ಸಂಗ್ರಹ ಚಿತ್ರ  
ದೇಶ

'ಬಿಜೆಪಿಯಿಂದ ನನಗೆ ಇಂದು ಅವಕಾಶ ಸಿಕ್ಕಿದೆ, ಕೃಷಿ ಖಾತೆ ಸಿಕ್ಕಿದರೆ ಖುಷಿ': ಹೆಚ್ ಡಿ ಕುಮಾರಸ್ವಾಮಿ

ಇಂದು ಸಂಜೆ ಮೋದಿ-3.0 ಸಂಪುಟದಲ್ಲಿ ಪ್ರಮಾಣ ವಚನ ಸ್ವೀಕರಿಸಲಿರುವ ನೂತನ ಸಚಿವರಲ್ಲಿ ಕರ್ನಾಟಕದ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಕೂಡ ಸೇರಿದ್ದು, ಇದಕ್ಕಾಗಿ ಅವರು ಮೋದಿ ಮತ್ತು ಕರುನಾಡ ಜನತೆಗೆ ಧನ್ಯವಾದ ಹೇಳಿದ್ದಾರೆ.

ನವದೆಹಲಿ: ಇಂದು ಸಂಜೆ ಮೋದಿ-3.0 ಸಂಪುಟದಲ್ಲಿ ಪ್ರಮಾಣ ವಚನ ಸ್ವೀಕರಿಸಲಿರುವ ನೂತನ ಸಚಿವರಲ್ಲಿ ಕರ್ನಾಟಕದ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಕೂಡ ಸೇರಿದ್ದು, ಇದಕ್ಕಾಗಿ ಅವರು ಮೋದಿ ಮತ್ತು ಕರುನಾಡ ಜನತೆಗೆ ಧನ್ಯವಾದ ಹೇಳಿದ್ದಾರೆ.

ಯಾವುದೇ ಖಾತೆಗೆ ಬೇಡಿಕೆ ಇಟ್ಟಿಲ್ಲ ಎಂದಿರುವ ಮಾಜಿ ಮುಖ್ಯಮಂತ್ರಿ, ಕೃಷಿ ಸಚಿವರಾಗುವ ಆಸೆಯನ್ನು ಪುನರುಚ್ಚರಿಸಿದರು.

ನರೇಂದ್ರ ಮೋದಿಯವರ ನೇತೃತ್ವದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಗೃಹ ಸಚಿವ ಅಮಿತ್ ಶಾ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ಚರ್ಚಿಸಿದ ನಂತರ ನಿರ್ಧಾರ ತೆಗೆದುಕೊಳ್ಳಲಾಗಿದೆ, ಅವರು ನನ್ನನ್ನು ಗುರುತಿಸಿ ನನಗೆ ಅವಕಾಶ ನೀಡಿದ್ದಾರೆ. ಸಂಪೂರ್ಣ ಕ್ರೆಡಿಟ್ ಇದು ನನ್ನ ಅಭಿಪ್ರಾಯದಲ್ಲಿ ಕನ್ನಡ ನಾಡಿನ ಜನತೆಗೆ ಹೋಗಬೇಕು ಎಂದರು.

ಸಿಕ್ಕ ಅವಕಾಶವನ್ನು ಬಳಸಿಕೊಂಡು ದೇಶದ ಮತ್ತು ರಾಜ್ಯದ ಜನತೆಗೆ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವುದು ನನ್ನ ಉದ್ದೇಶವಾಗಿದೆ. ನರೇಂದ್ರ ಮೋದಿಯವರ ದೃಷ್ಟಿಕೋನವನ್ನು ಕಾರ್ಯಗತಗೊಳಿಸಲು ನಾನು ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ. ಆ ಮೂಲಕ ಅವರಿಗೆ ಮತ್ತು ನಮ್ಮ ರಾಜ್ಯಕ್ಕೆ ಒಳ್ಳೆಯ ಹೆಸರನ್ನು ತರಲು ಬಯಸುತ್ತೇನೆ. ಇದು ನನ್ನ ಸಂಕಲ್ಪ ಎಂದರು.

ಮಂಡ್ಯ ಲೋಕಸಭಾ ಕ್ಷೇತ್ರವನ್ನು ಗೆಲ್ಲುವ ಮೂಲಕ, ಜೆಡಿಎಎಸ್ ಭದ್ರಕೋಟೆ ಮಂಡ್ಯವನ್ನು ಮರಳಿ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ, ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಮೂಲಕ ಕರ್ನಾಟಕದಲ್ಲಿ ಕಳೆದುಹೋದ ತಮ್ಮ ಪಕ್ಷದ ರಾಜಕೀಯ ಪ್ರಸ್ತುತತೆಯನ್ನು ಮರಳಿ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಕುಮಾರಸ್ವಾಮಿ ಅವರು ಕಾಂಗ್ರೆಸ್‌ನ ಸ್ಟಾರ್ ಚಂದ್ರ ಅವರನ್ನು 2,84,620 ಮತಗಳ ಅಂತರದಿಂದ ಸೋಲಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್‌ನ ಸಾಧನೆ ಮತ್ತು ಅವರ ಗೆಲುವು ಪಕ್ಷಕ್ಕೆ ಪುನರುಜ್ಜೀವನ ಎಂದು ಕುಮಾರಸ್ವಾಮಿ ಪ್ರತಿಪಾದಿಸಿದರು.

ದೇವೇಗೌಡ ಗೈರು: ತಮ್ಮ ತಂದೆ ದೇವೇಗೌಡರಿಗೆ ಅನಾರೋಗ್ಯವಿರುವುದರಿಂದ ಇಂದು ದೆಹಲಿಯಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸುತ್ತಿಲ್ಲ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT