ವಿದ್ಯಾರ್ಥಿಗಳೊಂದಿಗೆ ರಾಹುಲ್ ಗಾಂಧಿ 
ದೇಶ

'ಸಂಸತ್ತಿನಲ್ಲಿ ನಾನು ನಿಮ್ಮ ಧ್ವನಿಯಾಗಿರುತ್ತೇನೆ': NEET ಆಕಾಂಕ್ಷಿಗಳಿಗೆ Rahul Gandhi ಭರವಸೆ

NEET-UG ಪರೀಕ್ಷಾ ವಿವಾದಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿರುವ ಕಾಂಗ್ರೆಸ್ ಸಂಸದ ಹಾಗೂ ವಿಪಕ್ಷ ನಾಯಕ ರಾಹುಲ್ ಗಾಂಧಿ 'ಸಂಸತ್ತಿನಲ್ಲಿ ನಾನು ನಿಮ್ಮ ಧ್ವನಿಯಾಗಿರುತ್ತೇನೆ' ಎಂದು ಭರವಸೆ ನೀಡಿದ್ದಾರೆ.

ನವದೆಹಲಿ: NEET-UG ಪರೀಕ್ಷಾ ವಿವಾದಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿರುವ ಕಾಂಗ್ರೆಸ್ ಸಂಸದ ಹಾಗೂ ವಿಪಕ್ಷ ನಾಯಕ ರಾಹುಲ್ ಗಾಂಧಿ 'ಸಂಸತ್ತಿನಲ್ಲಿ ನಾನು ನಿಮ್ಮ ಧ್ವನಿಯಾಗಿರುತ್ತೇನೆ' ಎಂದು ಭರವಸೆ ನೀಡಿದ್ದಾರೆ.

ನೀಟ್-ಯುಜಿ ಪ್ರವೇಶ ಪರೀಕ್ಷೆ ವಿವಾದ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

''ಮೋದಿಯವರು ನೂತನ ಅವಧಿಗೆ ಅಧಿಕಾರ ಸ್ವೀಕರಿಸುವ ಮುನ್ನವೇ ಪರೀಕ್ಷೆಯಲ್ಲಿನ ಅವ್ಯವಹಾರಗಳು 24 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳನ್ನು ಹತಾಶಗೊಳಿಸಿವೆ. ಸಂಸತ್ತಿನಲ್ಲಿ ನಾನು ನಿಮ್ಮ ಧ್ವನಿಯಾಗುತ್ತೇನೆ ಮತ್ತು ನಿಮ್ಮ ಭವಿಷ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಪ್ರಮುಖವಾಗಿ ಎತ್ತುತ್ತೇನೆ ’ಎಂದು ಅವರು ಟ್ವೀಟ್ ಮಾಡಿದ್ದಾರೆ.

ಅಂತೆಯೇ ಒಂದೇ ಪರೀಕ್ಷಾ ಕೇಂದ್ರದಿಂದ ಆರು ವಿದ್ಯಾರ್ಥಿಗಳು ಗರಿಷ್ಠ ಅಂಕಗಳೊಂದಿಗೆ ಪರೀಕ್ಷೆಯಲ್ಲಿ ಅಗ್ರಸ್ಥಾನ ಪಡೆದಿದ್ದು, ಹಲವರು ತಾಂತ್ರಿಕವಾಗಿ ಸಾಧ್ಯವಿಲ್ಲದ ಅಂಕಗಳನ್ನು ಪಡೆದಿದ್ದಾರೆ. ಆದರೆ ಸರ್ಕಾರವು ಪ್ರಶ್ನೆಪತ್ರಿಕೆ ಸೋರಿಕೆಯನ್ನು ನಿರಂತರವಾಗಿ ನಿರಾಕರಿಸುತ್ತಿದೆ.

ಶಿಕ್ಷಣ ಮಾಫಿಯಾ ಮತ್ತು ಸರ್ಕಾರಿ ಯಂತ್ರದೊಂದಿಗೆ ಶಾಮೀಲಾಗಿ ನಡೆಯುತ್ತಿರುವ ಈ ‘ಪ್ರಶ್ನೆಪತ್ರಿಕೆ ಸೋರಿಕೆ ಉದ್ಯಮ’ವನ್ನು ಎದುರಿಸಲು ಕಾಂಗ್ರೆಸ್ ಸದೃಢ ಯೋಜನೆಯನ್ನು ಹೊಂದಿತ್ತು. ಕಾನೂನು ತರುವ ಮೂಲಕ ವಿದ್ಯಾರ್ಥಿಗಳಿಗೆ ಪ್ರಶ್ನೆಪತ್ರಿಕೆ ಸೋರಿಕೆಯಿಂದ ಮುಕ್ತಿ ನೀಡುವುದಾಗಿ ನಾವು ನಮ್ಮ ಪ್ರಣಾಳಿಕೆಯಲ್ಲಿ ವಾಗ್ದಾನ ಮಾಡಿದ್ದೆವು ಎಂದು ಹೇಳಿದ್ದಾರೆ.

ಯುವಜನರು ಇಂಡಿಯಾ ಮೈತ್ರಿಕೂಟದಲ್ಲಿ ನಂಬಿಕೆ ಇಟ್ಟಿದ್ದಾರೆ. ಇದು ಹಾಲಿ ಚುನಾವಣೆಯಲ್ಲಿ ಸ್ಪಷ್ಟವಾಗಿದೆ. ಅವರ ಧ್ವನಿಗಳನ್ನು ದಮನಿಸಲು ನಾವು ಅವಕಾಶ ನೀಡುವುದಿಲ್ಲ ಎಂದೂ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT