ರಾಜೀವ್ ಚಂದ್ರಶೇಖರ್ PTI
ದೇಶ

'ನನ್ನ 18 ವರ್ಷಗಳ ಸಾರ್ವಜನಿಕ ಸೇವೆ ಹೀಗೆ ಅಂತ್ಯವಾಗುತ್ತೆ ಅಂತ ಭಾವಿಸಿರಲಿಲ್ಲ: ರಾಜೀವ್ ಚಂದ್ರಶೇಖರ್ ಭಾವನಾತ್ಮಕ ಪೋಸ್ಟ್

ಕೇರಳದ ತಿರುವನಂತಪುರಂ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ನಾಯಕ ಶಶಿ ತರೂರ್ ವಿರುದ್ಧ ಸೋತ ಹಿನ್ನಲೆಯಲ್ಲಿ ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಮೋದಿ 3.0 ಸರ್ಕಾರದಲ್ಲಿ ಸ್ಥಾನ ಸಿಕ್ಕಿಲ್ಲ.

ನವದೆಹಲಿ: ಕೇರಳದ ತಿರುವನಂತಪುರಂ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ನಾಯಕ ಶಶಿ ತರೂರ್ ವಿರುದ್ಧ ಸೋತ ಹಿನ್ನಲೆಯಲ್ಲಿ ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಮೋದಿ 3.0 ಸರ್ಕಾರದಲ್ಲಿ ಸ್ಥಾನ ಸಿಕ್ಕಿಲ್ಲ. ಮೋದಿ ಸಂಪುಟದಲ್ಲಿ ಸ್ಥಾನ ಸಿಗದಿರುವ ಬಗ್ಗೆ ರಾಜೀವ್ ಚಂದ್ರಶೇಖರ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ನನ್ನ ರಾಜಕೀಯ ಜೀವನವು ಕಾರ್ಯಕರ್ತನಾಗಿ ಮುಂದುವರಿಯುತ್ತದೆ ಎಂದು ಬರೆದುಕೊಂಡಿದ್ದಾರೆ.

18 ವರ್ಷಗಳ ನಂತರ ಸಂಸದ/ಸಚಿವನಾಗಿ ನನ್ನ ವೃತ್ತಿಜೀವನವು ಕೊನೆಗೊಂಡಿದೆ. ಅನೇಕ ಜನರು ನನ್ನ ಟ್ವೀಟ್ ಅನ್ನು ತಪ್ಪಾಗಿ ಅರ್ಥೈಸಿಕೊಳ್ಳುತ್ತಿದ್ದಾರೆ. ಈ ಪೋಸ್ಟ್ ಮೂಲಕ ನಾನು ಸ್ಪಷ್ಟೀಕರಣವನ್ನು ನೀಡುತ್ತಿದ್ದೇನೆ. ಇಂದು ನನ್ನ 18 ವರ್ಷಗಳ ಸಾರ್ವಜನಿಕ ಸೇವೆ ಕೊನೆಗೊಂಡಿದೆ. ನಾನು ಮೋದಿ ಸರ್ಕಾರ 2.0 ನಲ್ಲಿ 3 ವರ್ಷಗಳ ಕಾಲ ಕೆಲಸ ಮಾಡುವ ಸವಲತ್ತು ಸಿಕ್ಕಿತ್ತು ಎಂದು ಬರೆದಿದ್ದಾರೆ.

ಚುನಾವಣೆಯಲ್ಲಿ ಸೋತ ಅಭ್ಯರ್ಥಿಯಾಗಿ ನನ್ನ 18 ವರ್ಷಗಳ ಸಾರ್ವಜನಿಕ ಸೇವೆಯನ್ನು ಖಂಡಿತವಾಗಿಯೂ ಕೊನೆಗೊಳಿಸಲು ನಾನು ಬಯಸಲಿಲ್ಲ, ಆದರೆ ಅದು ಸಂಭವಿಸಿದೆ. ಇದಕ್ಕೆ ನಾನು ತುಂಬಾ ವಿಷಾದಿಸುತ್ತೇನೆ. ನನ್ನನ್ನು ಬೆಂಬಲಿಸಿದ ಎಲ್ಲರಿಗೂ ಮತ್ತು ವಿಶೇಷವಾಗಿ ಕಳೆದ 3 ವರ್ಷಗಳಲ್ಲಿ ನನಗೆ ಸ್ಫೂರ್ತಿ ಮತ್ತು ಶಕ್ತಿ ತುಂಬಿದ ನನ್ನ ಸಹೋದ್ಯೋಗಿಗಳಿಗೆ ನಾನು ತುಂಬಾ ಧನ್ಯವಾದಗಳು ಎಂದು ಬರೆದಿದ್ದಾರೆ.

ಕೇರಳದ ತಿರುವನಂತಪುರಂ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಾಜೀವ್ ಚಂದ್ರಶೇಖರ್ ಅವರನ್ನು 16,077 ಮತಗಳ ಅಂತರದಿಂದ ಸೋಲಿಸುವ ಮೂಲಕ ಕಾಂಗ್ರೆಸ್ ನ ಶಶಿ ತರೂರ್ ಸತತ ನಾಲ್ಕನೇ ಗೆಲುವು ದಾಖಲಿಸಿದ್ದಾರೆ.

ಕಾಂಗ್ರೆಸ್ ನಾಯಕ ಶಶಿ ತರೂರ್ ಅವರು ಚಂದ್ರಶೇಖರ್ ಅವರ ಪೋಸ್ಟ್‌ಗೆ ಪ್ರತಿಕ್ರಿಯಿಸಿ, "ನಿಮ್ಮ ಸರ್ಕಾರದ ಅವಧಿಯಲ್ಲಿ ನಿಮ್ಮೊಂದಿಗೆ ವಿವಿಧ ವಿಷಯಗಳ ಬಗ್ಗೆ ಚರ್ಚಿಸಿದ ವ್ಯಕ್ತಿಯಾಗಿ, ನೀವು ಸಾರ್ವಜನಿಕ ಸೇವೆಯ ಮೂಲಕ ನಮ್ಮ ದೇಶಕ್ಕೆ ಹೆಚ್ಚಿನ ಕೊಡುಗೆ ನೀಡಿದ್ದೀರಿ ಎಂಬುದರಲ್ಲಿ ನನಗೆ ಸಂದೇಹವಿಲ್ಲ. ಚಂದ್ರಶೇಖರ್ ಜಿ ಚುನಾಯಿತ ಕಛೇರಿಯು ಒಂದೇ ಒಂದು ಮಾರ್ಗವಾಗಿದೆ ಅಷ್ಟೇ. ನಿಮ್ಮ ಭವಿಷ್ಯಕ್ಕಾಗಿ ಎಲ್ಲಾ ಶುಭಾಶಯಗಳು ಎಂದು ಬರೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

20 TMC ನಾಯಕರ ಅನರ್ಹತೆ ಪ್ರಕರಣ: ಅಭಿಷೇಕ್‌ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್‌ ಅಸ್ತು; ಬಂಡಾಯ ಸಂಸದರಿಗೆ Notice ಜಾರಿ..!

"ಕೇಸರಿ ಧರಿಸುವ ಯೋಗ ಗುರು ಸಭ್ಯತೆಯ ಎಲ್ಲಾ ಮಿತಿಗಳನ್ನು ಮೀರಿದ್ದಾರೆ": ಬಾಬಾ ರಾಮ್‌ದೇವ್ ವಿರುದ್ಧ ಕಂಗನಾ ಮತ್ತೆ ಕಿಡಿ

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ