ಪಂಕಜಾ ಮುಂಡೆ-ಸಚಿನ್ ಕೊಂಡಿಬಾ 
ದೇಶ

BJPಯ ಪಂಕಜಾ ಮುಂಡೆ ಸೋತರೆ ಆತ್ಮಹತ್ಯೆ ಮಾಡಿಕೊಳ್ಳೋದಾಗಿ ಹೇಳಿದ್ದ ವ್ಯಕ್ತಿ ಬಸ್ ಚಕ್ರಕ್ಕೆ ಸಿಲುಕಿ ಸಾವು!

ಮಹಾರಾಷ್ಟ್ರದ ಲಾತೂರ್‌ನಲ್ಲಿ ಟ್ರಕ್ ಚಾಲಕನೊಬ್ಬ ಬಸ್‌ನಡಿ ಸಿಲುಕಿ ಸಾವನ್ನಪ್ಪಿದ್ದಾನೆ. ಇದು ಆತ್ಮಹತ್ಯೆ ಪ್ರಕರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಮಹಾರಾಷ್ಟ್ರದ ಲಾತೂರ್‌ನಲ್ಲಿ ಟ್ರಕ್ ಚಾಲಕನೊಬ್ಬ ಬಸ್‌ನಡಿ ಸಿಲುಕಿ ಸಾವನ್ನಪ್ಪಿದ್ದಾನೆ. ಇದು ಆತ್ಮಹತ್ಯೆ ಪ್ರಕರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಬಿಜೆಪಿ ನಾಯಕಿ ಪಂಕಜಾ ಮುಂಡೆ ಲೋಕಸಭೆ ಚುನಾವಣೆಯಲ್ಲಿ ಬೀಡ್ ನಿಂದ ಸೋತರೆ ಪ್ರಾಣ ತ್ಯಾಗ ಮಾಡುವುದಾಗಿ ವಿಡಿಯೋ ಮಾಡಿದ್ದನು.

ಅಧಿಕಾರಿಗಳ ಪ್ರಕಾರ, ಶುಕ್ರವಾರ ರಾತ್ರಿ 9 ಗಂಟೆ ಸುಮಾರಿಗೆ ಬೋರ್ಗಾಂವ್ ಪಾಟಿ ಬಳಿಯ ಅಹ್ಮದ್‌ಪುರ-ಅಂಧೋರಿ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಮೃತರನ್ನು ಲಾತೂರ್‌ನ ಅಹಮದ್‌ಪುರದ ಯೆಸ್ಟಾರ್ ನಿವಾಸಿ ಸಚಿನ್ ಕೊಂಡಿಬಾ ಮುಂಡೆ (38) ಎಂದು ಗುರುತಿಸಲಾಗಿದೆ. ಅಪಘಾತಕ್ಕೆ ಸಂಬಂಧಿಸಿದಂತೆ ಬಸ್ ಚಾಲಕನನ್ನು ಬಂಧಿಸಲಾಗಿದೆ. ಇದು ಅಪಘಾತವೇ ಅಥವಾ ಆತ್ಮಹತ್ಯೆಯೇ ಎಂಬ ಬಗ್ಗೆ ತನಿಖೆ ಮುಂದುವರಿದಿದೆ.

ತನಿಖೆಯ ಭಾಗವಾಗಿ ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕಿಂಗಾವ್ ಪೊಲೀಸ್ ಠಾಣೆಯ ಸಹಾಯಕ ಇನ್ಸ್‌ಪೆಕ್ಟರ್ ಬಹುಸಾಹೇಬ್ ಖಂಡಾರೆ ತಿಳಿಸಿದ್ದಾರೆ. ಸಚಿನ್ ಅವಿವಾಹಿತನಾಗಿದ್ದು, ತಂದೆ-ತಾಯಿ ಹಾಗೂ ಸಹೋದರನೊಂದಿಗೆ ವಾಸವಿದ್ದನು. ಸಚಿನ್ ಪಂಕಜಾ ಮುಂಡೆ ಚುನಾವಣೆಯಲ್ಲಿ ಸೋತರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದು ಈ ವಿಡಿಯೋ ವೈರಲ್ ಆಗಿತ್ತು.

ಬೀಡ್ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್‌ನ ಬಜರಂಗ್ ಸೋನಾವಾನೆ ವಿರುದ್ಧ ಪಂಕಜಾ ಮುಂಡೆ 6,553 ಮತಗಳಿಂದ ತೀವ್ರ ಪೈಪೋಟಿಯಲ್ಲಿ ಸೋತಿದ್ದರು. ಪ್ರಾಸಂಗಿಕವಾಗಿ, ಚುನಾವಣಾ ಆಯೋಗವು ಜೂನ್ 5 ರಂದು ಬೀಡ್ ಚುನಾವಣೆಯ ಅಂತಿಮ ಫಲಿತಾಂಶವನ್ನು ಬಿಡುಗಡೆ ಮಾಡಿತ್ತು. ಚುನಾವಣಾ ಫಲಿತಾಂಶದ ನಂತರ ಸಚಿನ್ ಬೇಸರಗೊಂಡು ಮೌನವಾಗಿದ್ದನು ಎಂದು ಸಚಿನ್ ಅವರ ಕುಟುಂಬ ಸದಸ್ಯರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ನಲ್ಲಿ 2 ವಾರ ಪೂರೈಸಿದ ಪ್ರತಿಭಟನೆ: ಸರ್ಕಾರಿ ಕಟ್ಟಡಗಳಿಗೆ ಬೆಂಕಿ, ಪ್ರತಿಭಟನಾಕಾರರಿಗೆ 'ಮರಣ ದಂಡನೆ' ಬೆದರಿಕೆ!

"Surely It's Time": ಕೊಹ್ಲಿ ನಿವೃತ್ತಿ ಬಗ್ಗೆ ದೊಡ್ಡ ಸಂದೇಶ ರವಾನಿಸಿದ ಉತ್ತಪ್ಪ!

'ಮನ್ರೇಗಾ ಬಚಾವೋ' ಸಂಗ್ರಾಮ: ಕಾಂಗ್ರೆಸ್ ಪಕ್ಷದಿಂದ ದೇಶಾದ್ಯಂತ 45 ದಿನಗಳ ಹೋರಾಟ ಆರಂಭ!

ಮಹಾರಾಷ್ಟ್ರದಲ್ಲಿ ಸಿಎಂ, ಡಿಸಿಎಂ ಮುಸುಕಿನ ಗುದ್ದಾಟ: ಅಜಿತ್ ಪವಾರ್ ವಿರುದ್ಧ ಫಡ್ನವೀಸ್ ಕಿಡಿ!

ಭಾಷಾ ಮಸೂದೆ ವಿರೋಧಿಸಿ ಸಿದ್ದರಾಮಯ್ಯ ಪತ್ರ: ಕೇರಳ ಸಿಎಂ ಸ್ಪಷ್ಟೀಕರಣ; ಪಿಣರಾಯಿ ವಿಜಯನ್ ಹೇಳಿದ್ದೇನು?

SCROLL FOR NEXT