದಾರೆ.

ಹಲವಾರು ಕಾಂಗ್ರೆಸ್ ನಾಯಕರು ರಾಹುಲ್ ಗಾಂಧಿ ಅವರಿಗೆ ನೀವು ನಿರ್ಣಾಯಕ ಪಾತ್ರವನ್ನು ವಹಿಸುತ್ತೀರಿ ಮತ್ತು ಅದು ಅಂತಿಮವಾಗಿ ಪಕ್ಷವನ್ನು ಬಲಪಡಿಸುತ್ತದೆ ಎಂದು ಒತ್ತಿಹೇಳುತ್ತಾ ಲೋಕಸಭೆ ಪ್ರತಿಪಕ್ಷ ನಾಯಕನ ಸ್ಥಾನವನ್ನು ಒಪ್ಪಿಕೊಳ್ಳುವಂತೆ ಒತ್ತಾಯಿಸುತ್ತಿದ್ದಾರೆ.

ಇದೇ ವೇಳೆ ಸಾರ್ವತ್ರಿಕ ಚುನಾವಣೆಯಲ್ಲಿ ತಮ್ಮ ಪಕ್ಷದ ಕಾರ್ಯಕರ್ತರ ಪ್ರಯತ್ನವನ್ನು ಶ್ಲಾಘಿಸಿದ ಸೋನಿಯಾ ಗಾಂಧಿ, "ನೀವು ಅತ್ಯಂತ ಸವಾಲಿನ ಸಂದರ್ಭಗಳಲ್ಲಿ ಕಠಿಣ ಚುನಾವಣೆಯನ್ನು ಎದುರಿಸಿದ್ದೀರಿ. ನೀವು ಅನೇಕ ಅಡೆತಡೆಗಳನ್ನು ದಾಟಿ ತುಂಬಾ ಪರಿಣಾಮಕಾರಿಯಾಗಿ ಪ್ರಚಾರ ಮಾಡಿದ್ದೀರಿ. ನಿಮ್ಮ ಯಶಸ್ಸು ನಮಗೆ ಹೆಚ್ಚಿನ ಉಪಸ್ಥಿತಿಯನ್ನು ನೀಡಿದೆ. ಲೋಕಸಭೆ ಮತ್ತು ಅದರ ಕಾರ್ಯವೈಖರಿಯಲ್ಲಿ ಹೆಚ್ಚು ಪರಿಣಾಮಕಾರಿ ಭಾಗವಹಿಸುವಿಕೆಗೆ ಹೆಚ್ಚಿನ ಶಕ್ತಿಯನ್ನು ನೀಡಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಪ್ರತಿಯೊಬ್ಬರಿಗೂ ಕಾರು, ತಿಂಗಳಿಗೆ ₹1 ಲಕ್ಷ ಭತ್ಯೆ': ರಾಜ್ಯದ 234 ಶಾಸಕರಿಗೆ ಭರ್ಜರಿ ಕೊಡುಗೆ ಘೋಷಿಸಿದ ತಮಿಳುನಾಡು CM ವಿಜಯ್!

'BJPಯವನಾದ ಮಾತ್ರಕ್ಕೆ ಮಾಲೀಕರು ಉಚಿತವಾಗಿ ಮನೆ ನೀಡಲಾರರು'; ನಾನು 'leta' or 'beta' ವರ್ಗಕ್ಕೆ ಸೇರಿದವನಲ್ಲ: ಶೆಹಜಾದ್ ಪೂನಾವಾಲಾ

ರಹಸ್ಯವಾಗಿ ಎಂಗೇಜ್ಮೆಂಟ್ ಮಾಡಿಕೊಂಡ್ರಾ ‘ಧುರಂಧರ್’ ನಟಿ? ಡೈಮಂಡ್ ರಿಂಗ್ ಪ್ರದರ್ಶಿಸಿದ ಆಯೇಷಾ; ಫೋಟೋ ವೈರಲ್

"ವಾವ್!! ನನ್ನ ಮಟ್ಟಿಗೆ ಅವರು ಚೆನ್ನಾಗಿ ವಿವರಿಸಿದ್ದಾರೆ": 'ನಾನು ಹೆಮ್ಮೆಯ ಅಂಧಭಕ್ತೆ' ಎಂದ ಬಾಲಿವುಡ್ ನಟಿ ಇಶಾ ಕೊಪ್ಪಿಕರ್'ಗೆ ಕಂಗನಾ ಬೆಂಬಲ

ಬಾಗಲಕೋಟೆ ಬಳಿ ಭೀಕರ ಅಪಘಾತ: ಬೈಕ್‌ಗೆ ಡಿಕ್ಕಿ ಹೊಡೆದು ಖಾಸಗಿ ಬಸ್ ಪಲ್ಟಿ; ಸ್ಥಳದಲ್ಲೇ ಇಬ್ಬರು ಸಾವು